- ಪ್ರತಿಭಟನೆ ಆಯೋಜನೆ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಕರಿಬಸಪ್ಪಗೌಡ
- ಆ.21ರಂದು ರೈತ ಸಂಘ, ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ
- ಸಿಎಂ ಡಿ.ಕೆ.ಶಿವಕುಮಾರ್, ಸಚಿವ ಯು.ಟಿ. ಖಾದರ್ ಹೇಳಿಕೆಗಳಿಂದ ಗೊಂದಲ- ರಾಜ್ಯ ಸರ್ಕಾರದಲ್ಲಿ ಯಾರು ಸಿಎಂ ಎಂಬುದೇ ಗೊತ್ತಾಗುತ್ತಿಲ್ಲ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಆ.21ರ ಶುಕ್ರವಾರ ಗುಟ್ಕಾ ನಿಷೇಧ ಹಿಂಪಡೆಯುವಂತೆ ಆಗ್ರಹಿಸಿ ಹೊನ್ನಾಳಿ ಪಟ್ಟಣದಲ್ಲಿ ಅವಳಿ ತಾಲೂಕುಗಳ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಬಗ್ಗೆ ಬುಧವಾರ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ಹೇಳಿಕೆಯಿಂದ ಅಡಕೆ ದರ ಕುಸಿತ ಕಂಡಿದೆ. ಹೀಗೆ ಇನ್ನೊಂದು ವಾರ ಅಡಕೆ ದರ ಕುಸಿತ ಕಂಡರೆ ಕಾಂಗ್ರೆಸ್ ಸರ್ಕಾರವನ್ನು ಜನತೆ ಮನೆಗೆ ಕಳುಹಿಸಲಿದ್ದಾರೆ. ಇದು ಖಚಿತ. ಮೊದಲು ಸರ್ಕಾರ ಎಚ್ಚೆತ್ತುಕೊಂಡು ತಂಬಾಕು ನಿಷೇಧ ಮಾಡಿ, ಗುಟ್ಕಾ ನಿಷೇಧವನ್ನು ಹಿಂಪಡೆಯಬೇಕು. ಅವಳಿ ತಾಲೂಕಿನಲ್ಲಿ ಅಂದಾಜು 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಸರಿಯಾಗಿ ಮಳೆ ಬಾರದೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಅಡಕೆ ಬೆಳೆಗಾರರಿಗೆ ರಾಜ್ಯ ಸರ್ಕಾರ ಗಾಯದ ಮೇಲೆ ಬರೆ ಎಳೆಯಲು ಹೊರಟಿದೆ ಎಂದು ಟೀಕಿಸಿದರು.
ಗುಟ್ಕಾ ನಿಷೇಧವನ್ನು ಹಿಂಪಡೆಯದ ರಾಜ್ಯ ಸರ್ಕಾರದ ವಿರುದ್ಧ ಆ.21ರಂದು ಹೊನ್ನಾಳಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಗೆ ಅವಳಿ ತಾಲೂಕಿನಿಂದ ಪಕ್ಷಾತೀತವಾಗಿ ಅಡಕೆ ಬೆಳೆಗಾರರು ಆಗಮಿಸಲಿದ್ದಾರೆ ಎಂದು ವಿವರಿಸಿದರು.
ಕೇಂದ್ರ ಸರ್ಕಾರ ಕಾರ್ಪೋರೇಟ್ ವಲಯಕ್ಕೆ ರೆಡ್ಕಾರ್ಪೆಟ್ ಹಾಕಿ, ರೈತರಿಗೆ ಮೋಸ ಮಾಡುತ್ತಿದೆ. ಇದನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮಾಡಲು ದೆಹಲಿಗೆ ಹೋಗುತ್ತಿರುವ ರೈತರನ್ನು ರಸ್ತೆಯಲ್ಲಿಯೇ ತಡೆಯುತ್ತಿದ್ದಾರೆ. ಅಲ್ಲಲ್ಲಿ ತಡೆಗೋಡೆ ಹಾಗೂ ತಂತಿಬೇಲಿಗಳನ್ನು ನಿರ್ಮಿಸಿ ರೈತರು ಮುಂದಕ್ಕೆ ಹೋಗದಂತೆ ಮಾಡುತ್ತಿದ್ದಾರೆ. ಈ ನಡೆ ಖಂಡಿಸಿ ಅಂದು ಕೇಂದ್ರ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಲ್ಲಿದ್ದೇವೆ. ರೈತರ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚೆಲ್ಲಾಟ ಆಡುತ್ತಿದೆ. ರೈತರನ್ನು ಗೊಂದಲಕ್ಕೆ ನೂಕುತ್ತಿರುವುದನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರತಿಕೃತಿ ದಹಿಸಲಾಗುವುದು ಎಂದು ಕರಿಬಸಪ್ಪಗೌಡ ಹೇಳಿದರು.ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಸಿ.ಬಸಪ್ಪ ಮಾತನಾಡಿ, ಗುಟ್ಕಾ ನಿಷೇಧ ಎಂಬ ಹೇಳಿಕೆ ರಾಜ್ಯ ಸರ್ಕಾರದಿಂದ ಬಿಡುಗಡೆ ಆದ ಕೂಡಲೇ ರೈತರು ತೀವ್ರ ಆತಂಕಕ್ಕೆ ಈಡಾಗಿದ್ದಾರೆ. ಸರ್ಕಾರದ ಈ ನಡೆಯಿಂದ ನಾವುಗಳು ಎಲ್ಲಿ ಬೀದಿಗೆ ಬೀಳುತ್ತೆವೋ ಎಂದು ಜನತೆ ಆತಂಕದಲ್ಲಿದ್ದಾರೆ. ಈಗಲಾದರೂ ರಾಜ್ಯ ಸರ್ಕರ ಎಚ್ಚೆತ್ತು ಅಡಕೆ ಬೆಳೆಗಾರರಲ್ಲಿ ಮೂಡಿರುವ ಆಂತಕಗಳನ್ನು ದೂರ ಮಾಡುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
- - -
-19ಎಚ್.ಎಲ್.ಐ2: ಸಭೆಯಲ್ಲಿ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಎಂ.ಪಿ,ಕರಿಬಸಪ್ಪಗೌಡ ಮಾತನಾಡಿದರು.