ಕನ್ನಡಪ್ರಭ ವಾರ್ತೆ ಪಾವಗಡ
ಸ್ನೇಹಿತರಾದ ಭಾರ್ಗವ್, ನರಸಿಂಹ, ಹರಿಕುಮಾರ್ ಹಾಗೂ ನರಸಿಂಹಮೂರ್ತಿ ನಡುವೆ ಯಾವುದೋ ವಿಷಯಕ್ಕೆ ಮಾತಿನ ಚಕಮಕಿ ನಡೆದಿದೆ. ಆಗ ನರಸಿಂಹ, ಹರಿಕುಮಾರ್ ಮತ್ತು ನರಸಿಂಹಮೂರ್ತಿ ಸೇರಿ ಭಾರ್ಗವ್ ಮೇಲೆ ಹಲ್ಲೆ ನಡೆಸಿ ಕುತ್ತಿಗೆ ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಭಾರ್ಗವ್ ಸಹಾಯಕ್ಕೆ ಕೂಗಿಕೊಂಡ ಪರಿಣಾಮ ಸ್ಥಳೀಯರು ಜಗಳ ಬಿಡಿಸಿ ಗಾಯಗೊಂಡಿದ್ದ ಭಾರ್ಗವ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.