ಕನ್ನಡಪ್ರಭ ವಾರ್ತೆ ಕನಕಪುರ
ಸಾತನೂರು ಹೋಬಳಿಯ ಸೂರನಹಳ್ಳಿ ಗ್ರಾಮದ ಬಿಜೆಪಿ ಮುಖಂಡ ಚಲುವರಾಮು ಬಂಧಿತ ಆರೋಪಿ. ತಲೆ ಮರೆಸಿಕೊಂಡಿರುವ ಎರಡನೇ ಆರೋಪಿ ಬೊಮ್ಮನಹಳ್ಳಿ ಪುಟ್ಟಮ್ಮನವರ ಮಗ ರವಿ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಮಹಿಳೆಗೆ ಜಮೀನಿನ ಮೇಲೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ರಾಮಗಡ್ ಹೋಟೆಲ್ ನಲ್ಲಿ ಕೃತ್ಯವೆಸಗಿದ್ದಾನೆ ಎಂದು ಸಂತ್ರಸ್ತ ಮಹಿಳೆಯ ಆರೋಪವಾಗಿದೆ.ಸಂತ್ರಸ್ತ ಮಹಿಳೆಯ ದೂರದ ಸಂಬಂಧಿಯ ಮೂಲಕ ಆರೋಪಿ ಸೂರನಹಳ್ಳಿ ಚೆಲುವರಾಮು ಹಾಗೂ ಬೊಮ್ಮನಹಳ್ಳಿ ಪುಟ್ಟಮ್ಮನವರ ಮಗ ರವಿ ಎಂಬುವರು ಪರಿಚಯವಾಗಿ ನಾವು ಬಿಜೆಪಿ ಮುಖಂಡರು, ನಮಗೆ ಎಲ್ಲ ರಾಜಕಾರಣಿಗಳ ಸಂಪರ್ಕ ಇದೆ ಎಂದು ನನ್ನನ್ನು ನಂಬಿಸಿ, ದಾಖಲೆಗಳನ್ನು ಕೇಳುವ ನೆಪದಲ್ಲಿ ಮನೆಗೆ ಬಂದು ಹೋಗುತ್ತಿದ್ದರು. ಸಾತನೂರು, ಕನಕಪುರ, ರಾಮನಗರ ಕಚೇರಿಗಳಲ್ಲಿ ದಾಖಲಾತಿ ಪಡೆದುಕೊಳ್ಳಬೇಕು ಎಂದು ಕರೆಸಿಕೊಂಡು ಸಾಲ ಕೊಡಿಸುವುದಾಗಿ ಅಲೆದಾಡಿಸಿದ್ದರು ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.
ಆ ನಂತರ ಚಲುವರಾಮು ಹಾಗೂ ರವಿ ಇಬ್ಬರೂ ನನಗೆ ಕರೆ ಮಾಡಿ ನಿನ್ನ ಖಾಸಗಿ ವಿಡಿಯೋಗಳು ನಮ್ಮ ಬಳಿ ಇವೆ. ನಾನು ಹೇಳಿದಾಗಲೆಲ್ಲ ಬರಬೇಕು. ಇಲ್ಲದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಕೆ ಹಾಕಿದರು ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಸಾತನೂರು ಪೊಲೀಸರು ಚಲುವರಾಮು ಎಂಬ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.