ಹೊನ್ನಾಳಿ: ಮನೆಯಲ್ಲಿ ಕಳವು ನಡೆಸಿದ್ದ ಮೂವರ ಬಂಧನ

KannadaprabhaNewsNetwork |  
Published : Jan 02, 2025, 12:30 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಹೊನ್ನಾಳಿಯ ದೊಡ್ಡಿ ರಸ್ತೆಯಲ್ಲಿ ಡಿ.30ರಂದು ಮನೆ ಬೀಗ ಮುರಿದು, ಸುಮಾರು ₹8.46 ಲಕ್ಷ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿದ್ದ ಕಳ್ಳರು ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹೊನ್ನಾಳಿಯ ದೊಡ್ಡಿ ರಸ್ತೆಯಲ್ಲಿ ಡಿ.30ರಂದು ಮನೆ ಬೀಗ ಮುರಿದು, ಸುಮಾರು ₹8.46 ಲಕ್ಷ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿದ್ದ ಕಳ್ಳರು ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮಹಮದ್ ರಫೀಕ್ (31), ಮಹೇಶ್ (32), ಎಸ್.ಕೆ.ಶಕ್ಷಾವಲಿ (23) ಬಂಧಿತ ಆರೋಪಿಗಳು. ಈ ಆರೋಪಿತರು ಹರಿಹರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 1 ಬೈಕ್ ಕಳವು ಪ್ರಕರಣ ಸೇರಿದಂತೆ ಒಟ್ಟು 3 ಪಕ್ರರಣಗಳಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ.

ಮನೆಯಲ್ಲಿ ಕಳವು ನಡೆದಿದ್ದ ಬಗ್ಗೆ ಮಾಲೀಕರಾದ ಮಂಜುಳಾ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಂಧಿತರಿಂದ ₹.8717 ನಗದು, ಅಂದಾಜು ₹5.70ಲಕ್ಷ ಮೌಲ್ಯದ 106.9 ಗ್ರಾಂ ಚಿನ್ನಾಭರಣಗಳು, ಬೈಕ್ ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಹೊನ್ನಾಳಿ ಪೊಲೀಸ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್ ಎಚ್. ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ