ಕನ್ನಡಪ್ರಭ ವಾರ್ತೆ ಬೆಂಗಳೂರು
ಎಚ್ಎಎಲ್ ರೆಡ್ಡಿ ಪಾಳ್ಯದ ಮೊಹಮದ್ ಫಾರೂಕ್ ಅಲಿಯಾಸ್ ಡುಮ್ಮಿ(32) ಮತ್ತು ಶೇಕ್ ಷರೀಫ್(27) ಬಂಧಿತರು. ಇತ್ತೀಚೆಗೆ ಜಯನಗರ ಠಾಣೆ ಪೊಲೀಸರ ತಂಡ ಪ್ರಕರಣವೊಂದರ ಸಂಬಂಧ ಕುಮಾರಸ್ವಾಮಿ ಲೇಔಟ್ನಲ್ಲಿ ಆರೋಪಿಗಾಗಿ ಹುಡುಕಾಡುವಾಗ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಇಬ್ಬರೂ ಎಚ್ಎಎಲ್ ಪೊಲೀಸ್ ಠಾಣೆ ರೌಡಿ ಶೀಟರ್ಗಳು ಎಂಬುದು ಗೊತ್ತಾಗಿದೆ.
ರೌಡಿ ಮೊಹಮದ್ ಫಾರೂಕ್ ವಿರುದ್ಧ ಎಚ್ಎಎಲ್ ಠಾಣೆಯಲ್ಲಿ ಮೂರು ಕೊಲೆ, ಕೊಲೆಗೆ ಯತ್ನ ಪ್ರಕರಣಗಳು ದಾಖಲಾಗಿವೆ. ರೌಡಿ ಶೇಕ್ ಷರೀಫ್ ವಿರುದ್ಧ ಎಚ್ಎಎಲ್ ಠಾಣೆಯಲ್ಲಿ ಎರಡು ಕೊಲೆ ಮತ್ತು ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿವೆ. ಈತ ಎನ್ಡಿಪಿಎಸ್ ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವುದು ತಿಳಿದು ಬಂದಿದೆ. ಹೀಗಾಗಿ ಇಬ್ಬರು ರೌಡಿಗಳನ್ನು ಎಚ್ಎಎಲ್ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊಲೆ ಯತ್ನ ಆರೋಪಿ ಬಾರ್ನಲ್ಲಿ ಸಿಕ್ಕಿಬಿದ್ದ
ಕೊಲೆಗೆ ಯತ್ನ ಪ್ರಕರಣವೊಂದರಲ್ಲಿ ಭಾಗಿಯಾಗಿ ಕಳೆದ ಎರಡು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈತ ನ್ಯಾಯಾಲದ ವಿಚಾರಣೆಗೆ ಹಾಜರಾಗದೆ ಎರಡು ವರ್ಷದಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯವು ಹಲವು ಬಾರಿ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿ ಹೊಸಕೋಟೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಲೆಗೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೆಂಪೇಗೌಡನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕೆ ಪೊಲೀಸರ ವಿಶೇಷ ತಂಡವೊಂದನ್ನು ರಚಿಸಲಾಗಿತ್ತು. ಈ ತಂಡವು ಆರೋಪಿ ಸೂರಿ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯನ್ನು ನ್ಯಾಯಾಲಯದ ಸೂಚನೆ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.