ಇಬ್ಬರು ಕಳ್ಳರ ಬಂಧನ: ₹90 ಸಾವಿರ ಮೌಲ್ಯದ ಸ್ವತ್ತು ವಶ

KannadaprabhaNewsNetwork |  
Published : Jun 15, 2024, 01:01 AM IST
(-ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಮನೆಗಳಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ‍‍ಆರೋಪಿಗಳನ್ನು ಬಂಧಿಸಿ, ಚಿನ್ನದ ಗಟ್ಟಿ, 395 ಗ್ರಾಂ ಒಡವೆ, ಹಿತ್ತಾಳೆ ಹಂಡೇವು ಸೇರಿದಂತೆ ₹90 ಸಾವಿರ ಮೌಲ್ಯದ ಸ್ವತ್ತನ್ನು ಗಾಂಧಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆಯ ಲಂಬು ದಾದು ಹಾಗೂ ಹುಸೇನಿ ಬಂಧಿತರು.

ಕನ್ನಡಪ್ರಭ ವಾರ್ತೆ, ದಾವಣಗೆರೆ

ಮನೆಗಳಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ‍‍ಆರೋಪಿಗಳನ್ನು ಬಂಧಿಸಿ, ಚಿನ್ನದ ಗಟ್ಟಿ, 395 ಗ್ರಾಂ ಒಡವೆ, ಹಿತ್ತಾಳೆ ಹಂಡೇವು ಸೇರಿದಂತೆ ₹90 ಸಾವಿರ ಮೌಲ್ಯದ ಸ್ವತ್ತನ್ನು ಗಾಂಧಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆಯ ಲಂಬು ದಾದು ಹಾಗೂ ಹುಸೇನಿ ಬಂಧಿತರು. ಸಿದ್ದರಾಮೇಶ್ವರ ಬಡಾವಣೆಯ ಬಟ್ಟಿ ಲೇಔಟ್‌ನ ಸುಧಾ ಎಂಬುವರ ಮನೆಯಲ್ಲಿ ಜೂ.7ರಂದು ರಾತ್ರಿ 15 ಗ್ರಾಂ ಚಿನ್ನಹಾಗೂ 450 ಗ್ರಾಂ ಬೆಳ್ಳಿ ಒಡವೆ ಕಳವು ಮಾಡಿರುವ ಬಗ್ಗೆ ಗಾಂಧಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಎಎಸ್‌ಪಿಗಳಾದ ವಿಜಯಕುಮಾರ ಎಂ. ಸಂತೋಷ, ಜಿ.ಮಂಜುನಾಥ, ನಗರ ಡಿವೈಎಸ್‌ಪಿ ಮಲ್ಲೇಶ ದೊಡ್ಡಮನಿ, ಗಾಂಧಿ ನಗರ ವೃತ್ತ ನಿರೀಕ್ಷಕ ಟಿ.ಆರ್. ನಹೀಂ ಅಹಮ್ಮದ್ ಮಾರ್ಗದರ್ಶನದಲ್ಲಿ ಎಸ್ಐ ಆರ್‌.ಜೆ. ಹಿರೇಮಠ ನೇತೃತ್ವದಲ್ಲಿ ಸಿಬ್ಬಂದಿ ಒಳಗೊಂಡ ತಂಡ ಲಂಬು ದಾದು ಹಾಗೂ ಹುಸೇನಿಯನ್ನು ಬಂಧಿಸಿ, 8 ಗ್ರಾಂ 260 ಮಿಲಿ ಗ್ರಾಂ ಚಿನ್ನದ ಗಟ್ಟಿ, 395 ಗ್ರಾಂ ಬೆಳ್ಳಿಯ ಒಡವೆ ಹಾಗೂ 5 ಸಾವಿರ ಮೌಲ್ಯದ ಹಿತ್ತಾಳೆಯ ಹಂಡೇವು ಸೇರಿದಂತೆ 90 ಸಾವಿರ ಮೌಲ್ಯದ ಸ್ವತ್ತು ಜಪ್ತಿ ಮಾಡಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರ ಪೈಕಿ ಲಂಬು ದಾದು ಜಗಳೂರು, ವಿದ್ಯಾ ನಗರ, ಆಜಾದ್ ನಗರ, ಇತರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿದ್ದು ನ್ಯಾಯಾಂಗ ಬಂಧನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.

ಗಾಂಧಿ ನಗರ ಪಿಎಸ್‌ಐ ಆರ್.ಜೆ. ಹಿರೇಮಠ ನೇತೃತ್ವದಲ್ಲಿ ಎಎಸ್‌ಐ ಮಹಮ್ಮದ್ ಖಾನ್‌, ಮಾರುತಿ, ಖಾಜಾ ಹುಸೇನಿ ಅತ್ತಾರ್, ಷಫೀವುಲ್ಲಾ ಸಿದ್ಧಿಕ್ ಅಲಿ, ಬತ್ತೇರ ಮಾರುತಿ, ಎಲ್‌.ಗಿರಿಧರ, ಲಕ್ಷ್ಮೀದೇವಿ, ಹನುಮಂತಪ್ಪ, ಎಸ್‌ಪಿ ಕಚೇರಿಯ ನಿರೀಕ್ಷಕ ಇಸ್ಮಾಯಿಲ್‌ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸಿದೆ ಎಂದು ಎಸ್‌ಪಿ ಉಮಾ ಪ್ರಶಾಂತ ತಿಳಿಸಿದ್ದಾರೆ.

- - - (-ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಸಿನಿಮಾಗಳ ನಿರ್ಮಾಣ ಅರ್ಧಕ್ಕರ್ಧ ಕುಸಿತ!
ಎಸ್ಸೆಸ್ಸೆಲ್ಸಿ: ಎಸ್‌ಬಿಆರ್‌ನ ಇಬ್ಬರು 4ನೇ ರ್‍ಯಾಂಕ್