ಕಮಲನಗರ:
ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಉತ್ತಮ ಸುತಾರ ಮಾತನಾಡಿ, ರಾಜ್ಯದಲ್ಲಿ ಮಹಾತ್ಮರ, ದೇಶಭಕ್ತರ ಮತ್ತು ಮಹಾನ್ ನಾಯಕರ ಪ್ರತಿಮೆಗಳಿಗೆ ಕಿಡಿಗೇಡಿಗಳು ಅವಮಾನಿಸುವ ಘಟನೆಗಳು ಆಗಾಗ ನಡೆಯುತ್ತಿವೆ. ಯಾರೇ ಆಗಲಿ ಯಾವುದೇ ಮಹಾತ್ಮರ, ದಾರ್ಶನಿಕರ ಹಾಗೂ ಧರ್ಮಗಳ ವಿರುದ್ಧ ಹೇಳಿಕೆಗಳನ್ನು ನೀಡುವವರಿಗೆ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದರು.
ಪ್ರವೀಣ ಕದಮ ಮಾತನಾಡಿ, ಕಲಬುರಗಿ ಜಿಲ್ಲೆಯ ಕೋಟನೂರ(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ, ಅವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.ಪಟ್ಟಣದ ಅಲ್ಲಮಪ್ರಭು ವೃತ್ತದಿಂದ ತಹಸೀಲ್ದಾರ್ ಕಾರ್ಯಾಲಯದ ವರೆಗೆ ಬೃಹತ ಪ್ರತಿಭಟನಾ ರ್ಯಾಲಿ ನಡೆಯಿತು. ಮೆರವಣಿಗೆಯು ಸೋನಾಳ ಮುಖ್ಯ ರಸ್ತೆ, ಪೊಲೀಸ್ ಠಾಣೆ, ಅತಿಥಿ ಗೃಹ, ಡಾ. ಚನ್ನಬಸವ ಪಟ್ಟದ್ದೇವರ ಸ್ಮಾರಕ ಭವನದಿಂದ ಸಾಗಿ ತಹಸೀಲ್ದಾರ್ ಕಚೇರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅಮೀತಕುಮಾರ ಕುಲಕರ್ಣಿ ಅವರಿಗೆ ಸಲ್ಲಿಸಿದರು.