ಎರಡನೇ ಮದುವೆ ವೇಳೆ ಮೊದಲನೇ ಪತ್ನಿ ಆಗಮನ

KannadaprabhaNewsNetwork |  
Published : Aug 22, 2024, 12:55 AM IST
ಸಿಕೆಬಿ-2 ಪೋಲಿಸ್ ಠಾಣೆ ಮೆಟ್ಟಿಲೇರಿರುವ ರಶ್ಮಿ ಹಾಗೂ ನೋಹನ್ ಕಾಂತ್ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರನೂರಾರು ಮಂದಿ ಸಂಬಂಧಿಕರು ನೆರೆದು ಸಡಗರ- ಸಂಭ್ರಮದಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಆದರೆ, ಅಲ್ಲಿಗೆ ಆಗಮಿಸಿದ ಮೊದಲನೇ ಪತ್ನಿ ಮತ್ತು ಆಕೆಯ ಸಹೋದರಿ ಹಾಗೂ ಸಂಬಂಧಿಕರರೊಂದಿಗೆ ಮದುವೆ ಮನೆಯಲ್ಲಿ ಗಲಾಟೆ ನಡೆಸಿದ್ದು, ಎರಡೂ ಕಡೆಯವರಿಂದ ಗಲಾಟೆ ನಡೆದು ಕೈ ಕೈ ಮಿಲಾಯಿಸಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ.

ವಿಚ್ಛೇದನ ನೀಡದೇ ನೋಹನ್ ಕಾಂತ್ ಎರಡನೇ ಮದುವೆ । ತನಗೆ ನ್ಯಾಯ ಕೊಡಿಸುವಂತೆ ಮೊದಲ ಪತ್ನಿ ಆಗ್ರಹ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ನೂರಾರು ಮಂದಿ ಸಂಬಂಧಿಕರು ನೆರೆದು ಸಡಗರ- ಸಂಭ್ರಮದಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಆದರೆ, ಅಲ್ಲಿಗೆ ಆಗಮಿಸಿದ ಮೊದಲನೇ ಪತ್ನಿ ಮತ್ತು ಆಕೆಯ ಸಹೋದರಿ ಹಾಗೂ ಸಂಬಂಧಿಕರರೊಂದಿಗೆ ಮದುವೆ ಮನೆಯಲ್ಲಿ ಗಲಾಟೆ ನಡೆಸಿದ್ದು, ಎರಡೂ ಕಡೆಯವರಿಂದ ಗಲಾಟೆ ನಡೆದು ಕೈ ಕೈ ಮಿಲಾಯಿಸಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ.

ಬುಧವಾರ ನಗರದ ಸಿಎಸ್‌ಐ ಚರ್ಚ್ ನಲ್ಲಿ ನಗರದ ನಿವಾಸಿಗಳಾದ ನೋಹನ್ ಕಾಂತ್ ಹಾಗೂ ಗ್ಲೋರಿ ಎಂಬಾಕೆಯ ವಿವಾಹ ನಡೆದಿತ್ತು. ಎಲ್ಲ ಸಂಬಂಧಿಕರು ಸಡಗರ ಸಂಭ್ರಮದಿಂದ ಮದುವೆಯಲ್ಲಿ ಭಾಗವಹಿಸಿ, ನೂತನ ವಧು ವರರಿಗೆ ಆಶೀರ್ವಾದ ಮಾಡಿ ಚರ್ಚ್ ನ ಫಾದರ್ ಸಮ್ಮುಖದಲ್ಲಿ ಅಂತಿಮ ಹಂತದ ಮದುವೆ ಪ್ರಕ್ರಿಯೆಗಳನ್ನು ನಡೆಸುತ್ತಿದ್ದರು. ಅಷ್ಟರಲ್ಲೇ ಮದುವೆ ವಿಷಯ ತಿಳಿದ ಮೊದಲನೇ ಪತ್ನಿ ರಶ್ಮಿ ಮದುವೆ ಮನೆಗೆ ನುಗ್ಗಿ ರಂಪಾಟ ಮಾಡಿದರು. ಗಂಡ ನೋಹನ್ ಕಾಂತ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಎರಡು ಕಡೆಯವರು ಪರಸ್ಪರ ತಳ್ಳಾಟ, ನೂಕಾಟ ನಡೆಸಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರು.

ಮೊದಲ ಪತ್ನಿ ರಶ್ಮಿ ನನ್ನ ಗಂಡ ನನಗೆ ಡೈವೋರ್ಸ್ ಕೊಡದೆ ಎರಡನೇ ಮದುವೆಯಾಗುತ್ತಿದ್ದಾನೆ, ನನಗೆ ನನ್ನ ಮಗುವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದಳು.

ನೋಹನ್‌ಕಾಂತ್ ಮಾತನಾಡಿ, ನಾನು 2022 ರಲ್ಲೇ ವಿಚ್ಚೇಧನ ಪಡೆದಿದ್ದೇನೆ. ಕಾನೂನು ಪ್ರಕಾರ ನಾನು ಎರಡನೇ ಮದುವೆಯಾಗುತ್ತಿದೇನೆ ಎಂದರು.2018 ರಲ್ಲಿ ರಶ್ಮಿ ಹಾಗೂ ನೋಹನ್ ಕಾಂತ್ ಇದೇ ಚರ್ಚ್ ನಲ್ಲಿ ವಿವಾಹವಾಗಿದ್ದರು. ಆದರೆ ಮದುವೆಯಾಗಿ ಮಗು ಆದ ನಂತರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿ ಬೇರೆ ಬೇರೆಯಾಗಿ ಜೀವನ ಸಾಗಿಸುತ್ತಿದ್ದರು. ಈ ನಡುವೆ ರಶ್ಮಿ ತನಗೆ ಹಾಗೂ ತನ್ನ ಮಗಳಿಗೆ ಜೀವನಾಂಶ ಕೋರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸದ್ಯ ರಶ್ಮಿ ಹಾಗೂ ನೋಹನ್ ಕಾಂತ್ ಇಬ್ಬರೂ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರ ಮೊರೆ ಹೋಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ---------

ರಶ್ಮಿ ಹಾಗೂ ನೋಹನ್ ಕಾಂತ್ ಮದುವೆಯ ಚಿತ್ರ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಗಳಿಂದ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ
ಭಾರತದ ಭವಿಷ್ಯ ವರ್ಗ ಕೋಣೆಯಲ್ಲಿದೆ