ಪ್ರಕಾಶ್ ಎಂ.ಸುವರ್ಣ
ಮೂಲ್ಕಿ ತಾಲೂಕಿನಲ್ಲಿ ಮುಂಗಾರಿನಲ್ಲಿ ಹೆದ್ದಾರಿ ಪರಿಸರ ಹಾಗೂ ನದಿ ತಟಗಳಲ್ಲಿ ಕೃತಕ ನೆರೆ ಸಾಮಾನ್ಯವಾಗಿದೆ. ಮುಂಡಾ ಬೀಚ್ ಪರಿಸರದಲ್ಲಿ ಕಡಲು ಕೊರೆತವೂ ಹೆಚ್ಚುತ್ತಿದ್ದು, ಕಳೆದ ವರ್ಷ ವ್ಯಾಪಕ ಹಾನಿ ಸಂಭವಿಸಿದೆ.
ಕೇರಳವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮೂಲ್ಕಿಯಲ್ಲಿ ಹೆದ್ದಾರಿ ಚತುಷ್ಪಥಗೊಂಡ ಬಳಿಕ ಮಳೆಗಾಲದಲ್ಲಿ ಕೃತಕ ನೆರೆ ಮಾಮೂಲಿ ಎನಿಸಿದೆ. ಚತುಷ್ಪಥ ರಸ್ತೆಯ ಅವ್ಯೆಜ್ಞಾನಿಕ ಕಾಮಗಾರಿಯಿಂದಾಗಿ ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಮೂಲ್ಕಿ ಪೇಟೆ, ಕಾರ್ನಾಡು ಕೊಕ್ಕರ್ ಕಲ್, ಹಳೆಯಂಗಡಿ ಜಂಕ್ಷನ್ ಸೇರಿದಂತೆ ಹೆಚ್ಚಿನ ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿದು ನಿಲ್ಲುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ.ಚತುಷ್ಫಥ ರಸ್ತೆ ನಿರ್ಮಾಣಗೊಂಡು ಹಲವಾರು ವರ್ಷ ಕಳೆದರೂ ಈ ವರೆಗೆ ಮೂಲ್ಕಿ ಪೇಟೆಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿಲ್ಲ. ಮೂಲ್ಕಿ ಬಸ್ ನಿಲ್ದಾಣದಲ್ಲಿ ಮಳೆ ನೀರು ಹರಿದು ಸುತ್ತಮುತ್ತಲಿನ ಅಂಗಡಿಗಳಿಗೆ ನುಗ್ಗುವುದು ಸಾಮಾನ್ಯ ದೃಶ್ಯವಾಗಿದೆ.
ನದಿ ‘ತೀರದ’ ಸಮಸ್ಯೆ:
ಅಣೆಕಟ್ಟುಗಳ ಸಮರ್ಪಕ ನಿರ್ವಹಣೆ ಕೊರತೆಯಿಂದ ನದಿ ನೀರು ಉಕ್ಕೇರಿ ಕೃಷಿ ಭೂಮಿಯನ್ನು ಆವರಿಸುವುದರಿಂದ ಪ್ರತಿವರ್ಷ ಕೃಷಿಕರು ನಷ್ಟ ಅನುಭವಿಸುತ್ತಿದ್ದಾರೆ. ಈವರೆಗೂ ಯಾವುದೇ ಶಾಶ್ವತ ಪರಿಹರವಾಗಿಲ್ಲ.
ರಾಜ್ಯ ಹೆದ್ದಾರಿ ಸಮಸ್ಯೆ:
ಮೂಲ್ಕಿ ವ್ಯಾಪ್ತಿ ಮುನ್ನೆಚರಿಕೆ:
ಪ್ರತಿ ಮಳೆಗಾಲದಲ್ಲಿ ರಸ್ತೆ ಹೊಂಡಮಯವಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿ ಪರಿಣಮಿಸಿದೆ.
ಮೂಲ್ಕಿಯ ವಿಜಯ ಸನ್ನಿದಿ ಬಳಿ ರಾಷ್ಟ್ರೀಯ ಹೆದ್ದಾರಿಯ ಒಳ ರಸ್ತೆಗೆ ಚರಂಡಿ ನಿರ್ಮಾಣವಾಗದ ಕಾರಣ ವಿಜಯ ಸನ್ನಿಧಿ ಎದುರುಗಡೆ ಪ್ರತಿವರ್ಷ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಬಾರಿ ಅಬ್ಬರದ ಮಳೆ ಬಂದಲ್ಲಿ ಹೆಚ್ಚಿನ ಅನಾಹುತವಾಗುವ ಸಾಧ್ಯತೆಯಿದೆ.
---ಪರಿಹಾರ ಏನು?
-ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಲೋಪಗಳನ್ನು ಸರಪಡಿಸುವುದು-ಒಳಚರಂಡಿ ಕಾಮಗಾರಿಗೆ ಆದ್ಯತೆ
-ಚರಂಡಿ ಹೂಳೆತ್ತುವ ಕಾಮಗಾರಿ-ಸರ್ವಿಸ್ ರಸ್ತೆ ನಿರ್ಮಾಣ ಪೂರ್ತಿಗೊಳಿಸುವುದು
-ಮುಂಡಾ ಬೀಚ್ನಲ್ಲಿ ಸಮುದ್ರ ಕೊರೆತಕ್ಕೆ ತಡೆ...............................ಮೂಲ್ಕಿ ವ್ಯಾಪ್ತಿಯಲ್ಲಿ ಮಳೆಗಾಲದ ಪೂರ್ವಭಾವಿಯಾಗಿ ಚರಂಡಿಯ ಹೂಳು ತೆಗೆಯುವ ಕಾರ್ಯ ನಡೆದಿದೆ. ರಸ್ತೆ ಬದಿಯ ಮರ,ಗಿಡ ಗಂಟಿಗಳನ್ನು ತೆಗೆಯುವ ಕಾರ್ಯ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಹರಿದು ಸಮಸ್ಯೆಯಾಗುತ್ತಿರುವ ಬಗ್ಗೆ ಹೆದ್ದಾರಿ ಇಲಾಖೆಗೆ ಪತ್ರ ಬರೆಯಲಾಗಿದೆ. ಕೃತಕ ನೆರೆ ಸಂಭವಿಸುವ ನದಿ ತೀರದ ಪ್ರದೇಶದಲ್ಲಿ ತಂಡವನ್ನು ರಚಿಸಿ ಸೂಕ್ತ ವ್ಯವಸ್ಥೆ ಮಾಡಲಾಗುವುದು .
-ಪಂಕಜಾ ಆಂಜನೇಯ, ಮೂಲ್ಕಿ ನ.ಪಂ. ಮುಖ್ಯಾಧಿಕಾರಿ............ರಾಷ್ಟ್ರೀಯ ಹೆದ್ದಾರಿಯ ಅವ್ಯೆಜ್ಞಾನಿಕ ರಸ್ತೆ ನಿರ್ಮಾಣದಿಂದಾಗಿ ಮೂಲ್ಕಿ ಪೇಟೆಯಲ್ಲಿ ಪ್ರತಿ ವರ್ಷ ರಸ್ತೆಯಲ್ಲಿ ಮಳೆ ನೀರು ಹರಿದು ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಕಳೆದ 10 ವರ್ಷದಿಂದ ಸಂಸದರು, ಹೆದ್ದಾರಿ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ನೀರು ಮೂಲ್ಕಿ ಕೆಳ ಪೇಟೆಯಲ್ಲಿ ಅಂಗಡಿಗಳ ಒಳಗೆ ನುಗ್ಗಿ ಹೆಚ್ಚಿನ ನಷ್ಟ ಉಂಟಾಗುತ್ತಿದೆ.
-ಅಬ್ದುಲ್ ರಜಾಕ್, ಸಮಾಜ ಸೇವಕ.