ಕೃತಕ ಬುದ್ಧಿಮತ್ತೆಯಿಂದ ಪವಾಡ ಮಾಡಬಹುದು

KannadaprabhaNewsNetwork |  
Published : Aug 31, 2024, 01:40 AM IST
ತುಮಕೂರು ವಿವಿಯಲ್ಲಿ ನಡೆದ ಕೃತಕ ಬುದ್ಧಿಮತ್ತೆ ಚಾಲಿತ ಅಪ್ಲಿಕೇಶನ್‌ ಕುರಿತ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಕೃತಕ ಬುದ್ಧಿಮತ್ತೆಯು ಬಹುತೇಕ ಎಲ್ಲ ಕ್ಷೇತ್ರಗಳನ್ನು ಆಕ್ರಮಿಸಿಕೊಂಡಿದೆ. ಪ್ರಸ್ತುತ ತಂತ್ರಜ್ಞಾನವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆಯಿಂದ ಪವಾಡಗಳನ್ನು ಮಾಡಬಹುದು

ಕನ್ನಡಪ್ರಭ ವಾರ್ತೆ ತುಮಕೂರುಕೃತಕ ಬುದ್ಧಿಮತ್ತೆಯು ಬಹುತೇಕ ಎಲ್ಲ ಕ್ಷೇತ್ರಗಳನ್ನು ಆಕ್ರಮಿಸಿಕೊಂಡಿದೆ. ಪ್ರಸ್ತುತ ತಂತ್ರಜ್ಞಾನವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆಯಿಂದ ಪವಾಡಗಳನ್ನು ಮಾಡಬಹುದು ಎಂದು ಹಿರಿಯ ಶಿಕ್ಷಣ ತಜ್ಞ ಶಿವಕುಮಾರ್ ಎಚ್.ಎಂ. ಅಭಿಪ್ರಾಯಪಟ್ಟರು.ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗಣಕಯಂತ್ರ ಅನ್ವಯಿಕ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಶುಕ್ರವಾರ ಆಯೋಜಿಸಿದ್ದ ‘ಕೃತಕ ಬುದ್ಧಿಮತ್ತೆ(ಎಐ) ಚಾಲಿತ ಅಪ್ಲಿಕೇಶನ್‌ಗಳು’ ಕುರಿತ ಕಾರ್ಯಾಗಾರ ಉದ್ಘಾಟಿಸಿದರು.ಕೃತಕ ಬುದ್ಧಿಮತ್ತೆಯು ನೈಜತೆಗೆ ಸವಾಲೊಡ್ಡುತ್ತಿದೆ.ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ಸಂಸ್ಥೆಗಳನ್ನು ಪ್ರಾರಂಭಿಸಿ ಉದ್ಯೋಗದಾತರಾಗಬಹುದು ಎಂದರು.ವಿವಿ ಸ್ನಾತಕೋತ್ತರ ಗಣಕಯಂತ್ರ ಅನ್ವಯಿಕ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಯೋಜಕಿ ಡಾ.ಕುಸುಮಾಕುಮಾರಿ ಬಿ.ಎಂ.ಮಾತನಾಡಿ, ಕೈಗಾರಿಕೋದ್ಯಮಿ ಡಾ.ಎಚ್.ಜಿ. ಚಂದ್ರಶೇಖರ್‌ಅವರ ಸಹಯೋಗದಲ್ಲಿ ಶೀಘ್ರದಲ್ಲಿಯೇ ವಿವಿಯಲ್ಲಿ ಕೃತಕ ಬುದ್ಧಿಮತ್ತೆ ಕೇಂದ್ರ ಆರಂಭಿಸಲಾಗುವುದು.ಈಗಾಗಲೇ ಬ್ಯಾಂಕ್, ಆರೋಗ್ಯ, ಮಾಧ್ಯಮ, ಮನರಂಜನೆ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ತನ್ನ ಕಾರ್ಯಕ್ಷಮತೆ ತೋರಿದೆ ಎಂದು ತಿಳಿಸಿದರು.ಸಂದರ್ಶಕ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಸ್ವಾಮಿ ಬಿ.ಪಿ., ಉಪನ್ಯಾಸಕ ರೋಹಿತ್ ಕೆ.ಆರ್., ಶಾಲಿನಿ ಕೆ., ಶಶಿಕಲಾ, ಶೃತಿ ಬಿ., ಭವ್ಯಶ್ರೀ ಟಿ. ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ