ಆಧುನಿಕ ಜೀವನ ಪದ್ಧತಿಯಲ್ಲಿ ಕೃತಕಬುದ್ಧಿ ಮತ್ತೆ ದೊಡ್ಡ ಸವಾಲು: ಶ್ರೀ ಗುಣನಾಥಸ್ವಾಮೀಜಿ

KannadaprabhaNewsNetwork |  
Published : Apr 12, 2026, 02:00 AM IST
ಎಐಟಿ | Kannada Prabha

ಸಾರಾಂಶ

ಚಿಕ್ಕಮಗಳೂರುಆಧುನಿಕ ಜೀವನ ಪದ್ಧತಿಯಲ್ಲಿ ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊಡ್ಡ ಸವಾಲಾಗಿ ಪರಿಣಾಮಿಸುತ್ತಿದ್ದು ಪ್ರಸ್ತುತ ಕೃತಕಬುದ್ದಿ ಮತ್ತೆ ಬೇಡವಾದರೂ ಜನಿಸಿದ ನಂತರ ಅನುಸರಿಸಿಕೊಂಡು ಸೂಕ್ತವಾಗಿ ಉಪಯೋಗಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥಸ್ವಾಮೀಜಿ ಹೇಳಿದರು.

ಎಐಟಿ ಕಾಲೇಜಿನಲ್ಲಿ ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಮತ್ತು ಮೆಷಿನ್ ಇನ್ಪಾರ್ಮ್ಯಾಟಿಕ್ಸ್ ಉದಯೋನ್ಮುಖ ಸಂಶೋಧನೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಆಧುನಿಕ ಜೀವನ ಪದ್ಧತಿಯಲ್ಲಿ ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊಡ್ಡ ಸವಾಲಾಗಿ ಪರಿಣಾಮಿಸುತ್ತಿದ್ದು ಪ್ರಸ್ತುತ ಕೃತಕಬುದ್ದಿ ಮತ್ತೆ ಬೇಡವಾದರೂ ಜನಿಸಿದ ನಂತರ ಅನುಸರಿಸಿಕೊಂಡು ಸೂಕ್ತವಾಗಿ ಉಪಯೋಗಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥಸ್ವಾಮೀಜಿ ಹೇಳಿದರು.

ನಗರದ ಎಐಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಮತ್ತು ಮೆಷಿನ್ ಇನ್ಪಾರ್ಮ್ಯಾಟಿಕ್ಸ್ ಉದಯೋನ್ಮುಖ ಸಂಶೋಧನೆ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ

ಇಂದಿನ ದಿನಮಾನದಲ್ಲಿ ತಂತ್ರಜ್ಞಾನ ವರ್ಣಿಸುವುದು ಬಹಳ ಕಷ್ಟಸಾಧ್ಯ. ಪ್ರತಿಯೊಂದು ರಂಗದಲ್ಲೂ ತಂತ್ರಜ್ಞಾನ ಅವಶ್ಯಕ. ಈ ತಂತ್ರಜ್ಞಾನ ವ್ಯವಸ್ಥೆಗೆ ಅಂಟಿಕೊಂಡಿರುವ ಮನುಜ, ಬಿಟ್ಟಿರಲಾಗದ ಸ್ಥಿತಿಗೆ ತಲುಪಿದ್ದಾನೆ. ಇದೀಗ ಎಐ ತಂತ್ರಜ್ಞಾನ ಎಲ್ಲರಿಗೂ ಸಮಸ್ಯೆಯಾಗಿದ್ದು ಸಮರ್ಪಕವಾಗಿ ಬಳಸಿಕೊಳ್ಳುವ ಕಾರ್ಯ ಮಾಡಬೇಕಿದೆ ಎಂದರು.

ಜಗತ್ತಿನಲ್ಲಿ ಕೆಲವೇ ವರ್ಷಗಳಲ್ಲಿ ಜನಿಸಿದ ರಾಷ್ಟ್ರಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಮೈಲುಗೈ ಸಾಧಿಸಿದೆ. ಆ ದರೆ ಭಾರತ ಐದು ಸಾವಿರ ವರ್ಷಗಳ ಪುರಾತನ ಇತಿಹಾಸವುಳ್ಳ ದೇಶ. ಅದಕ್ಕಾಗಿ ಪ್ರಬುದ್ಧ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದರು.

ಬ್ರಹ್ಮಂಡ ಒಂದು ವಿಸ್ಮಯಕಾರಿ ಲೋಕ. ಈ ಲೋಕದ ರಹಸ್ಯ ಅರಿಯಲು ನೂರಾರು ವರ್ಷಗಳ ಹಿಂದೆಯೇ ಋಷಿಮುನಿಗಳು ಮನಸ್ಸಿನ ಧ್ಯಾನದಿಂದಲೇ ಬ್ರಹ್ಮಂಡದ ಗ್ರಹಗಳ ಚಲನ-ವಲನ, ಕೆಲಸ- ಕಾರ್ಯ ಮತ್ತು ಪೃಥ್ವಿಯ ಪಂಚ ಭೂತಗಳ ಧ್ಯಾನ ದಿಂದ ಗ್ರಹಿಸುತ್ತಿದ್ದರು. ಈ ಪೂರ್ವಿಕರು ಉಳಿಸಿದ ಸಂಸ್ಕೃತಿ ಇಂದು ನಾವು ಬಳಸುತ್ತಿದ್ದೇವೆ ಎಂದರು.

ಮಂಗಳೂರು ಎನ್.ಐಟಿಟಿಇ ವಿವಿ ಕುಲಪತಿ ಡಾ. ಎಂ.ಎಸ್.ಮೂಡಿತ್ತಾಯ ಮಾತನಾಡಿ, ಸ್ಮಾರ್ಟ್ ಎಲೆಕ್ಟ್ರಾನಿಕ್ ಮತ್ತು ಮೆಷಿನ್ ಇನ್ಪಾರ್ಮ್ಯಾಟಿಕ್ಸ್ ಸಮ್ಮೇಳನ ವಿದ್ಯಾರ್ಥಿಗಳ ಮನಸ್ಸಿನೊಂದಿಗೆ ಸಂವಹನ ನಡೆಸಲು ಉತ್ತಮ ಅವಕಾಶ ಒದಗಿ ಸುತ್ತಿದ್ದು ಇತರರನ್ನು ಪ್ರೇರೇಪಿಸುವ ಕಾರ್ಯ ಮಾಡಬೇಕಿದೆ ಎಂದು ತಿಳಿಸಿದರು.

ಶಿಕ್ಷಕರು ಶಿಕ್ಷಣದಲ್ಲಿನ ಮೌಲ್ಯ, ಸರಪಳಿ ಪ್ರತಿಯೊಂದು ಅಂಶ ಅರ್ಥಮಾಡಿಕೊಳ್ಳಬೇಕು. ಅತ್ಯಂತ ನವೀನ, ಸಮಕಾಲಿನ ಮತ್ತು ಉದ್ಯಮ ಆಧಾರಿತ ಪಠ್ಯಕ್ರಮದ ಮೂಲಕ ಹೇಗೆ ಶೈಕ್ಷಣಿಕ ವಿತರಣಾ ಪ್ರಕ್ರಿಯೆ ಮತ್ತು ಮೌಲ್ಯಮಾಪನ ತಂತ್ರಗಳ ಮೂಲಕ ಗುಣಮಟ್ಟದ ವಿದ್ಯಾರ್ಥಿಗಳನ್ನು ಹೊರ ತಂದು ಜಗತ್ತಿಗೆ ಅರ್ಪಿಸಬೇಕು ಎಂದರು.

ಎಐಟಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಎ.ಗೌತಮ್ ಮಾತನಾಡಿ, ಶ್ರೀಗಳ ಮಾರ್ಗದರ್ಶನದಲ್ಲಿ ಟ್ರ ಸ್ಟ್ ದೇಶಾದ್ಯಂತ 500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡಂತೆ ಗಮನಾರ್ಹವಾಗಿ ಬೆಳೆದಿದೆ. 70 ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆ ಗಳನ್ನು ನಿರ್ವಹಿಸುತ್ತಿದ್ದು ಅವುಗಳಲ್ಲಿ ಹೆಚ್ಚಿನವು ಗ್ರಾಮೀಣ ಸಮುದಾಯಗಳಿಗೆ ಉತ್ತಮ ಸೇವೆ ಸಲ್ಲಿಸುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಐಇಇಇ ಬೆಂಗಳೂರು ವಿಭಾಗದ ಅಧ್ಯಕ್ಷ ಡಾ.ಚೆಂಗಪ್ಪ ಮಂಜಂದೀರಾ, ಸಿಐಎಸ್ ಡಾ.ಸುಮನಾ ಮರಡಿತ್ತಾಯ, ಇಸಿಎಂಐ ಪ್ರಕಟಣೆ ಅಧ್ಯಕ್ಷ ಡಾ.ಅನಿಲ್‌ಕುಮಾರ್, ಆದಿಚುಂಚನಗಿರಿ ವಿಶ್ವವಿ ದ್ಯಾಲಯದ ರಿಜಿಸ್ಟರ್ ಡಾ. ಸಿ.ಕೆ.ಸುಬ್ಬರಾಯ, ಎಐಟಿ ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಪ್ರೊ.ಸಂಗಾರೆಡ್ಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸರ ಕರ್ತವ್ಯ ವಿಶ್ರಾಂತಿ ರಹಿತವಾದದ್ದು: ಅಂಬರೀಷ್
ಪಠ್ಯ ಶಿಕ್ಷಣದ ಜೊತೆಗೆ ಜೀವನದ ಮೌಲ್ಯ ಕಲಿಕೆ: ಫಾ.ಬೆನ್ನಿ ಮ್ಯಾಥ್ಯೂ