ಅಭಿಮಾನಿಗಳಿಂದ ಕಲಾವಿದರ ಹೆಸರು ಚಿರಸ್ಥಾಯಿ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

KannadaprabhaNewsNetwork |  
Published : Nov 11, 2024, 01:12 AM IST
9ಧಾರ | Kannada Prabha

ಸಾರಾಂಶ

ಬೈಂದೂರಿನ ಕಿರಿಮಂಜೇಶ್ವರ - ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರಮಠದ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಕಾರದಲ್ಲಿ ಹಮ್ಮಿಕೊಂಡ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ‘ತಾಳ ಮದ್ದಲೆ ಸಪ್ತಾಹ ’ದ ಸಮಾರೋಪ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಯಾವುದೇ ಕಲೆ ಇರಲಿ, ಅದನ್ನು ಪೋಷಿಸಿಕೊಂಡು, ಆರಾಧಿಸಿಕೊಂಡು ಬಂದ ಅಭಿಮಾನಿಗಳಿಂದ ಅದು ಅಳಿಯದೆ ಉಳಿಯುತ್ತದೆ. ಹಾಗೆಯೇ ಯಕ್ಷಗಾನದ ಭಾಗವತ ದಿಗ್ಗಜ ಸುಬ್ರಹ್ಮಣ್ಯ ಧಾರೇಶ್ವರ ಅವರು ಆರಂಭಿಸಿರುವ ಯಕ್ಷಗಾನ ಜ್ಞಾನಯಜ್ಞ ಕಾರ್ಯಕ್ರಮವನ್ನು ಅವರ ಅಭಿಮಾನಿಗಳ ಸಹಕಾರದಲ್ಲಿ ನಡೆಸುತ್ತಿರುವುದು ಅಭಿನಂದನೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಬೈಂದೂರಿನ ಕಿರಿಮಂಜೇಶ್ವರ - ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರಮಠದ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಕಾರದಲ್ಲಿ ಹಮ್ಮಿಕೊಂಡ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ‘ತಾಳ ಮದ್ದಲೆ ಸಪ್ತಾಹ ’ದ ಸಮಾರೋಪದಲ್ಲಿ ಖ್ಯಾತ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರಿಗೆ ತೆಕ್ಕಟ್ಟೆ ಆನಂದ ಮಾಸ್ತರರ ಸ್ಮರಣೆಯ ‘ಕಲಾ ತಪಸ್ವಿ -2024’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.ಧಾರೇಶ್ವರ ಅವರ ಹೆಸರೇ ಹೇಳುವ ಹಾಗೆ ತನ್ನ ಕಂಠವನ್ನು ಯಕ್ಷಗಾನಕ್ಕೆ ಧಾರೆ ಎರೆದವರು. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅವರ ಪ್ರತಿಭೆಗೆ ಸೋತು 9 ವರ್ಷಗಳ ಹಿಂದೆ ಅವರು ಆರಂಭಿಸಿದ ಈ ಸಪ್ತಾಹ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದೆ. ಅಲ್ಲದೆ ಅವರ ಉಪಸ್ಥಿತಿಯಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ‘ಧಾರೇಶ್ವರ ಅಷ್ಟಾಹ’ ಕಾರ್ಯಕ್ರಮವನ್ನು ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮೂಲಕ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ ಎಂದ ಅವರು, ಧಾರೇಶ್ವರ ಅವರ ಅಭಿಮಾನಿಗಳು ಇಂತಹ ಕಾರ್ಯಕ್ರಮಗಳನ್ನು ತನು-ಮನ-ಧನದಿಂದ ಪ್ರೋತ್ಸಾಹಿಸುತ್ತಿರುವುದನ್ನು ಕಂಡಾಗ ಯಕ್ಷಗಾನ ಕಲೆಯ ಮಹತ್ವದ ಬಗ್ಗೆ ಅರಿವಾಗುತ್ತದೆ ಎಂದು ಅವರು ತಿಳಿಸಿದರು.ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಮುಖ್ಯಸ್ಥ ಪ್ರದೀಪ್ ಕುಮಾರ್ ಕಲ್ಕೂರ್ ಮಾತನಾಡಿ, ಸರ್ವ ರೀತಿಯ ಮಾನ್ಯತೆ, ಸರ್ವರಿಗೂ ಸಮಾನವಾದ ವೇದಿಕೆ ಇದ್ದರೆ ಅದು ಯಕ್ಷಗಾನದಲ್ಲಿ ಮಾತ್ರ. ಯಕ್ಷಗಾನ ಇಂದು ರಾಜಾಶ್ರಯ ಕಳೆದುಕೊಂಡರೂ, ಜನಾಶ್ರಯದಲ್ಲಿ ಬೆಳೆಯುತ್ತಿರುವುದು ಸಂತೋಷ ತಂದಿದೆ ಎಂದರು.ಕಾರ್ಯಕ್ರಮದಲ್ಲಿ ಯಕ್ಷಗಾನದ ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರಿಗೆ ತೆಕ್ಕಟ್ಟೆ ಆನಂದ ಮಾಸ್ತರರ ಸ್ಮರಣೆಯ ‘ಕಲಾ ತಪಸ್ವಿ -2024’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಯಕ್ಷಗಾನ ಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ, ಅಗಸ್ತ್ಯೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಐತಾಳ್ ಕಿರಿಮಂಜೇಶ್ವರ, ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ್ ಹೆಗಡೆ ಹೆರವಟ್ಟಾ, ಮಂಗಳೂರು ಕರ್ನಾಟಕ ಯಕ್ಷಧಾಮದ ಜನಾರ್ದನ ಹಂದೆ, ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟಿನ ಕಾರ್ತಿಕೇಯ ಧಾರೇಶ್ವರ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''