ಕಲಾವಿದರು ಶಿಸ್ತು ಸಮಯ ಪಾಲನೆ ರೂಢಿಸಿಕೊಳ್ಳಲಿ: ಮಾತಾ ಮಂಜಮ್ಮ ಜೋಗತಿ

KannadaprabhaNewsNetwork |  
Published : Jul 05, 2024, 12:51 AM IST
ಫೋಟೋವಿವರ- (4ಎಂಎಂಎಚ್‌1) ಮರಿಯಮ್ಮನಹಳ್ಳಿಯ ದುರ್ಗಾದಾಸ್‌ ರಂಗ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾಲೇಜು ರಂಗ ಪ್ರಯಣ ನಾಟಕದ ಸಿದ್ದತೆಯ ಶಿಬಿರಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಚಾಲನೆ ನೀಡಿದರು.  | Kannada Prabha

ಸಾರಾಂಶ

ನಿರಂತರ ಅಭ್ಯಸದೊಂದಿಗೆ ಕಲೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತ ಕಲಾವಿದರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ.

ಮರಿಯಮ್ಮನಹಳ್ಳಿ: ಕಲಾವಿದರು ಮೊದಲು ಶಿಸ್ತು ಮತ್ತು ಸಮಯ ಪಾಲನೆಯನ್ನು ರೂಢಿಸಿಕೊಂಡಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಹೇಳಿದರು.

ಇಲ್ಲಿನ ದುರ್ಗಾದಾಸ್‌ ರಂಗ ಮಂದಿರದಲ್ಲಿ ಮರಿಯಮ್ಮನಹಳ್ಳಿಯ ರಂಗ ಚೇತನ ಕಲಾ ಟ್ರಸ್ಟ್‌ ಮತ್ತು ಮಸಾರಿ ನೆಲ್ಕುದ್ರಿಯ ರಂಗಲೋಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾಲೇಜು ರಂಗ ಪ್ರಯಣ ನಾಟಕದ ಸಿದ್ದತೆಯ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಿರಂತರ ಅಭ್ಯಸದೊಂದಿಗೆ ಕಲೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತ ಕಲಾವಿದರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ. ಕಲಾವಿದರು ರಂಗಭೂಮಿ ಸೇವೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಂಡರೆ ರಂಗಭೂಮಿ ಕಲಾವಿದರಿಗೆ ಉತ್ತಮ ಸ್ಥಾನಮಾನ ಕಲ್ಪಿಸಿಕೊಡುತ್ತದೆ. ಹಣವನ್ನು ಯಾವುದೇ ರೀತಿಯಿಂದ ಸಂಪಾದಿಸಬಹುದು. ಆದರೆ ಹೆಸರು ಸಂದಾಪನೆ ಮಾಡಬೇಕಾದರೆ ನಾವು ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ ಮತ್ತು ಶ್ರದ್ಧೆ ಇದ್ದಾಗ ಮಾತ್ರ ಹೆಸರು ಸಂಪಾದಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕಲಾವಿದರು ಉತ್ತಮ ಹೆಸರು ಸಂಪಾದನೆ ಮಾಡಲು ಮುಂದಾಗಬೇಕು ಎಂದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹಾಗೂ ಹಿರಿಯ ರಂಗಕಲಾವಿದೆ ಡಾ.ಕೆ.ನಾಗರತ್ನಮ್ಮ ಮಾತನಾಡಿ, ರಂಗ ಕಲೆ ಜೀವಂತಿಕೆಗೆ ಕಲಾವಿದರ ಕೊಡುಗೆ ಅಪಾರವಾಗಿದೆ. ನಾಟಕಗಳು ಸಮಾಜ ತಿದ್ದುವ ಕಾರ್ಯ ಮಾಡುತ್ತದೆ. ನಾಟಕ ಕಲೆ ಉಳಿವಿಗಾಗಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಅವರು ಹೇಳಿದರು.

ರಂಗ ನಿರ್ದೇಶಕ ಬಿ.ಎಂ.ಎಸ್‌. ಪ್ರಭು, ಪತ್ರಕರ್ತ ಹಾಗೂ ರಂಗಕಲಾವಿದ ಸಿ.ಕೆ. ನಾಗರಾಜ, ಮಸಾರಿ ನೆಲ್ಕುದ್ರಿಯ ರಂಗಲೋಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಎಂ.ಮಹಾಂತೇಶ್‌ ಸಭೆಯಲ್ಲಿ ಮಾತನಾಡಿದರು.

ಕಲಾವಿದರಾದ ಕೆ.ರಾಮಚಂದ್ರಪ್ಪ, ಎಚ್‌.ಎಂ. ವೀರೇಂದ್ರಪ್ರಸಾದ್‌, ಹರಿಕಥೆ ಮಂಜು, ಮಲ್ಲೇಶ್‌ ಮಾಲ್ವಿ, ಮಂಜು ಕೊಪ್ಪಳ, ಹಿರಣ್ಯ ಬಿಜಾಪುರ, ರುದ್ರೇಶ್‌ ಕಲ್ಲಳ್ಳಿ, ಬಸವ ರಾಯಚೂರು, ಪೂರ್ಣಿಮಾ ತುಮಕೂರ್, ಸಂಗೀತ ಚಿತ್ರದುರ್ಗ, ಶಿವರಾಜ್‌ ಲೆಕ್ಕದ್‌, ಎಂ. ಮಹಾಂತೇಶ್‌ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ