ಕಲಾವಿದರು ಕಲೆ ಉಳಿಸಿ ಬೆಳೆಸುವ ಕಾರ್ಯ ಮಾಡಲಿ

KannadaprabhaNewsNetwork |  
Published : Dec 11, 2024, 12:46 AM IST
ಗದಗ ಕನ್ನಡ ಸಾಹಿತ್ಯ ಪರಿಷತ್‌ನ ಜ.ತೋಂಟದಾರ್ಯ ಕನ್ನಡ ಭವನದಲ್ಲಿ ಲಾವಣಿ ಹಾಗೂ ಗೀ ಗೀ ಪದಗಳ ತರಬೇತಿ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ನಡೆಯಿತು. | Kannada Prabha

ಸಾರಾಂಶ

ಉಚಿತ ವಸತಿ, ಊಟೋಪಚಾರದೊಂದಿಗೆ ನೀಡಲಿರುವ ಲಾವಣಿ ಹಾಗೂ ಗೀಗೀ ಪದಗಳ ತರಬೇತಿ ಶಿಬಿರದಲ್ಲಿ ಉದಯೋನ್ಮುಖ ಕಲಾವಿದರು ತರಬೇತಿ ಪಡೆದು, ತಂಡ ಕಟ್ಟಿಕೊಂಡು ಕಲೆ ಉಳಿಸಿ ಬೆಳೆಸುವ ಕಾರ್ಯವಾಗಬೇಕು

ಗದಗ: ಮಾನವೀಯ ಮೌಲ್ಯ, ಸಮಾಜದಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆ ಬೋಧಿಸುವ ಲಾವಣಿ ಹಾಗೂ ಗೀ ಗೀ ಪದಗಳ ಕಲೆ ಉಳಿಸಿ ಬೆಳೆಸುವ ಕೆಲಸವಾಗಬೇಕು. ಇಂದಿನ ಯುವ ಕಲಾವಿದರು ನಮ್ಮ ನಾಡಿನ ಮೂಲ ಕಲೆಗಳಲ್ಲೊಂದಾದ ಲಾವಣಿ ಹಾಗೂ ಗೀಗೀ ಪದ ಕಲೆಯ ಬಗ್ಗೆ ಆಸಕ್ತಿ ಬೆಳಸಿಕೊಳ್ಳಬೇಕು ಎಂದು ಡಿಜಿಎಂ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾ. ಡಾ. ಜಿ.ಬಿ. ಪಾಟೀಲ ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್‌ನ ಜ. ತೋಂಟದಾರ್ಯ ಕನ್ನಡ ಭವನದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಹಮ್ಮಿಕೊಳ್ಳಲಿರುವ ಲಾವಣಿ ಹಾಗೂ ಗೀ ಗೀ ಪದಗಳ ತರಬೇತಿ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಚಿತ ವಸತಿ, ಊಟೋಪಚಾರದೊಂದಿಗೆ ನೀಡಲಿರುವ ಲಾವಣಿ ಹಾಗೂ ಗೀಗೀ ಪದಗಳ ತರಬೇತಿ ಶಿಬಿರದಲ್ಲಿ ಉದಯೋನ್ಮುಖ ಕಲಾವಿದರು ತರಬೇತಿ ಪಡೆದು, ತಂಡ ಕಟ್ಟಿಕೊಂಡು ಕಲೆ ಉಳಿಸಿ ಬೆಳೆಸುವ ಕಾರ್ಯವಾಗಬೇಕು ಎಂದರು.

ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ತರಬೇತಿ ಹಾಗೂ ವಿಚಾರ ಸಂಕೀರಣದೊಂದಿಗೆ ಜಿಲ್ಲೆಯ ಗ್ರಾಮೀಣ ಸ್ಥಳವೊಂದರಲ್ಲಿ ಗೀಗೀ ಪದ ಕಾರ್ಯಕ್ರಮ ಆಯೋಜಿಸುವ ಮೂಲಕ ಜಾನಪದ ವಾತಾವರಣ ನಿರ್ಮಾಣ ಮಾಡೋಣ ಎಂದರು.

ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಶಂಕ್ರಣ್ಣ ಸಂಕಣ್ಣವರ ಮಾತನಾಡಿ, ಅಕಾಡೆಮಿಯಿಂದ ಉದಯೋನ್ಮುಖ ಕಲಾವಿದರಿಗೆ ಲಾವಣಿ, ಗೀಗೀ ಪದಗಳ ತರಬೇತಿ ನೀಡುವ ಒಂದು ಒಳ್ಳೆಯ ಅವಕಾಶ ಒದಗಿದ್ದು, ಎಲ್ಲರ ಸಹಕಾರದಿಂದ ಈ ಕಾರ್ಯ ಯಶಸ್ವಿಗೊಳಿಸೋಣ ಎಂದರು.

ಕೀರ್ಥನಕಾರ ಚನ್ನವೀರಯ್ಯ ಕಡಣಿ ಶಾಸ್ತ್ರೀ, ಹಿರಿಯ ಸಾಹಿತಿ ಅಂದಾನೆಪ್ಪ ವಿಭೂತಿ, ಹವ್ಯಾಸಿ ರಂಗಕಲಾವಿದ ಮೌನೇಶ ಸಿ. ಬಡಿಗೇರ(ನರೇಗಲ್ಲ), ಗ್ರಾಮೀಣ ವಿವಿಯ ಉಪನ್ಯಾಸಕ ಚಂದ್ರಪ್ಪ ಬಾರಂಗಿ, ನಟರಂಗದ ಸೋಮು ಚಿಕ್ಕಮಠ, ಜನಪದ ಕಲಾವಿದ ಗವಿಸಿದ್ಧಯ್ಯ ಹಳ್ಳಕೇರಿಮಠ, ಕಲಾವಿದರಾದ ಬಸವರಾಜ ಹಡಗಲಿ, ವೀರಣ್ಣ ಅಂಗಡಿ, ನಿಂಗಬಸಪ್ಪ ದಿಂಡೂರ, ಬಸವರಾಜ ಹಾಲನ್ನವರ, ಶಿವ ಭಜಂತ್ರಿ, ಮಂಜುನಾಥ ಒಂಟೆತ್ತಿನ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’