ಕೆಬಿಎಲ್‌ ಹೆಚ್ಚುವರಿ ನಿರ್ದೇಶಕರಾಗಿ ಡಾ.ಎಂ.ಅರುಣ ಶ್ಯಾಮ್‌ ನೇಮಕ

KannadaprabhaNewsNetwork |  
Published : Jul 23, 2026, 02:45 AM IST
ಡಾ.ಎಂ.ಅರುಣ ಶ್ಯಾಮ್‌ | Kannada Prabha

ಸಾರಾಂಶ

ಕರ್ಣಾಟಕ ಬ್ಯಾಂಕ್ ತನ್ನ ನಿರ್ದೇಶಕರ ಮಂಡಳಿಗೆ ಹಿರಿಯ ಕಾನೂನು ತಜ್ಞ ಡಾ.ಎಂ.ಅರುಣ ಶ್ಯಾಮ್ ಅವರನ್ನು ಹೆಚ್ಚುವರಿ (ಕಾರ್ಯನಿರ್ವಹಣೆಯೇತರ, ಸ್ವತಂತ್ರ) ನಿರ್ದೇಶಕರಾಗಿ ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿದೆ. ಜು.೧೮ರಿಂದ ಈ ನೇಮಕ ಜಾರಿಗೆ ಬಂದಿದ್ದು, ಸೆಬಿ ನಿಯಮಗಳು ಹಾಗೂ ಕಂಪನಿಗಳ ಕಾಯ್ದೆಯ ಅನ್ವಯ ಬ್ಯಾಂಕಿನ ಷೇರುದಾರರ ಅನುಮೋದನೆಗೆ ಒಳಪಟ್ಟಿದೆ.

ಮಂಗಳೂರು: ಕರ್ಣಾಟಕ ಬ್ಯಾಂಕ್ ತನ್ನ ನಿರ್ದೇಶಕರ ಮಂಡಳಿಗೆ ಹಿರಿಯ ಕಾನೂನು ತಜ್ಞ ಡಾ.ಎಂ.ಅರುಣ ಶ್ಯಾಮ್ ಅವರನ್ನು ಹೆಚ್ಚುವರಿ (ಕಾರ್ಯನಿರ್ವಹಣೆಯೇತರ, ಸ್ವತಂತ್ರ) ನಿರ್ದೇಶಕರಾಗಿ ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿದೆ. ಜು.೧೮ರಿಂದ ಈ ನೇಮಕ ಜಾರಿಗೆ ಬಂದಿದ್ದು, ಸೆಬಿ ನಿಯಮಗಳು ಹಾಗೂ ಕಂಪನಿಗಳ ಕಾಯ್ದೆಯ ಅನ್ವಯ ಬ್ಯಾಂಕಿನ ಷೇರುದಾರರ ಅನುಮೋದನೆಗೆ ಒಳಪಟ್ಟಿದೆ.ಡಾ.ಎಂ.ಅರುಣ ಶ್ಯಾಮ್ ಬಿಸಿನೆಸ್ ಲಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸಂವಿಧಾನ ಮತ್ತು ಕ್ರಿಮಿನಲ್ ಕಾನೂನು ವಿಷಯದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ. ೨೦೦೪ರಿಂದ ವಕೀಲ ವೃತ್ತಿಯಲ್ಲಿ ಸಕ್ರಿಯರಾಗಿರುವ ಅವರು, ಸಿವಿಲ್ ನ್ಯಾಯಾಲಯಗಳು, ವಿವಿಧ ನ್ಯಾಯಮಂಡಳಿಗಳು, ಡೆಟ್ ರಿಕವರಿ ಟ್ರಿಬ್ಯುನಲ್, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ, ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ವಾದ ಮಂಡಿಸಿರುವ ಅನುಭವ ಹೊಂದಿದ್ದಾರೆ. ಸಿವಿಲ್, ಕ್ರಿಮಿನಲ್, ಸಂವಿಧಾನಾತ್ಮಕ, ಕಾರ್ಪೊರೇಟ್, ಬ್ಯಾಂಕಿಂಗ್, ಕಾರ್ಮಿಕ, ವಿಮೆ ಹಾಗೂ ಸೇವಾ ಕಾನೂನು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಎರಡು ದಶಕಗಳಿಗೂ ಅಧಿಕ ಅನುಭವ ಪಡೆದಿದ್ದಾರೆ.೨೦೨೦ರಿಂದ ೨೦೨೩ರವರೆಗೆ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಡಾ. ಅರುಣ ಶ್ಯಾಮ್, ಮಹತ್ವದ ಸಾಂವಿಧಾನಿಕ ಹಾಗೂ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದರು. ೨೦೨೧ರ ಡಿಸೆಂಬರ್ ೧೪ರಂದು ಕರ್ನಾಟಕ ಹೈಕೋರ್ಟ್ ಅವರನ್ನು ಹಿರಿಯ ವಕೀಲರಾಗಿ ಗೌರವಿಸಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಬಿಕಾ ನೀಟ್‌ ಅಕಾಡೆಮಿ: ರಿಪೀಟರ್ಸ್‌ ಬ್ಯಾಚ್ ದಾಖಲಾತಿ ಆರಂಭ
ರಾಜ್ಯದಲ್ಲಿ ಬಾಲಕಿಯರಿಗೆ ಎಚ್‌ವಿಪಿ ಲಸಿಕೆ ಕಡ್ಡಾಯವಲ್ಲ: ಖಾದರ್