ಅಂದು ಎಚ್‌ಡಿಕೆಗೆ ಸೆಡ್ಡು ಹೊಡೆದಿದ್ದ ಅರುಣ್‌ಗೆ ಉಪಾಧ್ಯಕ್ಷ ಪಟ್ಟ..!

KannadaprabhaNewsNetwork |  
Published : Aug 29, 2024, 12:51 AM IST
ಎಂ.ಪಿ.ಅರುಣ್ ಕುಮಾರ್‌ | Kannada Prabha

ಸಾರಾಂಶ

ಸ್ವತಃ ಎಚ್.ಡಿ.ಕುಮಾರಸ್ವಾಮಿ ಹೇಳಿದರೂ ರಾಜೀನಾಮೆ ನೀಡಲು ನಿರಾಕರಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದರು.

ಕನ್ನಡಪ್ರಭ ವಾರ್ತೆ ಮಂಡ್ಯ

ದಶಕದ ಹಿಂದೆ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆದು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದ ಎಂ.ಪಿ.ಅರುಣ್‌ಕುಮಾರ್ ಇಂದು ಜೆಡಿಎಸ್ ವರಿಷ್ಠರ ಬೆಂಬಲದೊಂದಿಗೆ ಬಿಜೆಪಿ ಪಕ್ಷದ ಸದಸ್ಯರಾಗಿ ಉಪಾಧ್ಯಕ್ಷ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿರುವುದು ಒಂದು ವಿಶೇಷವಾಗಿದೆ.

೨೦೧೩ರಲ್ಲಿ ಜೆಡಿಎಸ್ ಪಕ್ಷದ ಸದಸ್ಯರಾಗಿ ೧೧ನೇ ವಾರ್ಡ್‌ನಿಂದ ಗೆಲುವು ಸಾಧಿಸಿ ಅಧ್ಯಕ್ಷ ಗದ್ದುಗೆಯನ್ನೂ ಏರಿದ್ದರು. ಒಪ್ಪಂದದಂತೆ ರಾಜೀನಾಮೆ ನೀಡುವಂತೆ ವರಿಷ್ಠರು ಸೂಚಿಸಿದಾಗ ಅದನ್ನು ಧಿಕ್ಕರಿಸಿದ್ದರು. ಸ್ವತಃ ಎಚ್.ಡಿ.ಕುಮಾರಸ್ವಾಮಿ ಹೇಳಿದರೂ ರಾಜೀನಾಮೆ ನೀಡಲು ನಿರಾಕರಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದರು. ಅಂದು ಅರುಣ್‌ಕುಮಾರ್ ವಿರುದ್ಧ ಬಹಿರಂಗವಾಗಿಯೇ ಕುಮಾರಸ್ವಾಮಿ ಕಿಡಿಕಾರಿದ್ದರು. ೨೦೧೮ರಲ್ಲಿ ನಡೆದ ನಗರಸಭೆ ಚುನಾವಣೆಯಲ್ಲಿ ಎಂ.ಪಿ.ಅರುಣ್‌ಕುಮಾರ್ ಬಿಜೆಪಿ ಪಕ್ಷದಿಂದ ಕಣಕ್ಕಿಳಿದಿದ್ದರು. ಅಂದು ನಗರ ಘಟಕದ ಅಧ್ಯಕ್ಷರಾಗಿದ್ದ ಎಚ್.ಆರ್.ಅರವಿಂದ್ ಅವರು ಪಕ್ಷದ ನಾಯಕರ ಮನವೊಲಿಸಿ ಎಂ.ಪಿ.ಅರುಣ್‌ಕುಮಾರ್ ಪರ ನಿಂತು ಬಿಜೆಪಿ ಟಿಕೆಟ್ ದೊರಕಿಸಿದ್ದರು. ಅಲ್ಲದೆ, ಅರುಣ್ ಪರ ನಿಂತು ಗೆಲುವಿಗೂ ಶ್ರಮಿಸಿದ್ದರು. ಇಂದು ಅದೇ ಅರುಣ್‌ಕುಮಾರ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಕೈ ಎತ್ತುವ ಮೂಲಕ ಬೆಂಬಲ ಸೂಚಿಸಿದರು. ಇದು ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ. ಯಾರೂ ಮಿತ್ರರಲ್ಲ ಎನ್ನುವುದನ್ನು ಸೂಚಿಸುತ್ತಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!