ದೇಶಕ್ಕೆ, ಸಮಾಜಕ್ಕೆ ಹೆಗಲು ಕೊಡುವ ವ್ಯಕ್ತಿಯಾಗಿ : ಬಿ.ಎಲ್. ಸಂತೋಷ್

KannadaprabhaNewsNetwork |  
Published : Jun 08, 2025, 02:14 AM ISTUpdated : Jun 08, 2025, 01:03 PM IST
ಫೋಟೋ : ೬ಕೆಎಂಟಿ_ಜೆಯುಎನ್_ಕೆಪಿ೩  : ಗೋರೆ ಕೆನರಾ ಎಕ್ಸಲೆನ್ಸ ಪಿಯ ಕಾಲೇಜಿನಲ್ಲಿ ಪ್ರಗತಿಪಥ ಕಾರ್ಯಕ್ರಮವನ್ನು ಬಿಜೆಪಿ ರಾಷ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಉದ್ಘಾಟಿಸಿದರು. ಶಾಸಕ ದಿನಕರ ಶೆಟ್ಟಿ, ಡಾ. ಜಿ.ಜಿ.ಹೆಗಡೆ, ಡಿ.ಎನ್.ಭಟ್, ಪ್ರಾಚಾರ್ಯ ನಾಗರಾಜ ಜಿ., ಇನ್ನಿತರರು ಇದ್ದರು. | Kannada Prabha

ಸಾರಾಂಶ

ನಮ್ಮ ಧರ್ಮ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳಬೇಕು. ನಾವೆಲ್ಲರೂ ದೇಶಕ್ಕೆ ಮತ್ತು ಸಮಾಜಕ್ಕೆ ಹೆಗಲು ಕೊಡುವ ವ್ಯಕ್ತಿಗಳಾಗಬೇಕಾಗಿದೆ. ವಿದ್ಯಾರ್ಥಿಗಳು ಸಾರ್ಥಕ ಶ್ರಮದ ಮೂಲಕ ಜೀವನ ಸಾರ್ಥಕತೆ ಗಳಿಸಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಹೇಳಿದರು.

ಕುಮಟಾ: ನಮ್ಮ ಧರ್ಮ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳಬೇಕು. ನಾವೆಲ್ಲರೂ ದೇಶಕ್ಕೆ ಮತ್ತು ಸಮಾಜಕ್ಕೆ ಹೆಗಲು ಕೊಡುವ ವ್ಯಕ್ತಿಗಳಾಗಬೇಕಾಗಿದೆ. ವಿದ್ಯಾರ್ಥಿಗಳು ಸಾರ್ಥಕ ಶ್ರಮದ ಮೂಲಕ ಜೀವನ ಸಾರ್ಥಕತೆ ಗಳಿಸಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಹೇಳಿದರು.

ತಾಲೂಕಿನ ಗೋರೆಯ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನಲ್ಲಿ ಶುಕ್ರವಾರ ಪ್ರಗತಿ ಪಥ-೨೦೨೫ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ನಾವು ನಿಯಮವನ್ನು ಪಾಲಿಸಬೇಕಾಗಿರುವುದು ಯಾರ ಭಯ ಅಥವಾ ಒತ್ತಡಕ್ಕಾಗಿ ಅಲ್ಲ, ವಿದ್ಯಾರ್ಥಿಗಳಿಗೆ ಶಿಕ್ಷಕರ ಬಗ್ಗೆ ಗೌರವ ಇದ್ದರೆ ಸಾಕು ಹೆದರಿಕೆ ಬೇಡ. ಸಮಾಜದಲ್ಲಿ ಡೆಲಿಜನ್, ಸಿಟಿಜನ್ ಮತ್ತು ಸನ್ಸ್ ಏಂಡ್ ಡಾಟರ್ಸ್ ಆಫ್ ದ ಸಾಯಿಲ್ ಎಂಬ ಮೂರು ವರ್ಗವಿರುತ್ತದೆ. ಡೆಲಿಜನ್‌ಗಳಿಗೆ ನಾಳೆ ಮತ್ತು ಮುಂದಿನ ಯೋಚನೆ ಇರುವುದಿಲ್ಲ. ಸಿಟಿಜನ್‌ಗಳಿಗೆ ನಾಳೆ ಮತ್ತು ಮುಂದಿನ ದಿನಗಳ ಚಿಂತೆ ಮಾತ್ರ ಇರುತ್ತದೆ. ಸನ್ಸ್ ಏಂಡ್ ಡಾಟರ್ಸ್ ಆಫ್ ದ ಸಾಯಿಲ್ ವರ್ಗವನ್ನು ಇಂದು ನಾವು ಹೆಚ್ಚಾಗಿ ಓದುತ್ತಿದ್ದೇವೆ ಎಂದರು.

೮೫೦೦ ವರ್ಷಗಳ ಜಗತ್ತಿನ ಅತ್ಯಂತ ಜೀವಂತ ಪ್ರಾಚೀನ ನಗರ ವಾರಣಾಸಿ ಅಥವಾ ಕಾಶಿ. ಜಗತ್ತಿನಲ್ಲಿ ಬಹಳ ಪ್ರಾಚೀನ ಕಾಲದಲ್ಲಿ ಇದ್ದ ಎಷ್ಟೋ ದೇಶಗಳು ಈಗ ಇಲ್ಲ. ದೇಶ ಇದ್ದರೂ ಪ್ರಾಚೀನತೆಯೊಂದಿಗೆ ಕೊಂಡಿ ಕಳೆದುಕೊಂಡಿದೆ. ಆದರೆ ನಮ್ಮ ದೇಶದ ಪ್ರಾಚೀನತೆಯ ಹೆಗ್ಗುರುತುಗಳು ಇಂದಿಗೂ ಜೀವಂತವಾಗಿ ಚಾಲ್ತಿಯಲ್ಲಿರುವುದು ಈ ನೆಲದ ವಿಶೇಷ. ಶ್ರೀರಾಮ ಎಂದೂ ನಡವಳಿಕೆಯ ಗಡಿಗಳನ್ನು ದಾಟಿಲ್ಲ. ಆದ್ದರಿಂದಲೇ ಮರ್ಯಾದಾ ಪುರುಷೋತ್ತಮ ಶ್ರೀರಾಮ ಎಂದರು.

ಹಿಂದೆ ಆಶ್ರಮ ವ್ಯವಸ್ಥೆಯಲ್ಲಿ ಅಧ್ಯಯನದ ಜತೆಗೆ ಭಿಕ್ಷೆ ಸಹ ತರಬೇಕಿತ್ತು. ಅದರಿಂದಲೇ ಗುರುಕುಲ ನಡೆಯಬೇಕಿತ್ತು. ಆದರೆ ಇಂದು ನಮ್ಮ ಪರವಾಗಿ ಯಾರೋ ಫೀ ಕಟ್ಟುತ್ತಾರೆ. ಹಿಂದೆ ನಮ್ಮ ಕಾಲದಲ್ಲಿ ಫ್ರೆಂಡ್ ಇದ್ದರು, ಆದರೆ ಇಂದು ಬೆಸ್ಟ್ ಫ್ರೆಂಡ್ ಪರಿಕಲ್ಪನೆ ಆರಂಭವಾಗಿದೆ ಎಂದರು. ಹೀಗೆ ನಮ್ಮ ವಿದ್ಯಾರ್ಥಿ ಜೀವನ ಬದಲಾಗಿದೆ ಎಂದು ಉದಾಹರಣೆಗಳೊಂದಿಗೆ ವಿವರಿಸಿದರು.

ಶಾಸಕ ದಿನಕರ ಶೆಟ್ಟಿ ಮಾತನಾಡಿ, ಗೋರೆಯಂತಹ ಕುಗ್ರಾಮದಲ್ಲಿ ವಸತಿ ಸಹಿತ ಕಾಲೇಜು ಕಟ್ಟಿಸಿ ಡಾ.ಜಿ.ಜಿ.ಹೆಗಡೆ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದರೆ ತಪ್ಪಾಗಲಾರದು. ಈ ಕಾಲೇಜಿನಲ್ಲಿ ಸಂಸ್ಕಾರಯುತವಾಗಿ ವಿದ್ಯಾರ್ಥಿಗಳಿಗೆ ವಿದ್ಯೆ ನೀಡುತ್ತಿರುವ ಬಗ್ಗೆ ಧನ್ಯವಾದ ಹೇಳುತ್ತೇನೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಜಿಲ್ಲೆಯಲ್ಲೇ ಉನ್ನತ ಕಲಿಕೆ ಹಾಗೂ ಕನಸುಗಳನ್ನು ನನಸಾಗಿಸಿಕೊಳ್ಳುವಂತೆ ಹೆಚ್ಚಿನ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ಸಹಕರಿಸುವಂತೆ ಬಿ.ಎಲ್.ಸಂತೋಷ ಅವರಲ್ಲಿ ವಿನಂತಿಸಿದರು.

ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಜಿ.ಜಿ.ಹೆಗಡೆ ಪ್ರಾಸ್ತಾವಿಕ ಮಾತನಾಡಿ, ಭಾರತೀಯ ಸಂಸ್ಕೃತಿ ಹಾಗೂ ಉನ್ನತ ಧ್ಯೇಯದೊಂದಿಗೆ ಹಮ್ಮಿಕೊಂಡ ವಸತಿ ಸಹಿತ ಪಿಯು ಕಾಲೇಜಿನ ಪರಿಕಲ್ಪನೆ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವುದು ಸಂತಸ ಹಾಗೂ ಸಾರ್ಥಕ ಭಾವನೆ ತಂದಿದೆ ಎಂದರು.

ಶಿವಮೊಗ್ಗ ವಿಭಾಗ ಪ್ರಮುಖ ಗಿರೀಶ ಪಾಟೀಲ, ವಿಶ್ವಸ್ಥರಾದ ಡಾ. ಸೀತಾಲಕ್ಷ್ಮೀ ಹೆಗಡೆ, ಡಿ.ಎನ್.ಭಟ್, ಸಲಿಲಾ ಭಟ್ ವೇದಿಕೆಯಲ್ಲಿದ್ದರು. ಪ್ರಾಚಾರ್ಯ ನಾಗರಾಜ ಹೆಗಡೆ ಸ್ವಾಗತಿಸಿದರು. ಪೂಜಾ ಭಟ್ ನಿರೂಪಿಸಿದರು. ರಮ್ಯಾ ಸಭಾಹಿತ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''