ಕನ್ನಡಪ್ರಭ ವಾರ್ತೆ ಬೆಂಗಳೂರು
ನಾಲ್ಕು ಬಾರಿ ಸಚಿವರಾಗಿ, ಒಂದು ಬಾರಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದ ಡಿ.ಕೆ. ಶಿವಕುಮಾರ್ ಪ್ರತಿ ಬಾರಿ ಬೆಂಗಾವಲು ಪಡೆಯೊಂದಿಗೆ ನೇರವಾಗಿ ವಿಧಾನಸೌಧದೊಳಕ್ಕೆ ಬರುತ್ತಿದ್ದರು. ಆದರೆ, ಬುಧವಾರ ಮಾತ್ರ ವಿಧಾನಸೌಧದ ಮುಖ್ಯ ಗೇಟ್ನಲ್ಲಿಯೇ ತಮ್ಮ ವಾಹನವನ್ನು ನಿಲ್ಲಿಸಿ ವಿಧಾನಸೌಧಕ್ಕೆ ನಮಿಸಿ, ಜತೆಗೆ ವಿಧಾನಸೌಧದ ಮುಂಭಾಗದಲ್ಲಿನ ಮಹನೀಯರಿಗೆ, ರಾಷ್ಟ್ರ ನಾಯಕರಿಗೆ ನಮನ ಸಲ್ಲಿಸಿ ಮುಖ್ಯಮಂತ್ರಿಯಾದ ಮೊದಲ ದಿನದ ಕೆಲಸ ಆರಂಭಿಸಿದರು.
ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ, ತಮ್ಮ ನಾಯಕರುಗಳಿಗೆ ಬೀಳ್ಕೊಟ್ಟು ಬೆಂಗಾವಲು ವಾಹನಗಳೊಂದಿಗೆ ಡಿ.ಕೆ. ಶಿವಕುಮಾರ್ ವಿಧಾನಸೌಧದತ್ತ ಹೊರಟರು. ಆದರೆ, ಸೀದಾ ವಿಧಾನಸೌಧ ಪ್ರವೇಶಿಸಿದ ಮುಖ್ಯ ಗೇಟ್ನಲ್ಲಿ ವಾಹನ ನಿಲ್ಲಿಸಿ, ಡಾ. ಬಿ.ಆರ್.ಅಂಬೇಡ್ಕರ್, ಬಸವಣ್ಣ, ಕೆಂಪೇಗೌಡ, ಜವಾಹರಲಾಲ್ ನೆಹರು ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಅದಾದ ಬಳಿಕ ಬಗ್ಗಿ ಎಲೆಕ್ಟ್ರಿಕ್ ವಾಹನದ ಮೂಲಕ ವಿಧಾನಸೌಧ ಆವರಣದಲ್ಲಿನ ಮಹಾತ್ಮಗಾಂಧಿ ಪ್ರತಿಮೆ ಬಳಿಗೆ ತೆರಳಿ ಅಲ್ಲಿಯೂ ಪುಷ್ಪ ನಮನ ಸಲ್ಲಿಸಿದರು. ನಂತರ ಪಕ್ಕದಲ್ಲಿದ್ದ ಮುನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಬಾಗಿಲಿಗೆ ನಮಿಸಿದ ಸಿಎಂ:
ಅಜ್ಜಯ್ಯ, ಕಂಕೇರಮ್ಮನಿಗೆ ವಿಶೇಷ ಪೂಜೆ:ದಿನವಿಡೀ ನೊಣವಿನಕೆರೆ ಅಜ್ಜಯ್ಯರನ್ನು ಮನಸ್ಸಿನಲ್ಲೇ ಧ್ಯಾನಿಸುತ್ತಿದ್ದ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಮೂರನೇ ಮಹಡಿಯಲ್ಲಿನ ಮುಖ್ಯಮಂತ್ರಿ ಕಚೇರಿಯಲ್ಲಿಯೂ ಅಜ್ಜಯ್ಯರಿಗೆ ವಿಶೇಷ ಪೂಜೆ ಸಲ್ಲಿಸಿದರು. ಅವರೊಂದಿಗೆ ಮನೆ ದೇವರು ಕಂಕೇರಮ್ಮಗೂ ಕಚೇರಿಯಲ್ಲಿ ಪೂಜೆ ಸಲ್ಲಿಸಿದರು. ನಂತರ ಮುಖ್ಯಮಂತ್ರಿ ಖುರ್ಚಿಯಲ್ಲಿ ಆಸೀನರಾಗಿ ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದರು.ಸಿಎಂ ಕೊಠಡಿಯಲ್ಲಿ ನೊಣವಿನಕೆರೆ ಶ್ರೀ: