ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

‘ಗ್ಯಾರಂಟಿ’ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಎಚ್.ವಿ. ಚಂದ್ರು ನೇಮಕ

KannadaprabhaNewsNetwork | Updated : Mar 16 2024, 03:50 PM IST

ನಾನು ಕೂಡ ತಾಪಂ ಅಧ್ಯಕ್ಷನಾಗಿ, ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಕರ್ನಾಟಕ ಗ್ರಾಮೀಣ ಪಂಚಾಯತ್ ರಾಜ್ ನೀಡುವ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾಗಿದ್ದೆ. ಅದೇ ರೀತಿ ಎಪಿಎಂಸಿ ಉಪಾಧ್ಯಕ್ಷನಾಗಿ, ಎರಡು ಬಾರಿ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಉತ್ತಮ ಸೇವೆ ಸಲ್ಲಿಸಿದ್ದೇನೆ.

ಕನ್ನಡಪ್ರಭ ವಾರ್ತೆ ಯಳಂದೂರು

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಅವರನ್ನು ನೇಮಕ ಮಾಡಿ ಸರ್ಕಾರದ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿ ಇತರೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಕಾರ್ಯ ವಿಧಾನಗಳನ್ನು ಜಾರಿಗೆ ತರಲು ಪ್ರಾಧಿಕಾರವನ್ನು ಸರ್ಕಾರ ರಚಿಸಲಾಗಿದ್ದು ಪ್ರಾಧಿಕಾರದ ಕಾರ್ಯದರ್ಶಿಯಾಗಿ ಅಪರ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ನಾನು ಋಣಿ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್.ವಿ. ಚಂದ್ರು ಮಾತನಾಡಿ, ನಮ್ಮ ತಂದೆ ಹೊಂಗನೂರು ವೆಂಕಟರಂಗನಾಯಕರು, ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಪರಿಷತ್ ಸದಸ್ಯರಾಗಿ, ಸಂತೇಮರಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. 

ಅದೇ ರೀತಿ ನಾನು ಕೂಡ ತಾಪಂ ಅಧ್ಯಕ್ಷನಾಗಿ, ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಕರ್ನಾಟಕ ಗ್ರಾಮೀಣ ಪಂಚಾಯತ್ ರಾಜ್ ನೀಡುವ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾಗಿದ್ದೆ. ಅದೇ ರೀತಿ ಎಪಿಎಂಸಿ ಉಪಾಧ್ಯಕ್ಷನಾಗಿ, ಎರಡು ಬಾರಿ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಉತ್ತಮ ಸೇವೆ ಸಲ್ಲಿಸಿದ್ದೇನೆ. 

ಪಕ್ಷ ನನ್ನ ಪ್ರಾಮಾಣಿಕತೆಯನ್ನು ಗುರುತಿಸಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ, ಮಾಜಿ ಸಚಿವ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ, ಗುಂಡ್ಲಪೇಟೆ ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ಜಯಣ್ಣ, ಆರ್. ನರೇಂದ್ರ, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿಗಳಾದ ಎಸ್.ಸಿ. ಬಸವರಾಜು ಅವರಿಗೆ ಸೇರಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು, ಪಕ್ಷದ ಪದಾಧಿಕಾರಿಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.