ಆಶಾದೇವಿ ಗುಡಗುಂಟಿಗೆ ಗೋಡಾ ಪ್ರದಾನ

KannadaprabhaNewsNetwork |  
Published : Apr 22, 2026, 03:15 AM IST
ವಿಜಯಪುರದ  ರಾಣಿಚೆನ್ನಮ್ಮ ಮಹಿಳಾ ವಿಶ್ವವಿದ್ಯಾಲಯ ಡಾ. ಆಶಾದೇವಿ ಗುಡಗುಂಟಿ ಅವರಿಗೆ ಗೌರವ ಡಾಕ್ಟರೇಟ್‌ ಪ್ರಶಸ್ತಿ ನೀಡಿ ಗೌರವಿಸಿದೆ. ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಹಾಗೂ ಇತರರಿದ್ದಾರೆ.  | Kannada Prabha

ಸಾರಾಂಶ

ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಅವರ ಪತ್ನಿ ಆಶಾದೇವಿ ಗುಡಗುಂಟಿ ಅವರಿಗೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಮಂಗಳವಾರ ತನ್ನ 17ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಜಮಖಂಡಿ

ನಗರ ಶಾಸಕ ಜಗದೀಶ ಗುಡಗುಂಟಿ ಅವರ ಪತ್ನಿ ಆಶಾದೇವಿ ಗುಡಗುಂಟಿ ಅವರಿಗೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಮಂಗಳವಾರ ತನ್ನ 17ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರಟ್‌ ಪದವಿ ಪ್ರದಾನ ಮಾಡಿ ಗೌರವಿಸಲಾಯಿತು.ವಿಶ್ವವಿದ್ಯಾಲಯದ ಕುಲಪತಿ ಹಾಗೂ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌, ಮುಂಬೈ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ ಉಜ್ವಲಾ ಚಕ್ರದೇವ, ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಮುಖ್ಯ ಆಡಳಿತಾಧಿಕಾರಿ ಶಂಕರಗೌಡ ಸೋಮನಾಳ, ಕುಲಸಚಿವ ಎಲ್‌.ಬಿ. ಲಕ್ಕನವರ ಇತರರು ವೇದಿಕೆಯಲ್ಲಿದ್ದರು.

ಆಶಾದೇವಿ ಅವರು ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಹಿಳೆಯರಲ್ಲಿ ಶಿಕ್ಷಣ, ಆತ್ಮವಿಶ್ವಾಸ, ಮತ್ತು ಸಾಮಾಜಿಕ ಜಾಗೃತಿ ಬೆಳೆಸುವಲ್ಲಿ ಅವರು ವಿಶೇಷ ಗಮನ ಹರಿಸಿದ್ದಾರೆ. ಆರೋಗ್ಯ ಮತ್ತು ಕಲ್ಯಾಣ ಕಾರ್ಯಕ್ರಮಗಳ ಮೂಲಕ ಹಿಂದುಳಿದ ಸಮುದಾಯಗಳ ಬೆಂಬಲವಾಗಿ ನಿಂತಿದ್ದಾರೆ. ಮಹಿಳಾ ಸಬಲೀಕರಣಕ್ಕಾಗಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಯುವ ಜನತೆ ಹಾಗೂ ಮಹಿಳೆಯರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ. ಉದ್ಯಮ ಕ್ಷೇತ್ರದಲ್ಲಿನ ಅವರ ಸಾಧನೆ ಹಾಗೂ ಸಾಮಾಜಿಕ ಸೇವೆ ಗುರುತಿಸಿ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಡಾಕ್ಟರ್‌ ಆಫ್‌ ಲಿಟರೇಚರ್‌ ಗೌರವ ಡಾಕ್ಟರೇಟ್‌ ಪದವಿ ನೀಡಿ ಗೌರವಿಸಿದೆ .

ವಿಜಯಪುರದ ಅಕ್ಕಮಹದೇವಿ ಮಹಿಳಾ ವಿಶ್ವವಿದ್ಯಾಲಯ ಡಾ.ಆಶಾದೇವಿ ಗುಡಗುಂಟಿ ಅವರ ಸಮಾಜಸೇವೆ ಹಾಗೂ ಮಹಿಳಾ ಉದ್ಯಮಿಯಾಗಿ ಮಾಡಿದ ಸಾಧನೆ ಗುರುತಿಸಿ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿರುವುದು ಸಂತಸ ತಂದಿದೆ. ಮಹಿಳೆಯರ ಒಳಿತಿಗಾಗಿ ಯಾವಾಗಲು ಮುಂಚೋಣಿಯಲ್ಲಿರುವ ಅವರೊಂದಿಗೆ 10 ವರ್ಷಗಳಿಂದ ಉತ್ತಮ ಒಡನಾಟವಿದೆ. ಇನ್ನರ್‌ ವ್ಹಿಲ್‌ ಕ್ಲಬ್‌ ಅಧ್ಯಕ್ಷರಾಗಿ ಹಿಂದುಳಿದ ಶಾಲೆಗಳನ್ನು ದತ್ತು ಪಡೆದು, ಮಕ್ಕಳಿಗೆ ಪುಸ್ತಕಗಳು, ಕಲಿಕಾ ಸಾಮಗ್ರಿ, ಗ್ರಂಥಾಲಯ ವ್ಯವಸ್ಥೆ, ಶಾಲೆಯ ಜೀರ್ಣೋದ್ದಾರ, ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ಸಹಾಯ ಸೇರಿದಂತೆ ಅನೇಕ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ವಿವಿಧ ಮಹಿಳಾ ಮಂಡಳಿಗಳ ಆಜೀವ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಡಾಕ್ಟರೇಟ್‌ ಪದವಿ ಸಿಕ್ಕಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ

ಡಾ. ಅಶ್ವಿನಿ ಪೂಜಾರಿ ದಂತ ವೈದ್ಯರು ಜಮಖಂಡಿ

-----

ಡಾ. ಆಶಾದೇವಿ ಗುಡಗುಂಟಿ ಅವರು ಉದ್ಯಮಿಯಾಗಿ, ಸಮಾಜ ಸೇವಕಿಯಾಗಿ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ. ಅನೇಕ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್‌ ಹಾಗೂ ಮೆಡಿಕಲ್‌ ಶಿಕ್ಷಣ ಓದಲು ಆರ್ಥಿಕ ಸಹಾಯ ಮಾಡಿದ್ದಾರೆ. ಕೃಷ್ಣಾ ನದಿಯ ಪ್ರವಾಹ ಸಂತ್ರಸ್ತರಿಗೆ ಆಹಾರ ಕಿಟ್‌, ಬಟ್ಟೆ ವಿತರಣೆ ಸೇರಿ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ಅನಾಥಾಶ್ರಮ, ಕಿವುಡ ಮತ್ತು ಮೂಗ ಮಕ್ಕಳ ಶಾಲೆಗೆ ಆರ್ಥಿಕ ಸಹಾಯ, ಹಿಂದುಳಿದ ಮಹಿಳೆಯರಿಗೆ ಆರ್ಥಿಕ ಸಹಾಯ ಮಾಡುತ್ತಿರುವ ಅವರಿಗೆ ಅನೇಕ ಸಂಘ-ಸಂಸ್ಥೆಗಳು ಹಲವು ಪ್ರಶಸ್ತಿ ನೀಡಿ ಗೌರವಿಸಿವೆ. ಜೊತೆಗೆ ವಿಶ್ವವಿದ್ಯಾಲಯ ನೀಡಿರುವ ಗೌರವ ಡಾಕ್ಟರೇಟ್‌ ಪ್ರಶಸ್ತಿಗಳ ಕಿರೀಟಕ್ಕೆ ಮತ್ತೊಂದು ಗರಿ ಸೇರಿದಂತಾಗಿದೆ.

- ಚಂದ್ರಕಲಾ ತುಪ್ಪದ ಸದಸ್ಯರು ರಾಣಿ ಚೆನ್ನಮ್ಮ ಮಹಿಳಾ ಮಂಡಳ ಜಮಖಂಡಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಯೊಬ್ಬ ವ್ಯಾಪಾರಸ್ಥ ಜಿಎಸ್‌ಟಿ ಅಡಿಯಲ್ಲೇ ವ್ಯವಹರಿಸಿ: ಡಾ.ಕಿಶೋರ ಭಟ್ಟ
ಬಸವತತ್ವ ಪಾಲನೆಯಿಂದ ವಿಶ್ವಮಾನವರಾಗಲು ಸಾಧ್ಯ: ಸಚಿವ ತಿಮ್ಮಾಪುರ