ಆಶಾದೇವಿ ಗುಡಗುಂಟಿಗೆ ಗೌರವ ಡಾಕ್ಟರೇಟ್‌ ಪ್ರದಾನ ಇಂದು

KannadaprabhaNewsNetwork |  
Published : Apr 21, 2026, 03:00 AM IST
ಶ್ರೀಮತಿ ಆಶಾದೇವಿ ಜಗದೀಶ ಗುಡಗುಂಟಿ, ಉದ್ಯಮಿಗಳು ಹಾಗೂ ಸಮಾಜ ಸೇವಕರು ಜಮಖಂಡಿ.  | Kannada Prabha

ಸಾರಾಂಶ

ಜಮಖಂಡಿನಗರದ ಶಾಸಕ ಜಗದೀಶ ಗುಡಗುಂಟಿ ಅವರ ಪತ್ನಿ ಆಶಾದೇವಿ ಗುಡಗುಂಟಿ ಅವರಿಗೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಉದ್ಯಮ ಕ್ಷೇತ್ರ ಹಾಗೂ ಸಮಾಜಿಕ ಸೇವೆ ಗುರುತಿಸಿ ಗೌರವ ಡಾಕ್ಟರೇಟ್‌ ಪದವಿ ನೀಡಲು ತೀರ್ಮಾನಿಸಿದ್ದು, ಏ.21ರಂದು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಜಮಖಂಡಿ

ನಗರದ ಶಾಸಕ ಜಗದೀಶ ಗುಡಗುಂಟಿ ಅವರ ಪತ್ನಿ ಆಶಾದೇವಿ ಗುಡಗುಂಟಿ ಅವರಿಗೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಉದ್ಯಮ ಕ್ಷೇತ್ರ ಹಾಗೂ ಸಮಾಜಿಕ ಸೇವೆ ಗುರುತಿಸಿ ಗೌರವ ಡಾಕ್ಟರೇಟ್‌ ಪದವಿ ನೀಡಲು ತೀರ್ಮಾನಿಸಿದ್ದು, ಏ.21ರಂದು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.ಉದ್ಯಮಶೀಲ ನಾಯಕತ್ವ ಹಾಗೂ ಮಹಿಳಾ ಸಬಲೀಕರಣ ಮುಂಚೂಣಿಯಲ್ಲಿರುವ ಆಶಾದೇವಿ ಗುಡಗುಂಟಿ ಅವರು ಸಾಮಾಜಿಕ ಜಾಗೃತಿಯುಳ್ಳ ಮಹಿಳೆಯಾಗಿದ್ದಾರೆ. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಾರ್ಪೋರೇಟ್‌ ನಾಯಕತ್ವ, ಸಹಕಾರಿ ವ್ಯವಸ್ಥಾಪನೆಯನ್ನು ಯಶಸ್ವಿಯಾಗಿ ಒಗ್ಗೂಡಿಸಿದ್ದಾರೆ. ಪ್ರಭುಲಿಂಗೇಶ್ವರ ಶುಗರ್ಸ್‌, ಶಿಕ್ಷಣ ಸಂಸ್ಥೆ, ಪತ್ತಿನ ಸಹಕಾರ ಸಂಘ, ಬಯೋ ಎನರ್ಜಿ ಕಂಪನಿ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನರ್‌ವ್ಹಿಲ್‌ ಕ್ಲಬ್‌, ರಾಣಿ ಚೆನ್ನಮ್ಮ ಮಹಿಳಾ ಮಂಡಳ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ನಿರ್ದೇಶಕಿ, ಅಧ್ಯಕ್ಷೆ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ.

ಮಹಿಳೆಯರಲ್ಲಿ ಶಿಕ್ಷಣ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜಾಗೃತಿ ಬೆಳೆಸುವಲ್ಲಿ ಅವರು ವಿಶೇಷ ಗಮನ ಹರಿಸಿದ್ದಾರೆ. ಆರೋಗ್ಯಮತ್ತು ಕಲ್ಯಾಣ ಕಾರ್ಯಕ್ರಮಗಳ ಮೂಲಕ ಹಿಂದುಳಿದ ಸಮುದಾಯಗಳ ಬೆಂಬಲವಾಗಿ ನಿಂತಿದ್ದಾರೆ. ಮಹಿಳಾ ಸಬಲೀಕರಣಕ್ಕಾಗಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಯುವಜನತೆ ಹಾಗೂ ಮಹಿಳೆಯರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ. ಸಮಾಜ ಸೇವೆಗೆ ಇವರು ನೀಡಿದ ಕೊಡುಗೆಗಳು ಮತ್ತು ಸಾಧನೆಗಳನ್ನು ಪರಿಗಣಿಸಿ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ ಸಮಾರಂಭದಲ್ಲಿ ಡಾಕ್ಟರ್‌ ಆಫ್‌ ಲಿಟರೇಚರ್‌ ಗೌರವ ಡಾಕ್ಟರೇಟ್‌ ಪದವಿ ನೀಡಿ ಗೌರವಿಸುತ್ತಿದೆ.ವಿಜಯಪುರದ ಅಕ್ಕಮಹದೇವಿ ಮಹಿಳಾ ವಿಶ್ವವಿದ್ಯಾಲಯ ನನ್ನ ಸಮಾಜಸೇವೆ ಹಾಗೂ ಮಹಿಳಾ ಉದ್ಯಮ ಕ್ಷೇತ್ರದಲ್ಲಿನ ಸೇವೆ ಗುರುತಿಸಿ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡುತ್ತಿರುವುದು ಹರ್ಷ ತಂದಿದೆ. ಮಹಿಳೆಯರ ಒಳಿತಿಗಾಗಿ ಕೆಲಸ ಮಾಡಬೇಕೆಂಬ ನನ್ನ ಉದ್ದೇಶ ಇಮ್ಮಡಿಯಾಗಿದೆ. ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಬೇಕೆನ್ನುವ ನನ್ನ ಭಾವನೆಗೆ ವಿಶ್ವವಿದ್ಯಾಲಯ ಸ್ಫೂರ್ತಿ ನೀಡುವ ಕೆಲಸ ಮಾಡಿದೆ. ಶೋಷಿತರು, ಹಿಂದುಳಿದ ಮಹಿಳೆಯರು, ತುಳಿತಕ್ಕೊಳಗಾದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕೆಂಬ ನಿಟ್ಟನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಗೌರವ ಡಾಕ್ಟರೇಟ್‌ ಬಂದಿರುವುದು ನನ್ನ ಜವಾಬ್ದಾರಿ ಹೆಚ್ಚಿಸಿದೆ. ಸಮಾಜಕ್ಕಾಗಿ ಇನ್ನಷ್ಟು ಸೇವೆ ಸಲ್ಲಿಸುವ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳವಲ್ಲಿ ಪ್ರೇರಣೆ ನೀಡಿದೆ. ನನ್ನ ಅಳಿಲು ಸೇವೆ ಗುರುತಿಸಿದ ವಿಶ್ವವಿದ್ಯಾಲಯದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ.

- ಆಶಾದೇವಿ ಜಗದೀಶ ಗುಡಗುಂಟಿ ಉದ್ಯಮಿಗಳು ಹಾಗೂ ಸಮಾಜ ಸೇವಕರು ಜಮಖಂಡಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶ್ವ ಶಾಂತಿ, ಒಳಿತಿಗಾಗಿ ಪಂಚ ಕಲ್ಯಾಣ ಮಹೋತ್ಸವ
ಬಸವಣ್ಣನವರ ತತ್ವಾದರ್ಶ, ಚಿಂತನೆ ಇಂದಿಗೂ ಪ್ರಸ್ತುತ: ಡಾ.ವೀರಣ್ಣ ಚರಂತಿಮಠ