ಬಸ್‌ ನಿರ್ವಾಹಕನ ಮೇಲೆ ಹಲ್ಲೆ: ಓರ್ವ ಬಂಧನ

KannadaprabhaNewsNetwork |  
Published : Jan 11, 2025, 12:50 AM IST
ಚಿಮ್ಮಡ ಬಸ್‌ ನಿಲ್ದಾಣದಲ್ಲಿ ನಿರ್ವಾಹಕನ ಮೇಲೆ ಹಲ್ಲೆ. | Kannada Prabha

ಸಾರಾಂಶ

ತಾಲೂಕಿನ ಚಿಮ್ಮಡ ಗ್ರಾಮದ ಬಸ್ ನಿಲ್ದಾಣದಲ್ಲಿ ಕಳೆದ ಜ.೮ರಂದು ಬಸ್ ನಿರ್ವಾಹಕನ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಮೂವರು ಸೇರಿ ಹಲ್ಲೆ ನಡೆಸಿದ ಪರಿಣಾಮ ಬನಹಟ್ಟಿ ಪೊಲೀಸರು ಗುರುವಾರ ರಾತ್ರಿ ಓರ್ವನನ್ನು ಬಂಧಿಸಿದ್ದು, ಮತ್ತಿಬ್ಬರ ಬಂಧನಕ್ಕೆ ಜಾಲ ಬೀಸಿದ್ದಾರೆ.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ತಾಲೂಕಿನ ಚಿಮ್ಮಡ ಗ್ರಾಮದ ಬಸ್ ನಿಲ್ದಾಣದಲ್ಲಿ ಕಳೆದ ಜ.೮ರಂದು ಬಸ್ ನಿರ್ವಾಹಕನ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಮೂವರು ಸೇರಿ ಹಲ್ಲೆ ನಡೆಸಿದ ಪರಿಣಾಮ ಬನಹಟ್ಟಿ ಪೊಲೀಸರು ಗುರುವಾರ ರಾತ್ರಿ ಓರ್ವನನ್ನು ಬಂಧಿಸಿದ್ದು, ಮತ್ತಿಬ್ಬರ ಬಂಧನಕ್ಕೆ ಜಾಲ ಬೀಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ ಮಠಪತಿ ಎಂಬಾತನನ್ನು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳಾದ ವಿರೇಶ ಮಠಪತಿ, ಶ್ರೀಶೈಲ ಮಠಪತಿ ಎಂಬುವರನ್ನು ಶೀಘ್ರ ಬಂಧಿಸಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಬಸ್ ನಿರ್ವಾಹಕ ಸದಾಶಿವ ಬಂಡಿನವರಿಂದ ಮೂವರು ಆರೋಪಿಗಳ ವಿರುದ್ಧ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?:

ಕಳೆದ ದಿ.೮ರಂದು ಸಂಜೆ ೫ ಗಂಟೆ ಸುಮಾರಿಗೆ ದೈನಂದಿನವಾಗಿ ಹೊರಡುತ್ತಿದ್ದ ವಿಜಯಪುರ-ಹುಕ್ಕೇರಿ ಬಸ್ ಬನಹಟ್ಟಿ ಬಸ್ ನಿಲ್ದಾಣದಿಂದ ಹೊರಟಿದೆ. ಭರ್ತಿ ತುಂಬಿದ ಬಸ್ ಚಲಿಸುವ ಸಂದರ್ಭ ವಿದ್ಯಾರ್ಥಿಯೋರ್ವ ಹತ್ತುವಾಗ ನಿರ್ವಾಹಕ ಬಸ್ ನಿಲ್ಲಿಸಿಲ್ಲ. ಓಡಿ ಬಂದು ಚಲಿಸುವ ಬಸ್ ಹತ್ತಿ, ಬಸ್ ನಿಲ್ಲಿಸಲು ಆಗುವುದಿಲ್ಲವೇ? ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಆ ಕಡೆ ನಿರ್ವಾಹಕನೂ ಮಾತಿಗೆ ಮಾತು ಬೆಳೆದ ನಂತರ ವಿದ್ಯಾರ್ಥಿಯು ಮೊಬೈಲ್ ಮೂಲಕ ಮನೆಯವರನ್ನು ಚಿಮ್ಮಡ ಬಸ್ ನಿಲ್ದಾಣಕ್ಕೆ ಬರುವಂತೆ ತಿಳಿಸಿದ್ದಾನೆ.

ಬಸ್ ಚಿಮ್ಮಡ ಬಸ್ ನಿಲ್ದಾಣಕ್ಕೆ ಬರುವದಷ್ಟೇ ತಡ ಮೂವರು ಆರೋಪಿಗಳಿಂದ ನಿರ್ವಾಹಕನನ್ನು ಬಸ್‌ನಿಂದ ಕೆಳಗಿಳಿಸಿ ಹಿಗ್ಗಾ-ಮುಗ್ಗಾ ಥಳಿಸಿ ತೀವ್ರ ಗಾಯಗೊಳಿಸಿದ್ದಾರೆ. ನಂತರ ನಿರ್ವಾಹಕ ಬನಹಟ್ಟಿ ಪೊಲೀಸರಿಗೆ ದೂರು ನೀಡಿದ್ದಾನೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ