ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯ ಪರಿಷ್ಕರಣೆ, ವಿಶೇಷ ಪರಿಷ್ಕರಣೆ ಮತ್ತು ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ನಡೆಸಿ, ಮತದಾರರ ಪಟ್ಟಿಯಲ್ಲಿನ ಅನರ್ಹರ ಹೆಸರುಗಳನ್ನು ತೆಗೆಯುವ ಮತ್ತು ಅರ್ಹ ಮತದಾರರ ಹೆಸರುಗಳನ್ನು ಸೆರ್ಪಡೆ ಮಾಡಲಾಗುತ್ತದೆ. ಅದರಂತೆ ರಾಷ್ಟ್ರೀಯ ಚುನಾವಣಾ ಆಯೋಗವು ಪ್ರಸ್ತುತದಲ್ಲಿರುವ ಮತದಾರರ ಪಟ್ಟಿಯನ್ನು ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಮೂಲಕ ಹೊಸ ಮತದಾರರ ಪಟ್ಟಿ ತಯಾರಿಸಲು ಕ್ರಮವಹಿಸಲಾಗುವುದೆಂದು ತಿಳಿಸಿದರು.
ಯಾವುದೇ ವ್ಯಕ್ತಿಯ ಹೆಸರು 2002ರ ಮತದಾರರ ಪಟ್ಟಿಯಲ್ಲಿ ದಾಖಲಾಗಿದ್ದರೆ, ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಕೊಳ್ಳುವುದಕ್ಕಾಗಿ, ಮತದಾರರಾಗಿ ಅವರ ಅರ್ಹತೆ ಸುಸ್ಥಾಪಿಸುವುದಕ್ಕೆ ನಿಗದಿಪಡಿಸಲಾದ ವ್ಯಾಪಕ ಪ್ರಮಾಣದ ಅರ್ಹ ಸರ್ಕಾರಿ ದಸ್ತಾವೇಜುಗಳ ಪೈಕಿ ಯಾವುದನ್ನಾದರೂ ಸಲ್ಲಿಸಬೇಕಾಗುತ್ತದೆ. ಅಲ್ಲದೇ ಹೊಸ ಮತದಾರನಾಗಿ ಅಥವಾ ಬಿಹಾರ ರಾಜ್ಯದ ಹೊರಗಿನಿಂದ ಸ್ಥಳಾಂತರಗೊಂಡ ಮತದಾರನಾಗಿ ನೋಂದಾಯಿಸಿಕೊಳ್ಳುವ ಅರ್ಜಿಯ ಸಂದರ್ಭದಲ್ಲಿ ಇನ್ನು ಮುಂದೆ ಅರ್ಜಿದಾರನು ನಮೂನೆ 6, ನಮೂನೆ 8 ರೊಂದಿಗೆ ಅದರಲ್ಲಿ ಮಾಡಲಾಗಿರುವ ಘೋಷಣೆಗೆ ಬೆಂಬಲವಾಗಿ ಹೆಚ್ಚುವರಿ ಘೋಷಣಾ ನಮೂನೆ ಅನುಬಂಧ ಡಿ ಅನ್ನು ಸಹ ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆಂದೂ ಕೂಡ ನಿರ್ದೇಶಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕೈಪಿಡಿಯನ್ನು ವಿವಿಧ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ವಿವಿಧ ರಾಜಕೀಯ ಪ್ರತಿನಿಧಿಗಳಾದ ಕಾಂಗ್ರೆಸ್ ಪಕ್ಷದಿಂದ ಶ್ರೀನಿವಾಸ ಬಳ್ಳಾರಿ, ರಾಜು ಮನ್ನಿಕೇರಿ, ಬಿಜೆಪಿ ಪಕ್ಷದಿಂದ ಮಲ್ಲಿಕಾರ್ಜುನ ಕಾಂಬಳೆ, ಬಿಎಸ್ಪಿ ಪಕ್ಷದಿಂದ ಯಮನಪ್ಪ ಶಿರೂರ, ಆನಂದ ದೇವಾಡಿಗ ಸೇರಿದಂತೆ ಇತರರು ಉಪಸ್ಥಿತರಿದ್ದರು.