ಕನಕಪುರ: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ರೂರಲ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಗುರುವಾರ ರಾಮನಗರದ ದಾರಿ ದೀಪ ವೃದ್ಧಾಶ್ರಮಕ್ಕೆ ಭೇಟಿ ನೀಡಿ ದಿನಸಿ ಸಾಮಗ್ರಿ ವಿತರಿಸಿದರು.
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಸೇವೆ ತತ್ವವನ್ನು ನೆನೆಯುವ ಅವಕಾಶವನ್ನು ಅರ್ಥ ಪೂರ್ಣವಾಗಿ ಆಚರಿಸಬೇಕೆಂಬ ಸದುದ್ದೇಶದಿಂದ ವಿಜಯದಶಮಿ ಅಂಗವಾಗಿ ಆಶ್ರಮದಲ್ಲೇ ಪೂಜೆ ನೆರವೇರಿಸಿ ಆಶ್ರಮವಾಸಿಗಳಿಗೆ ಸಿಹಿ ಹಂಚಿ ಅವರೊಂದಿಗೆ ಸಂಭ್ರಮಾಚರಣೆ ಮಾಡಿರುವುದು ಸಂತಸ ತಂದಿದೆ ಎಂದರು.
ರೂರಲ್ ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಟಿ.ಬಾಲಕೃಷ್ಣ ಎನ್ನೆಸ್ಸೆಸ್ ಸ್ವಯಂ ಸೇವಕರನ್ನು ಅಭಿನಂದಿಸಿದರು.