ಯಾವುದೇ ಕ್ಷಣ ನಿಗಮ-ಮಂಡಳಿ ಪಟ್ಟಿ ಪ್ರಕಟ, ಈ ಸಲ ಮುಂದೂಡುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

KannadaprabhaNewsNetwork |  
Published : Jan 16, 2024, 01:47 AM IST
ಡಿ.ಕೆ ಶಿವಕುಮಾರ್‌ | Kannada Prabha

ಸಾರಾಂಶ

ನಿಗಮ ಮಂಡಳಿಗಳ ಅಧ್ಯಕ್ಷರುಗಳ ನೇಮಕವನ್ನು ಇನ್ನು ಮುಂದೆ ತಡ ಮಾಡುವುದಿಲ್ಲ. ಇದು ಯಾವ ಕ್ಷಣದಲ್ಲಿ ಬೇಕಾದರೂ ಅಧ್ಯಕ್ಷರ ಪಟ್ಟಿ ಬಿಡುಗಡೆ ಆಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಿಗಮ-ಮಂಡಳಿ ನೇಮಕ ಪಟ್ಟಿ ಮುಂದೂಡುವ ಸಾಧ್ಯತೆಯಿಲ್ಲ. ಯಾವ ಕ್ಷಣದಲ್ಲಿ ಬೇಕಾದರೂ ಆಯ್ಕೆ ಪಟ್ಟಿ ಪ್ರಕಟ ಆಗಬಹುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರಿಗೆ ‘ಸಂಕ್ರಾಂತಿ ವೇಳೆ ನಿಗಮ-ಮಂಡಳಿ ನೇಮಕ ಆಗುತ್ತದೆ ಎಂದು ಹೇಳಿದ್ದಿರಿ’ ಎಂಬ ಪ್ರಶ್ನೆ ತೂರಿ ಬಂತು. ಅದಕ್ಕೆ ಉತ್ತರಿಸಿದ ಅವರು, ‘ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ’ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ಗೆ ವಾರ್ಷಿಕ ಆದಾಯ ₹5 ಲಕ್ಷಕ್ಕೆ ಹೆಚ್ಚಿಸಿ
ರಾಜ್ಯ ಲಕ್ಷಾಂತರ ಅಕ್ರಮ ವಿದೇಶಿ ವಲಸಿಗರ ನೆಲೆ!