ನಾಳೆ- ನಾಳಿದ್ದು ಗೆಡ್ಡೆ ಗೆಣಸು ಮೇಳ

KannadaprabhaNewsNetwork |  
Published : Feb 09, 2024, 01:46 AM IST
44 | Kannada Prabha

ಸಾರಾಂಶ

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೇಳ ಉದ್ಘಾಟಿಸಲಿದ್ದು, ರೋಟರಿ ಕ್ಲಬ್ ಮೈಸೂರು ಪಶ್ಚಿಮದ ಅಧ್ಯಕ್ಷ ರೊಟೇರಿಯನ್ ಎಸ್.ಕೆ. ಸುಧೀಂದ್ರ ಅಧ್ಯಕ್ಷತೆ ವಹಿಸುವರು. 300ಕ್ಕೂ ಹೆಚ್ಚಿನ ಗೆಡ್ಡೆ ಗೆಣಸು ತಳಿಗಳ ಸಂರಕ್ಷಿಸಿರುವ ಕೇರಳದ ಎನ್.ಎಮ್. ಶಾಜಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಇದೇ ವೇಳೆ ನಿರ್ಲಕ್ಷಿತ ಬೆಳೆಗಳ ಕ್ಯಾಲೆಂಡರ್ ಬಿಡುಗಡೆಯಾಗಲಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಸಹಜ ಸಮೃದ್ಧ, ರೋಟರಿ ಕ್ಲಬ್ ಆಫ್ ಮೈಸೂರು ವೆಸ್ಟ್ ಮತ್ತು ಸಹಜ ಸೀಡ್ಸ್‌ ವತಿಯಿಂದ ಗೆಡ್ಡೆ ಗೆಣಸು ಮೇಳವನ್ನು ಫೆ. 10 ಮತ್ತು 11 ರಂದು ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಲಾಗಿದೆ.

ನಿಸರ್ಗದ ಕೊಡುಗೆಯಾದ ಗೆಡ್ಡೆ ಗೆಣಸುಗಳ ಅದ್ಭುತ ಲೋಕವನ್ನು ಮೈಸೂರಿನ ಗ್ರಾಹಕರಿಗೆ ಪರಿಚಯಿಸಲು ಈ ಮೇಳ ಆಯೋಜಿಸಲಾಗಿದೆ. ಎರಡು ದಿನಗಳ ಈ ಮೇಳದಲ್ಲಿ ವಿವಿಧ ಬಗೆಯ ಕಾಡು ಮತ್ತು ನಾಡಿನ ಗೆಢ್ಡೆ ಗೆಣಸುಗಳು, ಮೌಲ್ಯವರ್ಧಿತ ಪಧಾರ್ಥ, ಗೆಣಸಿನ ಅಡುಗೆಗಳು ಪ್ರದರ್ಶನ ಮತ್ತು ಮಾರಾಟಕ್ಕೆ ಬರಲಿವೆ.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೇಳ ಉದ್ಘಾಟಿಸಲಿದ್ದು, ರೋಟರಿ ಕ್ಲಬ್ ಮೈಸೂರು ಪಶ್ಚಿಮದ ಅಧ್ಯಕ್ಷ ರೊಟೇರಿಯನ್ ಎಸ್.ಕೆ. ಸುಧೀಂದ್ರ ಅಧ್ಯಕ್ಷತೆ ವಹಿಸುವರು. 300ಕ್ಕೂ ಹೆಚ್ಚಿನ ಗೆಡ್ಡೆ ಗೆಣಸು ತಳಿಗಳ ಸಂರಕ್ಷಿಸಿರುವ ಕೇರಳದ ಎನ್.ಎಮ್. ಶಾಜಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಇದೇ ವೇಳೆ ನಿರ್ಲಕ್ಷಿತ ಬೆಳೆಗಳ ಕ್ಯಾಲೆಂಡರ್ ಬಿಡುಗಡೆಯಾಗಲಿದೆ.

ಕರ್ನಾಟಕದ ವಿವಿಧ ಭಾಗಗಳಿಂದ ಬರುವ 25ಕ್ಕೂ ಹೆಚ್ಚಿನ ಮಳಿಗೆಗಳು ಗೆಡ್ಡೆ ಗೆಣಸಿನ ಮೌಲ್ಯವರ್ಧಿತ ಪದಾರ್ಥ ಮತ್ತು ಬಗೆ ಬಗೆಯ ಅಡುಗೆಗಳನ್ನು ಉಣಬಡಿಸುವರು. ಪರ್ಪಲ್ ಯಾಮ್, ಮಾವಿನ ಶುಂಠಿ, ಕೂವೆ ಗೆಡ್ಡೆ, ಹುತ್ತರಿ ಗೆಡ್ಡೆ, ಹಳದಿ ಮತ್ತು ಕೆಂಪು ಸಿಹಿ ಗೆಣಸು, ಬಳ್ಳಿ ಬಟಾಟೆ, ಕಪ್ಪು, ಹಸಿರು ಮತ್ತು ಹಳದಿ ಅರಿಷಿಣ, ಸುವರ್ಣ ಗೆಡ್ಡೆ ಮತ್ತು ಬಗೆ ಬಗೆಯ ಕೆಸುವಿನ ಬೀಜದ ಗೆಡ್ಡೆಗಳು ಬಿತ್ತನೆಗೆ ಸಿಗಲಿವೆ.

ಕಪ್ಪು ಕ್ಯಾರೆಟ್, ಬಣ್ಣದ ಬೀಟ್ ರೂಟ್ ಮತ್ತು ದೇಸಿ ತರಕಾರಿ ಬೀಜಗಳು, ಬಗೆ ಬಗೆಯ ಹಣ್ಣಿನ ಗಿಡಗಳು, ಸಿರಿಧಾನ್ಯ , ಬೇಳೆ ಕಾಳು, ಕಪ್ಪು ಹುರಳಿ ಮಾರಾಟಕ್ಕೆ ಬರಲಿವೆ. ರಾಗಿ, ಜೋಳ ಮತ್ತು ಕೊರಲೆಯ ರೊಟ್ಟಿಯ ಜೊತೆ ಗೆಣಸಿನ ಪಲ್ಯ ಚಪ್ಪರಿಸಬಹುದು. ಪರ್ಪಲ್ ಯಾಮ್ ಐಸ್ ಕ್ರೀಂ ರುಚಿ ನೋಡಬಹುದು.

ಗೆಡ್ಡೆ ಗೆಣಸು ಅಡುಗೆ ಸ್ಪರ್ಧೆ

ಫಾಸ್ಟ್ಫುಡ್ ಹಾಗೂ ರೆಡಿ ಟು ಈಟ್ ಆಹಾರಗಳಿಗೆ ಅಧಿಕವಾಗಿ ಮೊರೆ ಹೋಗುತ್ತಿರುವ ನಮ್ಮ ಇಂದಿನ ಪೀಳಿಗೆಗೆ ಗೆಡ್ಡೆ ಗೆಣಸಿನ ಅಡುಗೆಗಳನ್ನು ಪರಿಚಯಿಸುವ ಉದ್ದೇಶದಿಂದ ಗೆಡ್ಡೆ ಗೆಣಸು ಅಡುಗೆ ಸ್ಪರ್ಧೆ ಆಯೋಜಿಸಲಾಗಿದೆ.

ಕಾಡಿನ ಅಥವಾ ಕೃಷಿ ಮೂಲದ ಗೆಡ್ಡೆ ಗೆಣಸುಗಳನ್ನು ಬಳಸಿ ತಯಾರಿಸುವ ಅಡುಗೆಗಳು ಸಾಂಪ್ರದಾಯಿಕವಾಗಿರಬಹುದು ಅಥವಾ ಹೊಸ ರುಚಿಯಾಗಿರಬಹುದು. ವಿವಿಧ ಜಾತಿಯ ಗೆಡ್ಡೆ ಗೆಣಸುಗಳನ್ನು ಬಳಸಿ ಮಾಡಿದ ಅಡುಗೆಯನ್ನು, ಮನೆಯಲ್ಲೇ ತಯಾರಿಸಿ, ಗೆಡ್ಡೆ ಗೆಣಸು ಮೇಳಕ್ಕೆ ಫೆ. 11ರಂದು ಬೆಳಗ್ಗೆ 12ಕ್ಕೆ ತರಬೇಕು.

ಅಪರೂಪದ ಅಡುಗೆ ತಯಾರಿಸಿದವರಿಗೆ ಬಹುಮಾನ ಮತ್ತು ಪ್ರಶಂಸಾ ಪತ್ರ ನೀಡಲಾಗುವುದು. ಆಲೂಗೆಡ್ಡೆಯ ಹೊರತುಪಡಿಸಿ ಮಾಡಿದ ಕಾಡು ಗೆಡ್ಡೆಯ ಅಡುಗೆಗಳಿಗೆ ವಿಶೇಷ ಮನ್ನಣೆ ದೊರೆಯಲಿದೆ.

ಹೆಚ್ಚಿನ ವಿವರಗಳಿಗೆ ಮೊ. 70900 09944, 91645 23840 ಸಂಪರ್ಕಿಸಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

21 ರಿಂದ 24ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ: ಚೇತನಾ ಯಾದವ್
ವೀರಾಂಜನೇಯ ಸ್ವಾಮಿಯ 13ನೇ ವರ್ಷದ ಜಯಂತ್ಯುತ್ಸವ