ವೆಂಕಟಾಚಲಧಾಮದಲ್ಲಿ ವಿಜೃಂಭಿಸಿತು ರಾಯರ ವೈಭವ

KannadaprabhaNewsNetwork |  
Published : Aug 21, 2024, 12:32 AM IST
29 | Kannada Prabha

ಸಾರಾಂಶ

ಬೆಳಗ್ಗೆ ಅಷ್ಟೋತ್ತರ ಪಾರಾಯಣ ನಂತರ ಪಂಚಾಮೃತಾಭಿಷೇಕ

ಕನ್ನಡಪ್ರಭ ವಾರ್ತೆ ಮೈಸೂರು

ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಚಾಮರಾಜ ಜೋಡಿ ರಸ್ತೆ ಭಂಡಾರಕೇರಿ ಮಠದ ವೇಂಕಟಾಚಲ ಧಾಮದಲ್ಲಿ ಮಂಗಳವಾರ ಪೂರ್ವಾರಾಧನೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಜೃಂಭಣೆಯಿಂದ ಚಾಲನೆ ನೀಡಲಾಯಿತು.

ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಪ್ರತಿಷ್ಠಾಪಿಸಿರುವ ಶ್ರೀನಿವಾಸ ಮತ್ತು ಮೃತ್ತಿಕಾ ಸನ್ನಿಧಿ ಕ್ಷೇತ್ರದಲ್ಲಿ ರಾಯರ ವೃಂದಾವನಕ್ಕೆ ಬೆಳಗ್ಗೆ ಅಷ್ಟೋತ್ತರ ಪಾರಾಯಣ ನಂತರ ಪಂಚಾಮೃತಾಭಿಷೇಕ ನೆರವೇರಿತು. ಪ್ರಧಾನ ಅರ್ಚಕ ರಾಘವೇಂದ್ರ ಆಚಾರ್ಯರ ನೇತೃತ್ವದಲ್ಲಿ ವೃಂದಾವನಕ್ಕೆ ಪೂಜೆ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿಗೆ ನೂರಾರು ಭಕ್ತರು ಸಾಕ್ಷಿಯಾದರು. ಅರ್ಚಕ ಗಿರೀಶ ಆಚಾರ್ಯರ ಮಾರ್ಗದರ್ಶನದಲ್ಲಿ ಭಕ್ತರಿಂದ ರಾಯರ ಪಾದುಕೆಗಳಿಗೆ ಪಾದಪೂಜೆ, ಕನಕಾಭಿಷೇಕ ಸಂಪನ್ನಗೊಂಡಿತು. ಶ್ರೀ ಸತ್ಯಧ್ಯಾನ ಭಜನಾ ಮಂಡಳಿಯ 30ಕ್ಕೂ ಹೆಚ್ಚು ವನಿತೆಯರು ದಾಸರ ಪದಗಳನ್ನು ಹಾಡಿ ಭಕ್ತಿಸುಧೆ ಹರಿಸಿದರು. ಭಕ್ತರು ರಥೋತ್ಸವ ಸೇವೆ ಮಾಡಿ ಭಕ್ತಿಭಾವ ಮೆರೆದರು. ನಂತರ ನೂರಾರು ಜನರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ದೇವರನಾಮ ಗಾಯನ - ಸಾಂಸ್ಕೃತಿಕ ಕಾರ್ಯಕ್ರಮ ಸರಣಿಯಲ್ಲಿ ಮಂಗಳವಾರ ಸಂಜೆ 6ಕ್ಕೆ ಯುವ ಕಲಾವಿದೆ ಎ.ಆರ್. ಕೌಸಲ್ಯಾ ರಘುರಾಂ ತಂಡದಿಂದ ದೇವರ ನಾಮಗಳ ಗಾಯನ ಸೇವೆ ಗಮನ ಸೆಳೆಯಿತು. ಪಕ್ಕವಾದ್ಯದಲ್ಲಿ ಪ್ರಮಥ್ ರವಿಶಂಕರ್ (ಮೃದಂಗ) ಮತ್ತು ಶ್ರೀಲಲಿತಾ ರಾಮಕೃಷ್ಣ ( ವಯೋಲಿನ್) ಸಾಥ್ ನೀಡಿ ಪ್ರೌಢಿಮೆ ಮೆರೆದರು. ಯುವ ಕಲಾವಿದರ ಗೋಷ್ಠಿ ಮೆಚ್ಚುಗೆಗೆ ಪಾತ್ರವಾಯಿತು.

ನಂತರ ಪ್ರಾಕಾರ ಉತ್ಸವ, ಅಷ್ಟಾವಧಾನ ಸೇವೆ ಮತ್ತು ರಂಗಪೂಜೆ, ರಾಯರಿಗೆ ಮತ್ತು ಶ್ರೀನಿವಾಸ ದೇವರಿಗೆ ಮಹಾಮಂಗಳಾರತಿ

ಸಂಪನ್ನಗೊಂಡಿತು. ಬುಧವಾರ ರಾಯರ ಮಧ್ಯಾರಾಧನೆ ಅಂಗವಾಗಿ ದಿನಪೂರ್ಣ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೈಬ್ರರಿ ಮೇಲ್ವಿಚಾರಕರಿಗೆ ವರ್ಷದಿಂದ ಅರ್ಧ ವೇತನ!
ಕುರಿಗಾಹಿ ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು : ಸಿದ್ದು ಕಿಡಿ