ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಹನುಮಂತಪುರ ಗ್ರಾಮದಲ್ಲಿ 6 ಕೋಟಿ 80 ಲಕ್ಷ ರು. ವೆಚ್ಚದಲ್ಲಿ ರೈತರ ಕೃಷಿ ಪಂಪ್ ಸೆಟ್ಗಳ ವಿದ್ಯುದೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಬರಪೀಡಿತ ಹೋಬಳಿ ಎಂದೆ ಹಣೆಪಟ್ಟಿ ಕಟ್ಟಿಕೊಂಡಿರುವ ಆತಗೂರು ಹೋಬಳಿಯನ್ನು ಕೆಲ ದಿನಗಳಲ್ಲೇ ಅಳಿಸಲಾಗುವುದು ಎಂದರು.
ಈ ಬಾರಿ ನಿರೀಕ್ಷೆಯಂತೆ ಮಳೆ ಬಂದಿದ್ದರೆ ಹೋಬಳಿಯ ಕೆರೆ ಕಟ್ಟೆಗಳಿಗೆ ನೀರು ತುಂಬಿಸಿ ಬೇಸಿಗೆಗೆ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ, ಮಳೆ ಅಭಾವದಿಂದ ಶಿಂಷಾ ನದಿಯೇ ಬತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.ಅಕ್ರಮ ಸಕ್ರಮ ಯೋಜನೆಯಡಿ ಹಣ ಪಾವತಿಸಿರುವ ರೈತರ ಕೃಷಿ ಪಂಪ್ ಸೆಟ್ಗಳಿಗೆ ಜೇಷ್ಠತೆ ಆಧಾರದ ಮೇಲೆ ಟ್ರಾನ್ಸ್ ಫಾರ್ಮರ್ ಅಳವಡಿಸಲಾಗುತ್ತಿದೆ. ರೈತರ ಪಂಪ್ ಸೆಟ್ಗಳ ಮೂಲಕ ಬೆಳೆ ರಕ್ಷಿಸಿಕೊಳ್ಳಲೆಂದು ಪಂಪ್ ಸೆಟ್ಗಳಿಗೆ ವಿದ್ಯುದೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಹೋಬಳಿಯಲ್ಲಿ ಶಾಶ್ವತವಾದ ನೀರಾವರಿ ಯೋಜನೆ ರೂಪಿಸದ ಕಾರಣ ಬೇಸಿಗೆಯಲ್ಲಿ ಈ ಭಾಗದ ರೈತರ ಕೊಳವೆ ಭಾವಿಗಳ, ಕೆರೆ ಕಟ್ಟೆಗಳಿಗೆ ನೀರಿಲ್ಲದೆ ಒಣಗುತ್ತಿವೆ. ಮಳೆಯನ್ನು ನಂಬಿಕೊಂಡು ಬೇಸಾಯ ಮಾಡುತ್ತಿರುವ ರೈತರು ಮಳೆ ಬಾರದ ವೇಳೆಬೆಳೆದ ಬೆಳೆಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದರು.
ಈ ವೇಳೆ ಮನ್ಮುಲ್ ನಿರ್ದೇಶಕ ಕದಲೂರು ರಾಮಕೃಷ್ಣ, ಸೆಸ್ಕಾಂ ಇಇ ಶಿವಕುಮಾರ್, ಅಭಿಯಂತರರಾದ ರಮೇಶ್, ಮೋಹನ್, ಪ್ರದೀಪ್, ಮುಖಂಡರಾದ ಗೋವಿಂದ, ಅಶೋಕ್, ರಮೇಶ್, ಪೂರಸಭಾ ಮಾಜಿ ಸದಸ್ಯ ಡಾಬಾ ಮಹೇಶ್, ಮಹಾಲಿಂಗು ಮತ್ತಿತರರು ಇದ್ದರು.