ದೇಶದ ಅಭಿವೃದ್ಧಿಗೆ ಅಟಲ್ ಕೊಡುಗೆ ಅಪಾರ: ಅರವಿಂದ್

KannadaprabhaNewsNetwork |  
Published : Dec 26, 2023, 01:30 AM IST
೨೫ಕೆಎಂಎನ್‌ಡಿ-೪ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಜನ್ಮದಿನ ಆಚರಿಸಿದರು. | Kannada Prabha

ಸಾರಾಂಶ

ವಿಶ್ವ ಕಂಡ ನಾಯಕರಲ್ಲಿ ಅಟಲ್ ಬಿಹಾರಿ ವಾಜಪೇಯಿ ಒಬ್ಬರು. ಅಜಾತಶತ್ರು ಎಂದು ಕರೆಸಿಕೊಂಡಿದ್ದ ವಾಜಪೇಯಿ ಅವರು ಸ್ವಾತಂತ್ರ್ಯೋತ್ತರ ರಾಜಕಾರಣದಲ್ಲಿ ಸದಾ ಹಸಿರಾಗಿರುವ ಹೆಸರು. ಅವರೊಬ್ಬ ನಿಷ್ಕಳಂಕ ಚಾರಿತ್ರ್ಯ, ಮೇರು ವ್ಯಕ್ತಿತ್ವದ ಮಹಾನ್ ಜನನಾಯಕ.

ಕನ್ನಡಪ್ರಭ ವಾರ್ತೆ ಮಂಡ್ಯದೇಶದ ಅಭಿವೃದ್ಧಿಗೆ ವಾಜಪೇಯಿ ಕೊಡುಗೆ ಅಪಾರ. ಅವರ ದಿಟ್ಟ ನಿರ್ಧಾರಗಳಿಂದ ದೇಶದಲ್ಲಿ ದುಷ್ಕೃತ್ಯಗಳು ಕಡಿಮೆಯಾಗಿದ್ದವು ಎಂದು ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ತಿಳಿಸಿದರು.

ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಅಜಾತಶತ್ರು ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ ಮತ್ತು ಸಿಹಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿಶ್ವ ಕಂಡ ನಾಯಕರಲ್ಲಿ ಅಟಲ್ ಬಿಹಾರಿ ವಾಜಪೇಯಿ ಒಬ್ಬರು. ಅಜಾತಶತ್ರು ಎಂದು ಕರೆಸಿಕೊಂಡಿದ್ದ ವಾಜಪೇಯಿ ಅವರು ಸ್ವಾತಂತ್ರ್ಯೋತ್ತರ ರಾಜಕಾರಣದಲ್ಲಿ ಸದಾ ಹಸಿರಾಗಿರುವ ಹೆಸರು. ಅವರೊಬ್ಬ ನಿಷ್ಕಳಂಕ ಚಾರಿತ್ರ್ಯ, ಮೇರು ವ್ಯಕ್ತಿತ್ವದ ಮಹಾನ್ ಜನನಾಯಕ ಎಂದು ಸ್ಮರಿಸಿದರು.

೧೯೯೮-೨೦೦೪ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ ಅವರು ಬಿಜೆಪಿಯಿಂದ ದೇಶದ ಪ್ರಧಾನಿಯಾದ ಮೊದಲ ನಾಯಕರಾಗಿದ್ದರು. ದೇಶಕ್ಕೆ ೩ ಭಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಅವರ ಅಧಿಕಾರಾವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳು, ಕಾರ್ಯಕ್ರಮಗಳು ಅನುಷ್ಠಾನಗೊಂಡವು. ಭಾರತವು ೧೯೯೮ರಲ್ಲಿ ರಾಜಸ್ಥಾನದ ಪೋಖ್ರಾನ್‌ನಲ್ಲಿ ಸರಣಿ ಪರಮಾಣು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿತು ಎಂದರು.

ಬಿಜೆಪಿ ಕಚೇರಿಯಲ್ಲಿ ಅಟಲ್ ಜನ್ಮದಿನ ಆಚರಣೆ:

ನಗರದಲ್ಲದಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಮಾಜಿ ಪ್ರಧಾನಮಂತ್ರಿ ವಾಜಪೇಯಿ ಜನ್ಮದಿನ ಆಚರಣೆ ಮತ್ತು ಉತ್ತಮ ಆಡಳಿತ ದಿವಸ್ ಕಾರ್ಯಕ್ರಮಕ್ಕೆ ನಗರ ಬಿಜೆಪಿ ಮೋರ್ಚಾ ಅಧ್ಯಕ್ಷ ವಿವೇಕ್ ಚಾಲನೆ ನೀಡಿದರು.

ಬಳಿಕ ಮಾತನಾಡಿ, ಭಾರತ ಪಾಕಿಸ್ತಾನದ ಜೊತೆ ಉತ್ತಮ ಸಂಬಂಧ ಹೊಂದಬೇಕು ಎಂದು ಕನಸು ಕಂಡಿದ್ದರು. ಭಾರತದಿಂದ ಪಾಕಿಸ್ತಾನಕ್ಕೆ ಬಸ್ ಸಂಪರ್ಕ ಸೇವೆ ಪ್ರಾರಂಭ ಮಾಡಿದ್ದರು, ಆದರೆ ಪಾಕಿಸ್ತಾನ ನರಿಬುದ್ಧಿ ತೋರಿಸಿ ಭಾರತದ ವಿರುದ್ಧ ಕಾರ್ಗಿಲ್ ಯುದ್ಧ ನಡೆಸಿತು. ಅಟಲ್ ದಿಟ್ಟ ನಿರ್ದಾರದಿಂದ ಭಾರತ ವಿಜಯ ಸಾಧಿಸಿತು ಎಂದರು.

ಕಾರ್ಯಕ್ರಮದಲ್ಲಿ ರೈತ ಮೋರ್ಚಾ ಮಾಜಿ ಅಧ್ಯಕ್ಷ ಸಾಯಿರವಿಂದ್ರ ಕಲ್ಲಹಳ್ಳಿ, ತಾಲೂಕು ಉಪಾಧ್ಯಕ್ಷ ಶಿವಕುಮಾರ್‌ಆರಾಧ್ಯ, ಜಿಲ್ಲಾ ಕಾರ್ಯದರ್ಶಿ ಹರ್ಷ, ನಗರಸಭಾ ಮಾಜಿ ಸದಸ್ಯರಾದ ಶಿವಕುಮಾರ್‌ಕೆಂಪಯ್ಯ, ಪ್ರಸನ್ನ, ಚಂದ್ರ, ಮಾಧ್ಯಮ ವಕ್ತಾರ ಸಿ.ಟಿ.ಮಂಜುನಾಥ್, ಗಣೇಶ್, ಶ್ರೀನಿವಾಸ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ