ವಾಜಪೇಯಿ ಜನ್ಮ ಶತಾಬ್ದಿ: ಪುತ್ತೂರಲ್ಲಿ ಅಟಲ್ ವಿರಾಸತ್ ಸಮಾವೇಶಕನ್ನಡಪ್ರಭ ವಾರ್ತೆ ಪುತ್ತೂರು
ಬಡವರು, ಹಿಂದೂ ವಿರೋಧಿ ಸರ್ಕಾರ:
ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ರೈತರು ಮತ್ತು ಬಡವರ ಮೇಲೆ ಅಟ್ಟಹಾಸ ಮೆರೆಯುತ್ತಿದೆ. ಹಿಂದೂ ವಿರೋಧಿ ಈ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕುತ್ತೇವೆ ಎಂಬ ಸಂಕಲ್ಪವನ್ನು ನಾವು ತೊಡಬೇಕಾಗಿದೆ. ಪಕ್ಷವು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಅವರನ್ನು ಗೆಲ್ಲಿಸುವ ಕಾರ್ಯಕರ್ತರು ಇಲ್ಲಿದ್ದು, ದ.ಕ. ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಇಡೀ ರಾಜ್ಯಕ್ಕೆ ಪ್ರೇರಣಾ ಶಕ್ತಿಯಾಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ: ಪ್ರತಿಜ್ಞೆ
ಪಕ್ಷ ಸಂಘಟನೆಯನ್ನು ಬಲ ಪಡಿಸುವ ನಿಟ್ಟಿನಲ್ಲಿ ಕಳೆದ ಒಂದು ವಾರದಿಂದ ಪಕ್ಷದ ಹಿರಿಯ ನಾಯಕರನ್ನ ನಾನು ಭೇಟಿ ಮಾಡುತ್ತಿದ್ದೇನೆ. ಪಕ್ಷವು ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ತರುವುದು ನನ್ನ ಪ್ರತಿಜ್ಞೆಯಾಗಿದೆ. ದರಿದ್ರ ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎರಡೂವರೆ ವರ್ಷದಲ್ಲಿ ಕಿತ್ತೊಗೆಯದೆ ನಾವು ವಿಶ್ರಾಂತಿ ಪಡೆಯುವಂತಿಲ್ಲ. ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿಗಾಗಿ ಒಂದು ರೂಪಾಯಿ ಖರ್ಚು ಮಾಡಿಲ್ಲ. ಜನಸಾಮಾನ್ಯರಿಗೆ ಈ ಸರ್ಕಾರ ಬದುಕಿದ್ದೂ ಸತ್ತಂತಿದೆ. ಮುಂದಿನ ಎರೂಡವರೆ ವರ್ಷಗಳಲ್ಲಿ ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ೧೨ ವರ್ಷಗಳಲ್ಲಿ ದೇಶವನ್ನು ಬಲಿಷ್ಠಗೊಳಿಸುತ್ತಾ ಪ್ರಗತಿ ಹಂತಕ್ಕೆ ಕೊಂಡೊಯ್ದಿದ್ದಾರೆ. ಇತ್ತೀಚೆಗೆ ಬಿಹಾರದಲ್ಲಿ ನಡೆದ ಚುನಾವಣೆಯ ಫಲಿತಾಂಶ ಇದಕ್ಕೆ ಸಾಕ್ಷಿಯಾಗಿದೆ. ಇದರಿಂದಾಗಿ ರಾಹುಲ್ ಗಾಂಧಿ ಜೀವನದಲ್ಲಿ ಜಿಗುಪ್ಸೆಗೊಂಡು ರಾಜಕೀಯ ನಿವೃತ್ತಿಗೆ ತೀರ್ಮಾನಿಸಿದರೆ ಅತಿಶಯೋಕ್ತಿಯಲ್ಲ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರು ಕಾರ್ಯಕರ್ತರಿಗೆ ತಲುಪಲಾಗದ ಜಾಗದಲ್ಲಿ ತನ್ನನ್ನು ಕೂರಿಸಬೇಡ ಎಂದು ದೇವರಲ್ಲಿ ಪ್ರಾರ್ಥಿಸಿದ್ದರು. ಪ್ರಸ್ತುತ ಪುತ್ತೂರಿಗೆ ಅವರ ಈ ಮಾತು ಅತ್ಯಂತ ಅಗತ್ಯದ ಸಂದೇಶವಾಗಿದೆ. ರಾಜಕಾರಣದ ಎಲ್ಲ ಪ್ರಶ್ನೆಗಳಿಗೆ ಅಟಲ್ಜೀ ಅವರ ರಾಜಕೀಯ ಜೀವನ ಉತ್ತರವಾಗಿದೆ. ಅವರ ಧ್ಯೇಯವಾಕ್ಯದ ರಾಜಕೀಯ ನಾವು ಮಾಡಬೇಕಾಗಿದೆ ಎಂದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದರು. ಶಾಸಕರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಉಮಾನಾಥ ಕೊಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಡಾ. ಧನಂಜಯ ಸರ್ಜಿ, ಮಾಜಿ ಸಚಿವ ಎಸ್. ಅಂಗಾರ, ಮಾಜಿ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಶಾಸಕರಾದ ಮಲ್ಲಿಕಾ ಪ್ರಸಾದ್, ಸಂಜೀವ ಮಠಂದೂರು, ಪ್ರಮುಖರಾದ ಉದಯ ಕುಮಾರ್ ಶೆಟ್ಟಿ, ಪ್ರೇಮಾನಂದ ಶೆಟ್ಟಿ, ಆರ್. ಸಿ. ನಾರಾಯಣ, ಗೋಪಾಲಕೃಷ್ಣ ಹೇರಳೆ, ಯತೀಶ್ ಆರ್ವರ್, ಪ್ರಸನ್ನ ಮಾರ್ತ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ವಾಗತಿಸಿದರು. ಸಂಚಾಲಕ ಕಿಶೋರ್ ಕುಮಾರ್ ಬೊಟ್ಯಾಡಿ ಪ್ರಸ್ತಾವನೆಗೈದರು. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ವಂದಿಸಿದರು. ಸುನಿಲ್ ಆಳ್ವ ಕಾರ್ಯಕ್ರಮ ನಿರೂಪಿಸಿದರು. ರಾಜೇಶ ಬನ್ನೂರು, ಚಂದ್ರಶೇಖರ ಬಪ್ಪಳಿಗೆ ಸಹಕಾರಿಸಿದರು.