ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಕೆಂಚನಹಳ್ಳಿಯಲ್ಲಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಸವರ್ಣಿಯರು ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಕ್ಕೆ ಭೇಟಿ ನೀಡಿ ಹಲ್ಲೆಗೊಳಗಾದ ಕುಟುಂಬದವರಿಗೆ ಧೈರ್ಯ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಂಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ ನಡೆದಿರುವ ಘಟನೆ ಖಂಡನೀಯ. ಈ ಕೂಡಲೇ ಹಲ್ಲೆಗೊಳಗಾದ ದಲಿತ ಕುಟುಂಬಕ್ಕೆ ರಕ್ಷಣೆ ನೀಡಿ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.ದಲಿತರನ್ನು ಮತ ಬ್ಯಾಂಕ್ ಆಗಿ ಕಾಂಗ್ರೆಸ್ ಪರಿವರ್ತಿಸಿಕೊಂಡು ಆ ವರ್ಗವನ್ನೇ ಕಡೆಗಣಿಸಿದೆ. ದಲಿತರ ಮತ ಪಡೆದು ಅವರಿಗೆ ರಕ್ಷಣೆ ನೀಡದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದಾದರೂ ಏತಕ್ಕೆ ಎಂಬ ಪ್ರಶ್ನೆ ಮೂಡಿದೆ ಎಂದು ಕಿಡಿಕಾರಿದರು.
ಕೆಂಚನಹಳ್ಳಿಯಲ್ಲಿ ಜಮೀನಿನ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಯಾವುದೋ ಸಮಸ್ಯೆ ಬಂದಾಗ ಕಾನೂನಾತ್ಮಕವಾಗಿ ಬಗೆಹರಿಸಬೇಕು. ಬಲವಂತವಾಗಿ ಹಲ್ಲೆ ನಡೆಸುವುದು, ದೌರ್ಜನ್ಯವೆಸಗುವುದು ತಪ್ಪು. ಶಂಕರ್ ಅವರ ತಾತನವರ ಹೆಸರಿನಲ್ಲಿ 1933ರಿಂದಲೂ ಕೆಂಚನಹಳ್ಳಿಯಲ್ಲಿ 12 ಎಕರೆ ಜಮೀನಿದೆ. ಇದೀಗ ಉಳುಮೆ ಮಾಡಲೆಂದಾಗ ಈ ಘಟನೆ ನಡೆದಿರುವುದು ಖೇದಕರ ಎಂದರು.
ದಲಿತರು ಯಾವುದೇ ಆಸೆ, ಆಮೀಷಗಳಿಗೆ ಒಳಗಾಗದೆ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಆದರೆ, ಈ ಸಮಾಜದ ರಕ್ಷಣೆ ಮಾಡಲು ಸಾಧ್ಯವಾಗದ ಕಾಂಗ್ರೆಸ್ಸಿಗರು ಅಧಿಕಾರದಲ್ಲಿರಲು ಯೋಗ್ಯರೇ ಎಂದು ಪ್ರಶ್ನಿಸಿದರು.
ಎಸ್ಸಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್, ಜಿಲ್ಲಾಧ್ಯಕ್ಷ ಜಯರಾಂ, ಮುಖಂಡರಾದ ಭದ್ರಚಲಮೂರ್ತಿ, ಮುನಿರಾಜು, ಅಲ್ಪಹಳ್ಳಿ ಗೋವಿಂದಯ್ಯ, ಬೊಮ್ಮರಾಜು, ಚಲುವ, ಪ್ರಶಾಂತ್, ಕೆಂಚನಹಳ್ಳಿ ಕೃಷ್ಣಮೂರ್ತಿ, ಸೆಣಬ ಜಯಲಕ್ಷ್ಮೀ ಇತರರಿದ್ದರು.