ಸಂತೋಷ್ ಮತ್ತು ಬೆಂಬಲಿಗರ ಮೇಲೆ ಅಟ್ರಾಸಿಟಿ ಕೇಸ್‌

KannadaprabhaNewsNetwork |  
Published : Jan 28, 2025, 12:50 AM IST
ಎನ್ ಆರ್ ಸಂತೋಷ್ ಇತರರ ಮೇಲೆ ಅಟ್ರಾಸಿಟಿ, ಧರಣಿ ಕುಳಿತ ಬೆಂಬಲಿತರು  | Kannada Prabha

ಸಾರಾಂಶ

ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಹಾಗೂ ಇತರೆ 13 ಮಂದಿಯ ಮೇಲೆ ಅಟ್ರಾಸಿಟಿ ದೂರನ್ನು ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ ನೀಡಿರುವ ಹಿನ್ನೆಲೆಯಲ್ಲಿ ಎನ್ ಆರ್ ಸಂತೋಷ್ ಹಾಗೂ ಬೆಂಬಲಿತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಘಟನೆ ನಡೆದು 7 ದಿವಸದ ನಂತರ ದೂರು ನೀಡಲಾಗಿದೆ. ಏಕೆ ಈ ಮೊದಲು ಕೊಡಲಿಲ್ಲ ಎಂದು ಪ್ರಶ್ನಿಸಿದರು. ಶಾಸಕರ ಮತ್ತು ನಗರಸಭಾ ಅಧ್ಯಕ್ಷರ ಬೆದರಿಕೆಗೆ ನಾನು ಜಗ್ಗುವನಲ್ಲ, ನ್ಯಾಯಕ್ಕಾಗಿ ಹೋರಾಡುತ್ತೇನೆ ನನಗೂ ಬೆಂಬಲಿತರು ಇದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಹಾಗೂ ಇತರೆ 13 ಮಂದಿಯ ಮೇಲೆ ಅಟ್ರಾಸಿಟಿ ದೂರನ್ನು ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ ನೀಡಿರುವ ಹಿನ್ನೆಲೆಯಲ್ಲಿ ಎನ್ ಆರ್ ಸಂತೋಷ್ ಹಾಗೂ ಬೆಂಬಲಿತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಶಾಸಕರು ಮತ್ತು ನಗರಸಭಾ ಅಧ್ಯಕ್ಷ ಸಮೀವುಲ್ಲಾ ಅವರ ಕುತಂತ್ರದಿಂದ ಪ್ರಕರಣ ದಾಖಲಿಸಲಾಗಿದ್ದು, ಇದನ್ನು ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಭಾನುವಾರ ರಾತ್ರಿಯಿಂದ ಅಹೋರಾತ್ರಿ ಧರಣಿ ನಡೆಸಿದರು. ಡಿವೈಎಸ್ಪಿ ಲೋಕೇಶ್ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಐದು ದಿನಗಳಲ್ಲಿ ಪ್ರಕರಣವನ್ನು ಇತ್ಯರ್ಥ ಪಡಿಸುವುದಾಗಿ ಆಶ್ವಾಸನೆ ನೀಡಿದ ನಂತರ ಪ್ರತಿಭಟನೆಯನ್ನು ಸೋಮವಾರ ಸಂಜೆ ಹಿಂಪಡೆಯಲಾಯಿತು.

ಎನ್. ಆರ್‌. ಸಂತೋಷ್ ಮತ್ತು ಮಾಜಿ ನಗರಸಭಾ ಅಧ್ಯಕ್ಷ ಹಾಲಿ ಸದಸ್ಯ ಗಿರೀಶ್ ನೇತತ್ವದಲ್ಲಿ ನಗರಸಭೆಯಲ್ಲಿನ ಭ್ರಷ್ಟಾಚಾರ ವಿರೋಧಿಸಿ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರ ಬೆಂಬಲಿತರು ಹಾಗೂ ಎನ್‌. ಆರ್ ಸಂತೋಷ್ ಬೆಂಬಲಿತರ ನಡುವೆ ವಾಗ್ವಾದ ನಡೆದಿತ್ತು, ಈ ಹಿನ್ನೆಲೆಯಲ್ಲಿ ಮನೋಹರ್‌ ನಮ್ಮ ಹಾಗೂ 13 ಜನರ ಮೇಲೆ ಜಾತಿನಿಂದನೆ ಪ್ರಕರಣ ದಾಖಲಿಸಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರು.

ಎನ್‌. ಆರ್‌. ಸಂತೋಷ್ ಮಾಧ್ಯಮದವರೊಂದಿಗೆ ಮಾತನಾಡಿ, ಘಟನೆ ನಡೆದು 7 ದಿವಸದ ನಂತರ ದೂರು ನೀಡಲಾಗಿದೆ. ಏಕೆ ಈ ಮೊದಲು ಕೊಡಲಿಲ್ಲ ಎಂದು ಪ್ರಶ್ನಿಸಿದರು. ಶಾಸಕರ ಮತ್ತು ನಗರಸಭಾ ಅಧ್ಯಕ್ಷರ ಬೆದರಿಕೆಗೆ ನಾನು ಜಗ್ಗುವನಲ್ಲ, ನ್ಯಾಯಕ್ಕಾಗಿ ಹೋರಾಡುತ್ತೇನೆ ನನಗೂ ಬೆಂಬಲಿತರು ಇದ್ದಾರೆ ಎಂದರು. ತಾಲೂಕಿನಲ್ಲಿ ಹಗರಣಗಳು, ಕಳಪೆ ಕಾಮಗಾರಿಗಳು ಹಾಗೂ ನಗರಸಭೆಯ ಅಖಂಡ ಭ್ರಷ್ಟಾಚಾರ ಬಯಲು ಮಾಡುತ್ತಿರುವ ನನ್ನ ಹಾಗೂ ಬೆಂಬಲಿಗರ ಮೇಲೆ ಕೇಸ್‌ ದಾಖಲಿಸಿ ನನ್ನ ದನಿಯನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ.

ತಾಲೂಕಿನ ಸೋಲಾರ್‌ ಹಗರಣ, ಜಾಜೂರಿನ ೨೧ ಎಕರೆ ಲೇಔಟ್‌ ಸಂಬಂಧ, ದಲಿತರು ಹಾಗೂ ರೈತರ ಒಕ್ಕೆಲೆಬಿಸುವ ಕಾರ್ಯ, ಮುದುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಳೇ ಟ್ಯಾಂಕ್‌ಗೆ ಹೊಸ ಬಿಲ್‌, ಚಗಚಗೆರೆ ಗ್ರಾಮ ಪಂಚಾಯಿತಿಯಲ್ಲಿ ಯೋಜನೆಯ ಹಗರಣಗಳನ್ನು ಬಯಲಿಗೆ ಎಳೆದ ಕಾರಣ ಸತ್ಯಾಂಶ ಎಲ್ಲಿ ಹೊರಗೆ ಬರುತ್ತದೆ ಎಂದು ಭಯಬಿದ್ದು, ಅಟ್ರಾಸಿಟಿ ದಾಖಲಿಸಿದ್ದು ಹೋರಾಟದಿಂದ ಹಿಂತಿರುಗುವ ಜಾಯಮಾನ ನನ್ನದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಗರಣ ಹಾಗೂ ಭ್ರಷ್ಟಾಚಾರದ ಮಾಹಿತಿ ಕೇಳಿದರೆ ಅಧಿಕಾರಿಗಳು ತಬ್ಬಿಬ್ಬು ಆಗುತ್ತಿದ್ದಾರೆ. ನಮಗೆ ಸಮಯವೇ ನೀಡುತ್ತಿಲ್ಲ. ಇದರ ಬಗ್ಗೆ ಲೋಕಾಯುಕ್ತಗೆ ದೂರು ನೀಡಲಾಗಿದೆ. ನಾಳೆಯಿಂದ ಪ್ರತಿ ಹಳ್ಳಿಹಳ್ಳಿಗಳಿಗೆ ಪಾದಯಾತ್ರೆ ಸಾಗಿ ದಲಿತರ ಮನೆಯಲ್ಲಿ ಊಟ ಸೇವಿಸಿ ನ್ಯಾಯ ಅಲ್ಲೇ ಕೇಳುತ್ತೇವೆ. ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲಾ ಜೊತೆಗೂಡಿ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಳೆದ ೭ ದಿನಗಳ ಹಿಂದೆ ನಗರಸಭೆಯ ಮುಂಭಾಗ ನ್ಯಾಯ ಕೇಳಿದ ನಮಗೆ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ಧ ಬಳಕೆ ನಿಂದಿಸಿದ್ದಾರೆ. ಅಕ್ರಮ ಲೇಔಟ್‌, ಭ್ರಷ್ಟಾಚಾರ, ಸಾರ್ವಜನಿಕ ತೆರಿಗೆಗಳ ದುರ್ಬಳಕೆಗಳಿಗೆ ಕಡಿವಾಣ ಹಾಕುವುದಕ್ಕೋಸ್ಕರ ಹೋರಾಟ ಪ್ರಾರಂಭಿಸಲಾಗಿದೆ. ಅಮರಣಾಂತ ಉಪವಾಸ ಸತ್ಯಾಗ್ರಹವೂ ಆರಂಭಿಸಿ ಬೇಕಿದ್ದರೆ ಪ್ರಾಣ ಇಲ್ಲೇ ಹೋಗಲಿ ಎಂದು ನಾವೂ ಹೆದರುವುದಿಲ್ಲ ಎಂದು ಹೇಳಿದರು.

ನಗರಸಭೆ ಉಪಾಧ್ಯಕ್ಷ ಮನೋಹರ್‌ ಮೇಸ್ತ್ರೀ ನೀಡಿದ ಜಾತಿ ನಿಂದನೆ ಪ್ರಕರಣ ದೂರಿನ ಹಿನ್ನೆಲೆಯಲ್ಲಿ ಜೆಡಿಎಸ್‌ ಮುಖಂಡ ಎನ್‌.ಆರ್‌. ಸಂತೋಷ್‌ ಸೇರಿ ಒಟ್ಟು ೧೪ ಬೆಂಬಲಿಗರ ಮೇಲೆ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಎ ೧ ಆರೋಪಿ ಎನ್.ಆರ್‌.ಸಂತೋಷ್‌, ಉಳಿದಂತೆ ಶಿವು, ಶೇಖರ್‌ ಯಾದವ್‌, ದಂಡೂರು ರವಿ, ಮೇಲಗಿರಿಯಪ್ಪ, ಜಯರಾಂ, ಎಸ್‌,ಎಮ್‌, ಎಸ್‌ ಕುಮಾರ್‌, ಪವನ ,ಸುಮಿತ್‌, ಅಭಿ ,ತೇಜಾ, ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್‌, ಹರ್ಷವರ್ಧನ ಮತ್ತು ಉಮೇಶ್‌ ಬೋವಿ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ