ವಿದ್ಯಾರ್ಥಿನಿಲಯದ ಮೇಲೆ ದಾಳಿ: ಕ್ರಮಕ್ಕೆ ಕುರುಬ ಸಮಾಜದಿಂದ ಒತ್ತಾಯ

KannadaprabhaNewsNetwork |  
Published : Feb 04, 2024, 01:34 AM IST
3ಕೆಎಂಎನ್ ಡಿ26ಕೆ.ಆರ್ .ಪೇಟೆ ತಾಲೂಕು ಕುರುಬರ ಸಂಘದ ಮುಖಂಡರು ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕನದಾಸರು ಮತ್ತು ಸಂಗೊಳ್ಳಿ ರಾಯಣ್ಣ, ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹರಿಯುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡಿದ್ದಾರೆ ಎನ್ನುವುದು ಬಹಿರಂಗವಾಗಬೇಕು. ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಗಲಭೆಕೋರರನ್ನು ಬಂಧಿಸಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ತಹಸೀಲ್ದಾರ್ ನಿಸರ್ಗಪ್ರಿಯಾಗೆ ಮನವಿ ಸಲ್ಲಿಕೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕೆರಗೋಡಿನ ಹನುಮಧ್ವಜ ವಿವಾದದ ವೇಳೆ ಕುರುಬ ಸಮುದಾಯದ ವಿದ್ಯಾರ್ಥಿನಿಲಯದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕುರುಬ ಸಮಾಜದ ಮುಖಂಡರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಪುರುಷೋತಮ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮಾಜದ ಮುಖಂಡರು, ಕೆರೆಗೂಡು ಧ್ವಜ ಪ್ರಕರಣಕ್ಕೂ ಕುರುಬ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಕಿಡಿಗೇಡಿಗಳು ಕುರುಬ ಸಮುದಾಯದ ವಿದ್ಯಾರ್ಥಿ ನಿಲಯದ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಿದರು.

ಕನದಾಸರು ಮತ್ತು ಸಂಗೊಳ್ಳಿ ರಾಯಣ್ಣ , ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹರಿಯುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡಿದ್ದಾರೆ ಎನ್ನುವುದು ಬಹಿರಂಗವಾಗಬೇಕು. ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಗಲಭೆಕೋರರನ್ನು ಬಂಧಿಸಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ತಹಸೀಲ್ದಾರ್ ನಿಸರ್ಗಪ್ರಿಯಾಗೆ ಮನವಿ ಸಲ್ಲಿಸಿದರು.

ಈ ವೇಳೆ ಮುಡಾ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಪಂ ಮಾಜಿ ಸದಸ್ಯರಾದ ಕೊಡಿಮಾರನಹಳ್ಳಿ ದೇವರಾಜು, ಬಿ.ನಾಗೇಂದ್ರ ಕುಮಾರ್, ತಾಪಂ ಮಾಜಿ ಸದಸ್ಯರಾದ ಶಾಮಣ್ಣ, ಸಣ್ಣಲಿಂಗೇಗೌಡ, ಪುರಸಭೆ ಸದಸ್ಯರಾದ ಕೆ.ಆರ್. ರವೀಂದ್ರಬಾಬು, ಸ್ನೇಹಿತ ರಮೇಶ್, ಸಮುದಾಯ ಮುಖಂಡರಾದ ಗುಡುಗನಹಳ್ಳಿ ರಾಯಪ್ಪ, ವಿನೋದ್ ಕುಮಾರ್, ಚಂದ್ರೆಗೌಡ, ದಿವಾಕರ್, ಕೂಡಲಕುಪ್ಪೆ ಕೃಷ್ಣೇಗೌಡ, ರುಕ್ಮಾಂಗದ, ರಘು, ವಕೀಲ ಗೋವಿಂದೇಗೌಡ, ರಾಜಣ್ಣ, ಚಿಕ್ಕಣ್ಣ, ರಾಜೇಶ್, ಕಾಡುಮೆಣಸ ಚಂದ್ರು ಸೇರಿದಂತೆ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ
ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ