ಕನ್ನಡಪ್ರಭ ವಾರ್ತೆ ತ್ಯಾಗರ್ತಿ
ತ್ಯಾಗರ್ತಿಯ ಮೆಸ್ಕಾಂ ಕಚೇರಿ ಎದುರು ಭಾನುವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಸರ್ವೇಯರ್ ಮಲ್ಲನಗೌಡ ಹಾಗೂ ತಂಡದವರು ಹೈಟೆನ್ಷನ್ ವೈಯರ್ ಅಳವಡಿಕೆ ಸಂಬಂಧ ಸರ್ವೇ ಕಾರ್ಯದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಕೊಪ್ಪ ಗ್ರಾಮದ ಕೆಲವು ಕಿಡಿಗೇಡಿಗಳು ನಿಮಗೆ ಇಲ್ಲಿ ಕೆಲಸ ಮಾಡಲು ಹೇಳಿದವರು ಯಾರು ಎಂದು ಪ್ರಶ್ನಿಸಿ ಗಲಾಟೆ ಆರಂಭಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನೆಡೆಸಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಇಲ್ಲವಾದರೆ ರೈತರೊಂದಿಗೆ ನಾವೆಲ್ಲರೂ ಸೇರಿ ಕಾನೂನನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಘಟನೆಯ ಹಿನ್ನೆಲೆ:ಮಳ್ಳಾಕೊಪ್ಪ ಗ್ರಾಮದ ಸರ್ವೇ ನಂ. 71/3ರಲ್ಲಿ ಶಿವಕುಮಾರ್ ಎಂಬುವವರ ಜಾಗದಲ್ಲಿ ಶನಿವಾರ ಮಧ್ಯಾಹ್ನ 1:30ರ ಸುಮಾರಿಗೆ ಸರ್ವೇಯರ್ ಮಲ್ಲನಗೌಡ ಹಾಗೂ ತಂಡದವರು ಹೈ ಟೆನ್ಷನ್ ವೈಯರ್ ಅಳವಡಿಕೆ ಸಂಬಂಧ ಸರ್ವೇ ಕಾರ್ಯದಲ್ಲಿ ನಿರತರಾಗಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಕೊಪ್ಪ ಗ್ರಾಮದ ಸಂಜು, ಸಂತೋಷ್, ರಾಘವೇಂದ್ರ, ಸಚಿನ್, ಸತೀಶ್, ಸುದೀಪ್ ಹಾಗೂ ಪರಮೇಶ್ ಇವರುಗಳು ಗಲಾಟೆ ಆರಂಭಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸÀರ್ವೇಯರ್ ಮಲ್ಲನಗೌಡ ಅವರ ಮೇಲೆ ಹಲ್ಲೆನೆಡೆಸಿದ್ದಾರೆ. ಈ ಘಟನೆಯನ್ನು ತಡೆಯಲು ಹೋದ ದಾವಣಗೆರೆಯ ಬಸವಾಪುರ ಗ್ರಾಮದ ಪರಶುರಾಮ (40) ಎಂಬುವವರ ಮೇಲೆ ಆರೋಪಿಗಳು ಮುಗಿಬಿದ್ದಿದ್ದಾರೆ.