ಕನ್ನಡಪ್ರಭ ವಾರ್ತೆ ಮಂಗಳೂರು
ನೇಹಾ ಈ ರೀತಿ ಹತ್ಯೆಯಾದ ಬಳಿಕ ಮುಖ್ಯಮಂತ್ರಿ ಅಥವಾ ಗೃಹಸಚಿವರ ಹೇಳಿಕೆ ಗಮನಿಸಿದರೆ ಬರೀ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿಯೇ ಸರ್ಕಾರ ನಡೆಸುತ್ತಿರುವುದು ಕಾಣುತ್ತದೆ ಎಂದು ಭರತ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಖಜಾಂಚಿ ಸಂಜಯ್ ಪ್ರಭು ಹಾಗೂ ಮಾಧ್ಯಮ ಸಂಚಾಲಕರಾದ ಕದ್ರಿ ಮನೋಹರ್ ಶೆಟ್ಟಿ ಇದ್ದರು...............................
ಚೊಂಬುರಹಿತ ಬಿಜೆಪಿ ಆಡಳಿತವನ್ನು ಕಾಂಗ್ರೆಸ್ ಒಪ್ಪಿಕೊಂಡಿದೆ-ಸುನಿಲ್ ಕುಮಾರ್:ದೇಶದಲ್ಲಿ ಶೌಚಾಲಯ ನಿರ್ಮಾಣ ಮಾಡದೇ ಹಳ್ಳಿಯ ಮಹಿಳೆಯರ ಕೈಗೆ ಚೊಂಬು ಕೊಟ್ಟಿದ್ದು ಕಾಂಗ್ರೆಸ್, ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡಿ, ಚೊಂಬು ರಹಿತ ಆಡಳಿತ ದೇಶದಲ್ಲಿ ಕೊಟ್ಟಿದ್ದು ಮೋದಿ ಅವರು ಬಿಜೆಪಿ ಸರ್ಕಾರದ ಕಾಲದಲ್ಲಿ, ಇದನ್ನು ಒಪ್ಪಿಕೊಂಡು ಕಾಂಗ್ರೆಸ್ ಚೊಂಬು ಜಾಹೀರಾತು ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಶಾಸಕ ವಿ. ಸುನಿಲ್ ಹೇಳಿದ್ದಾರೆ.
ಅವರು ಶನಿವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಕರಿ ನೆರಳಲ್ಲಿ ಕೇಸರಿ ಶಾಲು ಜಾಹೀರಾತನ್ನೂ ಕಾಂಗ್ರೆಸ್ ಪ್ರಕಟಿಸಿದೆ. ಕೇಸರಿ ಶಾಲು ಹಾಕಲು ನಮಗೆ ಸಂಕೋಚ ಇಲ್ಲ, ನಾವು ದೇಶದಲ್ಲಿ ಕೇಸರಿ ಆಡಳಿತ ನಿರ್ಮಾಣ ಮಾಡಲು ಹೊರಟಿದ್ದೇವೆ, ಕೇಸರಿ ಭಾರತೀಯ ಸಂಸ್ಕೃತಿಯ ಪ್ರತೀಕ. ಕೇಸರಿ ರಾಷ್ಟ್ರೀಯತೆಯ ಪ್ರತೀಕವೇ ಹೊರತು, ನಾವು ಯಾವುದೇ ದ್ವೇಷ ಮಾಡಲು ಹೊರಟಿಲ್ಲ ಎಂದರು.ಕಾಂಗ್ರೆಸ್ ಒಂದು ಕೋಮಿನ ಜನಕ್ಕೆ ಬೆಂಬಲ ಕೊಡುತ್ತದೆ. ಹಿಂದುಗಳನ್ನು ವಿರೋಧಿಸುವುದೇ ಕಾಂಗ್ರೆಸ್ನ ನಿಲುವು, ಅದಕ್ಕಾಗಿಯೇ ಕೇಸರಿ ಶಾಲಿನ ಜಾಹೀರಾತು ನೀಡಿದೆ ಎಂದು ಆರೋಪಿಸಿದರು.