ಕನ್ನಡಪ್ರಭ ವಾರ್ತೆ ಮಡಿಕೇರಿ
ಮಂಗಳವಾರ ನಗರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಬ್ರಾಹ್ಮಣ ಸಮಾಜದ ನೂರಾರು ಮಂದಿ ಸೇರಿ ಕೆಲ ಕಾಲ ಭಜನೆ, ದೇವರ ಕೀರ್ತನೆಗಳನ್ನು ಹೇಳುವ ಮೂಲಕ, ಹಲ್ಲೆ ಖಂಡಿಸಿ ಸಾತ್ವಿಕ ಪ್ರತಿಭಟನೆ ನಡೆಸಿದರು.
ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರನ್ನು ಭೇಟಿಯಾದ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು ಅಧ್ಯಕ್ಷ ರಾಮಚಂದ್ರ ಮೂಗೂರು, ಪ್ರಮುಖರಾದ ಶ್ರೀಧರ್ ನೆಲ್ಲಿತ್ತಾಯ, ಜಿ.ಟಿ. ರಾಘವೇಂದ್ರ, ಬಿ.ಜಿ ಅನಂತಶಯನ, ಎಸ್.ಎಸ್. ಸಂಪತ್ ಕುಮಾರ್, ವಕೀಲ ಕೃಷ್ಣಮೂತಿ೯, ಪ್ರಭಾಕರ್ ನೆಲ್ಲಿತ್ತಾಯ, ಡಾ. ರಾಜಾರಾಮ್, ರಾಜಶೇಖರ್, ನಿರ್ದೇಶಕ ಮಂಜುನಾಥ್, ಕೆ.ಕೆ.ವಿಶ್ವನಾಥ್, ಎ.ಗೋಪಾಲಕೃಷ್ಣ , ಅರ್ಚಕರ ಸಂಘದ ಪ್ರಮುಖ ಮಹಾಬಲೇಶ್ವರ ಭಟ್, ರಾಮಕೃಷ್ಣ, ಸುದರ್ಶನ್ , ಪವನ್, ಕೊಡಗು ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ವೈಲಾಯ, ನಿವೖತ್ತ ಮೇಜರ್ ವೆಂಕಟಗಿರಿ, ಎಚ್.ಎಸ್. ತಿಮ್ಮಪ್ಪಯ್ಯ, ಹಾ.ತಿ.ಜಯಪ್ರಕಾಶ್, ಡಿ.ಆರ್. ಪ್ರಶಾಂತ್ ಮಹೇಶ್ ಶಗ್ರಿತ್ತಾಯ , ಕೆ.ವಿ. ವೆಂಕಟರಮಣ, ವರುಣ್ ಶರ್ಮ, ವೀಣಾ ಪುರುಷೋತ್ತಮ, ನೀರಜ ರಮೇಶ್ ಸೇರಿದಂತೆ ಹಲವರು ಒತ್ತಾಯ ಪತ್ರ ಸಲ್ಲಿಸಿದರು.ಕಟ್ಟೆಮಾಡು ದೇವಾಲಯದ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ ಮಾಡಿ, ಸ್ಥಳದಲ್ಲಿದ್ದ ಅವರ ತಾಯಿ ಮೇಲೆ ಕೂಡ ಹಲ್ಲೆ ಮಾಡಿರುವುದು ಖಂಡನೀಯ ಪ್ರಕರಣದ ಪ್ರಮುಖ ಆರೋಪಿ ಮಂಡೇಟಿರ ಅನಿಲ್ ಮತ್ತು ಜತೆಗಿದ್ದವರನ್ನು ಪೊಲೀಸರು ಇನ್ನು 2 ದಿನಗಳೊಳಗೆ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು.
ಹಲ್ಲೆ ಘಟನೆಯ ಹಿಂದೆ ಯಾರೇ ಪ್ರಭಾವಿಗಳು ಇದ್ದರೂ ಅಂಥವರು ಯಾರು ಎಂಬುದನ್ನು ಪೊಲೀಸರು ಬಹಿರಂಗಗೊಳಿಸಬೇಕು.ಯಾರದ್ದೇ ಪ್ರಭಾವಕ್ಕೆ ಮಣಿಯಬಾರದು ಎಂದೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಲಾಯಿತು.
ಜಿಲ್ಲೆ/ ದೇವಾಲಯಗಳಲ್ಲಿ ನೂರಾರು ಬ್ರಾಹ್ಮಣರು ಅರ್ಚಕ ವೃತ್ತಿ ನಡೆಸುತ್ತಿದ್ದಾರೆ. ಬಹುತೇಕರು ಗ್ರಾಮದ ಒಂಟಿ ಮನೆಗಳಲ್ಲಿ ವಾಸ ಮಾಡುತ್ತಾ ಪೂಜಾ ಕೈಂಕರ್ಯ ನಡೆಸುತ್ತಿದ್ದಾರೆ. ಕಟ್ಟೆಮಾಡು ದೇವಾಲಯದ ಅರ್ಚಕರ ಮೇಲಿನ ಹಲ್ಲೆಯು ಜಿಲ್ಲೆಯ ಅರ್ಚಕ ಸಮುದಾಯದಲ್ಲಿ ನೋವನ್ನುಂಟು ಮಾಡಿದೆ. ಹೀಗಾಗಿ ಜಿಲ್ಲೆಯಾದ್ಯಂತಲಿನ ದೇವಾಲಯಗಳ ಅರ್ಚಕರಿಗೆ ಸೂಕ್ತ ಭದ್ರತೆ ಕಲ್ಪಿಸುವಲ್ಲಿ ಆಯಾ ದೇವಾಲಯಗಳ ವ್ಯಾಪ್ತಿಯ ಪೊಲೀಸ್ ಠಾಣಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದೂ ಮನವಿ ಮಾಡಿದರು.
ಒತ್ತಾಯ ಪತ್ರ ಸಲ್ಲಿಕೆಗೂ ಮುನ್ನ ಮಡಿಕೇರಿಯ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಸಭೆ ನಡೆಸಿದ ಬ್ರಾಹ್ಣಣ ಸಮಾಜದ ಮುಖಂಡರು ಮುಂದಿನ ಹೋರಾಟದ ಹಾದಿಯ ಬಗ್ಗೆ ಚರ್ಚಿಸಿದರು.
ಜಿಲ್ಲಾಧಿಕಾರಿ ವೆಂಕಟರಾಜಾ ಅವರನ್ನೂ ಭೇಟಿಯಾದ ಕೊಡಗು ಬ್ರಾಹ್ಮಣ ವಿಧ್ಯಾಭಿವೖದ್ಧಿ ನಿಧಿ ಪ್ರಮುಖರು, ಅರ್ಚಕರ ಮೇಲೆ ಹಲ್ಲೆ ಮಾಡಿದವರನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದರು.
ಗಾಯಾಳುವಿಗೆ ಸಾಂತ್ವನ: