ಹನೂರಿನ ಮೆಂದಾರೆ ಗ್ರಾಮಸ್ಥರಿಗೆ ಹಲ್ಲೆ

KannadaprabhaNewsNetwork |  
Published : Apr 27, 2024, 01:15 AM IST
26ಸಿಎಚ್‌ಎನ್‌61, 62 ಹನೂರು ಮಲೆ ಮಾದೇಶ್ವರ ಬೆಟ್ಟ  ಗ್ರಾಪಂ ವ್ಯಾಪ್ತಿಯ ಇಂಡಿ ಗನತ್ತ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಮತದಾನ ಮಾಡಲು ಬಂದಿದ್ದ ಮೆಂದಾರೆ ಸೋಲಿಗರ ಹಾಡಿಯ ನಿವಾಸಿಗಳು ಗಾಯಗೊಂಡಿರುವುದು. | Kannada Prabha

ಸಾರಾಂಶ

ಮಲೆ ಮಾದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಮೆಂದಾರೆ ಗ್ರಾಮದ ಸೋಲಿಗ ಸಮುದಾಯದ ಮಹಿಳೆಯರು ಹಾಗೂ ಪುರುಷರಿಗೆ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

ಹನೂರು: ಮಲೆ ಮಾದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಮೆಂದಾರೆ ಗ್ರಾಮದ ಸೋಲಿಗ ಸಮುದಾಯದ ಮಹಿಳೆಯರು ಹಾಗೂ ಪುರುಷರಿಗೆ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಕೇಂದ್ರಕ್ಕೆ ಮೆಂದಾರೆ ಗ್ರಾಮದ ಸೋಲಿಗ ಆದಿವಾಸಿ ನಿವಾಸಿಗಳು ಮತದಾನ ಮಾಡಲು ಬಂದಾಗ ನಿವಾಸಿಗಳಿಂದ ಕಲ್ಲು, ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವುದರಿಂದ ಘಟನೆಯಲ್ಲಿ ಮಾದಯ್ಯ ಶಿವಕುಮಾರ್ ಸಣ್ಣಯ್ಯ ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸೋಲಿಗ ಸಮುದಾಯದ ಮುಖಂಡರು ಮಲೆ ಮಾದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ನಿರ್ಣಯಿಸಿದ್ದು ಈ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸೋಲಿಗ ಸಮುದಾಯ ರಾಜ್ಯ ಕಾರ್ಯದರ್ಶಿ ಮುತ್ತಯ್ಯ ತಿಳಿಸಿದ್ದಾರೆ. ದೂರು ದಾಖಲು:

ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತದಾನ ಕೇಂದ್ರ ದ್ವಂಸ ಪ್ರಕರಣ ಜೊತೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ವಾಹನಗಳು, ಪರಿಕರಗಳನ್ನು ನಾಶಪಡಿಸಿರುವ ಬಗ್ಗೆ ಮಲೆ ಮಾದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ