ಕೊಪ್ಪಳ:
ಒಳಮೀಸಲಾತಿ ಕೊಡುವುದು ಭೀಕ್ಷೆಯಲ್ಲ, ಅದು ನಮ್ಮ ಹಕ್ಕಾಗಿದೆ. ಸುಪ್ರೀಂ ಕೋರ್ಟ್ ಒಳಮೀಸಲಾತಿ ಜಾರಿಗ ನಿರ್ದೇಶನ ನೀಡಿದ್ದು ಕೆಲ ರಾಜ್ಯಗಳು ಜಾರಿಗೊಳಿಸಿವೆ. ಆದರೆ, ರಾಜ್ಯದಲ್ಲಿ ಜಾರಿಗೊಳಿಸಲು ಸರ್ಕಾರ ಮುಂದಾಗಿಲ್ಲ. ಇಲ್ಲದ ಸಬೂಬು ಹೇಳಿಕೊಂಡು ಮುಂದೂಡುತ್ತಿದೆ ಎಂದು ಹೋರಾಟಗಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನುಗ್ಗಲು ಯತ್ನ:ಧರಣಿ ಪೂರ್ಣಗೊಳಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದ ಒಳಗೆ ನುಗ್ಗಲು ಯತ್ನಿಸಿದರು. ಮೊದಲೇ ಬ್ಯಾರಿಕೇಡ್ ಅಳವಡಿಸಿಕೊಂಡಿದ್ದ ಪೊಲೀಸರು ಹೋರಾಟಗಾರರನ್ನು ಒಳಗೆ ನುಗ್ಗಲು ಅವಕಾಶ ನೀಡದೆ ಇರುವುದರಿಂದ ಹೈಡ್ರಾಮಾ ನಡೆಯಿತು. ಪರಸ್ಪರ ತಳ್ಳಾಟ, ನೂಕಾಟ ನಡೆದಿದ್ದರಿಂದ ಜಿಲ್ಲಾಡಳಿತ ಭವನದ ಎದುರು ಗೊಂದಲದ ವಾತಾವರಣ ನಿರ್ಮಾಣವಾಗಿದ್ದರಿಂದ ಮತ್ತಷ್ಟು ಭದ್ರತಾ ಪಡೆ ಕರೆಯಿಸಿ ಬಂದೋಬಸ್ತ್ ಒದಗಿಸಲಾಗಿದೆ. ಹೀಗಾಗಿ ಪ್ರತಿಭಟನಾಕಾರರು ಜಿಲ್ಲಾಡಳಿತದ ಒಳನುಗ್ಗಲು ಅವಕಾಶ ನೀಡಲೇ ಇಲ್ಲ. ಆಗ ವಾಗ್ವಾದ ನಡೆದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ಕೈಮೀರುವ ಸಾಧ್ಯತೆ ಅರಿತ ಪೊಲೀಸರು ನುಗ್ಗಲು ಯತ್ನಿಸಿದ ಕೆಲವರನ್ನು ಬಂಧಿಸಿ ಬಸ್ಗೆ ಹತ್ತಿಸಿದರು.
ಜಿಲ್ಲಾಧಿಕಾರಿ ಪರವಾಗಿ ಮನವಿ ಸ್ವೀಕರಿಸಲು ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಆಗಮಿಸಿದಾಗ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳೇ ಬರಬೇಕೆಂದು ಪಟ್ಟು ಹಿಡಿದರು. ಈ ವೇಳೆ ಗದ್ದಲ ಉಂಟಾಗಿದ್ದರಿಂದ ಎಡಿಸಿ ಮರಳಿ ಹೋದರು. ಆದರೆ, ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅನ್ಯಕಾರ್ಯ ನಿಮಿತ್ತ ಬೇರೆಡೆ ಹೋಗಿರುವ ಕುರಿತು ಹೋರಾಟಗಾರರಿಗೆ ಮನವರಿಕೆ ಮಾಡಲಾಯಿತು. ಬಳಿಕ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಹಲಗೆ ಬಾರಿಸಿದ ಶ್ರೀಗಳು:
ಈ ವೇಳೆ ಮರುಳುಸಿದ್ಧೇಶ್ವರ ಸ್ವಾಮೀಜಿ, ಆನಂದ ಸ್ವಾಮೀಜಿ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು, ಗವಿಸಿದ್ದಪ್ಪ ಕಂದಾರಿ, ಪರುಶರಾಮ ಆನೆಗೊಂದಿ, ಈರಪ್ಪ ಕುಡುಗುಂಟಿ, ಮಲ್ಲಿಕಾರ್ಜುನ ಪೂಜಾರ, ಹನುಮೇಶ ಕಡೆಮನಿ, ನಿಂಗಪ್ಪ ಮೈನಳ್ಳಿ, ಗಣೇಶ ಹೊರತಟ್ನಾಳ, ರಮೇಶ ಚೌಡಕಿ, ಸುಭಾಸ ಕನಕಗಿರಿ, ದುರಗಪ್ಪ ನಡುಲಮನಿ, ಮಹಾಲಕ್ಷ್ಮಿ ಕಂದಾರಿ, ಸಿದ್ದು ಮಣ್ಣಿನವರ, ನಾಗರಾಜ ಮೇಲಿನಮನಿ, ನಾಗರಾಜ ಕಂದಾರಿ, ಮಾರುತೆಪ್ಪ ಗೌವರಾಳ, ಮಾರೇಶ ಮುಸ್ಟೂರು, ಮಹಾಂತೇಶ ವಕೀಲರು, ಮಾರುತಪ್ಪ ಬೀಕನಳ್ಳಿ, ಪರುಶರಾಮ ಕೆರೆಹಳ್ಳಿ, ಮಂಜುನಾಥ ಮುಸ್ಲಾಪುರ ಇದ್ದರು.