ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಆರೋಪಿ ಕಾಲಿಗೆ ಗುಂಡೇಟು

KannadaprabhaNewsNetwork |  
Published : Jun 05, 2025, 01:40 AM IST
ಫೋಟೋ 3 ಎ, ಎನ್, ಪಿ 1: ಶಾಡೋ ಸಚಿನ್. | Kannada Prabha

ಸಾರಾಂಶ

ಸ್ಥಳೀಯ ಪೊಲೀಸ್ ಠಾಣೆಯ ವ್ಯಾಪ್ತಿಯ ಮೆಣಸಿನ ಸರ ಗ್ರಾಮದಲ್ಲಿ ಪೊಲೀಸರ ಮೇಲೆ ಹಲ್ಲಿಗೆ ಯತ್ನಿಸಿದ ಆರೋಪಿ ಶಿವಮೊಗ್ಗ ಮೂಲದ ಶ್ಯಾಡೊ ಸಚಿನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಆನಂದಪುರ: ಸ್ಥಳೀಯ ಪೊಲೀಸ್ ಠಾಣೆಯ ವ್ಯಾಪ್ತಿಯ ಮೆಣಸಿನ ಸರ ಗ್ರಾಮದಲ್ಲಿ ಪೊಲೀಸರ ಮೇಲೆ ಹಲ್ಲಿಗೆ ಯತ್ನಿಸಿದ ಆರೋಪಿ ಶಿವಮೊಗ್ಗ ಮೂಲದ ಶ್ಯಾಡೊ ಸಚಿನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಆರೋಪಿ ಶ್ಯಾಡೊ ಸಚಿನ್ ಎಂಬಾತನ ಮೇಲೆ ಸುಮಾರು 30 ಪ್ರಕರಣಗಳಿದ್ದು, ಈತ ಕಳೆದ ಆರು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ನಡೆಸಿದ್ದ ಎನ್ನಲಾಗಿದೆ. ಆರೋಪಿ ಶ್ಯಾಡೊ ಸಚಿನ್ ಮೆಣಸಿನ ಸರ ಗ್ರಾಮದಲ್ಲಿ ಇದ್ದಾನೆ ಎಂಬ ಖಚಿತ ಮಾಹಿತಿಯನ್ನು ತಿಳಿದ ಪೊಲೀಸರು ಆತನನ್ನು ಬಂಧಿಸಲು ಯತ್ನಿಸಿದಾಗ ಹೆಡ್ ಕಾನ್ಸ್ಟೇಬಲ್ ಅಶೋಕ್ ಎಂಬುವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಪಿಎಸ್ಐ ಯುವರಾಜ್ ಕಂಬಳಿ ಯವರ ಮೇಲೆಯೂ ಹಲ್ಲೆಗೆ ಯತ್ನಿಸಿದಾಗ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವುದಾಗಿ ಪೊಲೀಸ್ ಮಾಹಿತಿ ದೊರೆತಿದೆ. ಗುಂಡೇಟು ತಗಲಿದ ಆರೋಪಿಯನ್ನು ತಕ್ಷಣ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರಲಾಯಿತು. ಹಾಗೆ ಆರೋಪಿಯಿಂದ ಹಲ್ಲೆಗೊಳಗಾದ ಹೆಡ್ ಕಾನ್ಸ್ಟೇಬಲ್ ಅಶೋಕ್ ರವರನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಕಳಿಸಲಾಯಿತು. ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ