ವಿಜಯಪುರ: ಜಮೀನು ಬದುವಿನ ವಿಚಾರವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ಹಾಗೂ 29,000 ರೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಜಯಪುರ: ಜಮೀನು ಬದುವಿನ ವಿಚಾರವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ಹಾಗೂ 29,000 ರೂ ದಂಡ ವಿಧಿಸಿ ತೀರ್ಪು ನೀಡಿದೆ.
ಈಶ್ವರಯ್ಯ ಹಿರೇಮಠ ಎಂಬಾತನಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. 2019 ನ.25ರಂದು ತಾಲೂಕಿನ ಹೊನ್ನಳ್ಳಿಯಲ್ಲಿ ಪಂಚಾಕ್ಷರಿ ಹಿರೇಮಠ ಎಂಬುವವರನ್ನು ಕೊಲೆ ಮಾಡಲು ಯತ್ನಿಸಲಾಗಿತ್ತು. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ.ಎ ಅವರು ಸಾಕ್ಷಿ ಪುರಾವೆಗಳನ್ನು ಅವಲೋಕಿಸಿ ಆರೋಪಿ ಈಶ್ವರಯ್ಯ ತಂ.ಪಾರುತಯ್ಯ ಹಿರೇಮಠಗೆ ಏಳು ವರ್ಷ ಕಠಿಣ ಶಿಕ್ಷೆ ಹಾಗೂ ₹29,000 ದಂಡ, ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಎಚ್.ಹಕೀಮ ವಾದ ಮಂಡಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.