ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಸಮಸ್ಯೆಗಳ ಕುರಿತು ಗಮನ: ನೂತನ ಡಿಸಿ ಸ್ವರೂಪ

KannadaprabhaNewsNetwork |  
Published : Jun 21, 2025, 12:49 AM IST
19ಸ್ವರೂಪ | Kannada Prabha

ಸಾರಾಂಶ

ಉಡುಪಿ ಜಿಲ್ಲೆಯಲ್ಲಿ ಅಗತ್ಯವಿರುವ ಕೈಗಾರಿಕೆಗಳ ಸ್ಥಾಪನೆ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ, ಗ್ರಾಮೀಣ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಾಗಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲೆಯಲ್ಲಿ ಅಗತ್ಯವಿರುವ ಕೈಗಾರಿಕೆಗಳ ಸ್ಥಾಪನೆ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ, ಗ್ರಾಮೀಣ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಾಗಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.ಬುಧವಾರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅವರು ಗುರುವಾರ ಪತ್ರಕರ್ತರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಪತ್ರಕರ್ತರು ಅವರ ಗಮನಕ್ಕೆ ತಂದ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ‍್ಳುವ ಭರವಸೆ ನೀಡಿದರು. ಜಿಲ್ಲೆಯ ಮಳೆಗಾಲದ ಸಮಸ್ಯೆ, ಮಲ್ಪೆ ಬಂದರಿನ ಸಮಸ್ಯೆ, ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಬಗ್ಗೆ ನಿರ್ಗಮನ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರೊಂದಿಗೆ ಕೇಳಿ ತಿಳಿದುಕೊಂಡಿದ್ದೇನೆ. ಮರಳಿನ ಸಮಸ್ಯೆ, ಕೃಷಿ ಕ್ಷೇತ್ರದ ಸಮಸ್ಯೆ, ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಡತಗಳ ಬಾಕಿ ಸಮಸ್ಯೆಗಳನ್ನು ಪತ್ರಕರ್ತರು ಗಮನ ಸಳೆದಾಗ, ಅವುಗಳನ್ನು ಆದ್ಯತೆಯಲ್ಲಿ ಪರಿಶೀಲಿಸುವುದಾಗಿ ಹೇಳಿದರು.ಟೆಕ್ಸ್‌ಟೈಲ್ ಎಂಜಿನಿಯರ್:

ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಸ್ವರೂಪ ಟಿ.ಕೆ. ಅವರು 2012ನೇ ಸಾಲಿನ ಐಎಎಸ್ ಅಧಿಕಾರಿ, ದೆಹಲಿ ಐಐಟಿಯಲ್ಲಿ ಟೆಕ್ಸ್‌ಟೈಲ್ ಇಂಜನಿಯರಿಂಗ್ ನಲ್ಲಿ ಎಂಟೆಕ್ ಪದವಿ ಪಡೆದಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕಿಯಾಗಿ ಬೆಂಗಳೂರಿನಲ್ಲಿದ್ದರೂ, ಹುಬ್ಬಳ್ಳಿಯಲ್ಲಿ ಜಿಪಂ ಸಿಇಒ ಆಗಿದ್ದರಿಂದ ಆಡಳಿತ ಮತ್ತು ಜನರೊಂದಿಗೆ ಬೆರೆಯುವ ಅನುಭವ ಇದೆ, ಆದ್ದರಿಂದ ಪ್ರಥಮ ಬಾರಿ ಜಿಲ್ಲಾಧಿಕಾರಿಯಾಗಿ ಆಡಳಿತ ಕಷ್ಟವಾಗುವುದಿಲ್ಲ ಎಂಬ ಭರವಸೆ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ