ಅತ್ತೂರು ಬಸಿಲಿಕಾ ವಾರ್ಷಿಕೋತ್ಸವ: ದಿವ್ಯ ಬಲಿಪೂಜೆ ಸಂಪನ್ನ

KannadaprabhaNewsNetwork |  
Published : Jan 28, 2026, 03:15 AM IST
ಬಲಿಪೂಜೆಯನ್ನು ಅಲಹಬಾದ್ ಧರ್ಮಪ್ರಾಂತ್ಯದ ಲುವಿಸ್ ಮಸ್ಕರೇನ್ಹಸ್ ಅವರು ಅರ್ಪಿಸಿದರು. | Kannada Prabha

ಸಾರಾಂಶ

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಮೂರನೇ ದಿನ ಸಹಸ್ರಾರು ಭಕ್ತಾದಿಗಳ ಭಕ್ತಿಭಾವದ ನಡುವೆ ಭವ್ಯವಾಗಿ ನೆರವೇರಿತು. ದಿನವಿಡೀ ಸುಮಾರು 10 ದಿವ್ಯ ಬಲಿಪೂಜೆಗಳು ನಡೆದು ಪುಣ್ಯಕ್ಷೇತ್ರವು ಸಂಪೂರ್ಣ ಭಕ್ತಿಮಯ ವಾತಾವರಣದಿಂದ ಕಂಗೊಳಿಸಿತು.

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಮೂರನೇ ದಿನ ಸಹಸ್ರಾರು ಭಕ್ತಾದಿಗಳ ಭಕ್ತಿಭಾವದ ನಡುವೆ ಭವ್ಯವಾಗಿ ನೆರವೇರಿತು. ದಿನವಿಡೀ ಸುಮಾರು 10 ದಿವ್ಯ ಬಲಿಪೂಜೆಗಳು ನಡೆದು ಪುಣ್ಯಕ್ಷೇತ್ರವು ಸಂಪೂರ್ಣ ಭಕ್ತಿಮಯ ವಾತಾವರಣದಿಂದ ಕಂಗೊಳಿಸಿತು.

ಈ ವರ್ಷದ ಮಹೋತ್ಸವದ ಧ್ಯೇಯವಾಕ್ಯ ‘ನಾನು ನಿನ್ನನ್ನು ಪ್ರೀತಿಸಿದ್ದೇನೆ’ ಎಂಬ ಸಂದೇಶದ ಆಧಾರದಲ್ಲಿ ಬಡವರ ಮೇಲಿನ ಕಾಳಜಿ, ಮಾನವೀಯ ಸೇವೆ ಹಾಗೂ ಸಮಾಜದತ್ತ ಕ್ರೈಸ್ತರ ಜವಾಬ್ದಾರಿಯ ಕುರಿತು ಆಳವಾದ ಬೋಧನೆ ನೀಡಲಾಯಿತು. ಬಡವರೊಂದಿಗೆ ನಿಂತು ದುರ್ಬಲರ ಕೈ ಹಿಡಿಯುವ ಕ್ರೈಸ್ತ ಜೀವನದ ಮಹತ್ವವನ್ನು ಯಾಜಕರು ವಿಶೇಷವಾಗಿ ಒತ್ತಿಹೇಳಿದರು.

ದಿನದ ಪ್ರಮುಖ ಸಾಂಭ್ರಮಿಕ ಬಲಿಪೂಜೆಯನ್ನು ಅಲಹಬಾದ್ ಧರ್ಮಪ್ರಾಂತ್ಯದ ವಂ.ಲುವಿಸ್ ಮಸ್ಕರೇನ್ಹಸ್ ಅರ್ಪಿಸಿ, ಬಡವರೇ ಕ್ರಿಸ್ತನ ಪ್ರತಿರೂಪವಾಗಿದ್ದು ಅವರೊಂದಿಗೆ ಕ್ರೈಸ್ತ ಜೀವನ ಸರಿದೂಗಿ ನಡೆಯಬೇಕು ಎಂದು ಸಂದೇಶ ನೀಡಿದರು. ವಿವಿಧ ಯಾಜಕರ ಸಹಭಾಗಿತ್ವದಲ್ಲಿ ದಿವ್ಯ ಬಲಿಪೂಜೆ, ಆರಾಧನೆ ಹಾಗೂ ಭಕ್ತಿಕಾರ್ಯಗಳು ನಡೆದವು.ಅತ್ತೂರು ಪುಣ್ಯಕ್ಷೇತ್ರದಲ್ಲಿ ವಿವಿಧ ಧರ್ಮದ ಭಕ್ತರು ಭಾಗವಹಿಸಿ ಮೊಂಬತ್ತಿ ಬೆಳಗಿಸಿ, ಹರಕೆ ಸಲ್ಲಿಸಿ ಆಶೀರ್ವಾದ ಪಡೆದರು. ಗಣ್ಯರ ಉಪಸ್ಥಿತಿ, ವೈಭವಯುತ ವಿದ್ಯುತ್ ಅಲಂಕಾರ ಮತ್ತು ಕುಟುಂಬ ಸಮೇತರಾಗಿ ಆಗಮಿಸಿದ ಭಕ್ತರ ಸಂಭ್ರಮದಿಂದ ಈ ಮಹೋತ್ಸವವು ಧಾರ್ಮಿಕ ಭಕ್ತಿ, ಸಾಮಾಜಿಕ ಸಂದೇಶ ಮತ್ತು ಜನೈಕ್ಯತೆಯ ಪ್ರತೀಕವಾಗಿ ಮೂಡಿಬಂತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ