ಕನ್ನಡಪ್ರಭ ವಾರ್ತೆ ಮಾಲೂರು
ನಿರ್ಮಾಣಕ್ಕೆ ಮೊದಲೇ ಹರಾಜು
ಮೊದಲು ಹಳೇ ಬಸ್ ನಿಲ್ದಾಣ ಕಟ್ಟಡವನ್ನು ತೆರವುಗೊಳಿಸಿ ನಂತರ ಹೊಸ ಕಟ್ಟಡವನ್ನು ನಿರ್ಮಿಸಿ ಬಳಿಕ ಹರಾಜು ಪ್ರಕ್ರಿಯೆಯನ್ನು ಕೈಗೊಳ್ಳಬೇಕು. ಇದು ನಿಯಮ. ಅದನ್ನು ಬಿಟ್ಟು ಈಗಾಲೇ ಬಸ್ ನಿಲ್ದಾಣದ ಅಂಗಡಿ ಮಳಿಗೆಗೆ ಹರಾಜು ಪ್ರಕ್ರಿಯೆಯನ್ನು ಕೈಗೊಂಡಿರುವುದು ಹಾಲಿ ಇರುವ ಅಂಗಡಿ ಮಳಿಗೆಗಳ ಮಾಲೀಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶವಾಗಿದ್ದು, ಇದರಿಂದ ಸಾರ್ವಜನಿಕರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಅವರು ಆರೋಪಿಸಿದರು.ಹರಾಜು ಪ್ರಕ್ರಿಯೆ ರದ್ದು ಮಾಡಿ
ಅಲ್ಲದೇ ೭೬ ಅಂಗಡಿ ಮಳಿಗೆಗಳನ್ನು ಮೀಸಲಾತಿಗೆ ಅನುಗುಣವಾಗಿ ಮೀಸಲಿರಿಸಲಾಗಿದೆ. ಸಾಮಾನ್ಯ ವರ್ಗಕ್ಕೂ ಮತ್ತು ಪರಿಶಿಷ್ಟ ವರ್ಗಗಳಿಗೆ ಸಮವಾಗಿ ಅಂಗಡಿ ಮಳಿಗೆಗೆ ಹಣವನ್ನು ಕಟ್ಟುವಂತೆ ಸೂಚಿಸಲಾಗಿದ್ದು, ಈ ಹರಾಜು ಪ್ರಕ್ರಿಯೆಯನ್ನು ರದ್ದು ಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಪ್ರೋ.ಬಿ.ಕೃಷ್ಣಪ್ಪ ತಾಲ್ಲೂಕು ಸಂಚಾಲಕ ಎಸ್ ಎಂ ವೆಂಕಟೇಶ್ ಒತ್ತಾಯಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಸಂಘಟನಾ ಸಂಚಾಲಕ ಡಿ ಎನ್ ನಾರಾಯಣಸ್ವಾಮಿ, ಟೇಕಲ್ ಹೋಬಳಿಯ ಸಂಚಾಲಕ ಉಳ್ಳೇರಹಳ್ಳಿ ಮುನಿರಾಜು, ತಾಲ್ಲೂಕು ಸಮಿತಿ ಸದಸ್ಯ ಮಾಸ್ತಿ ವೆಂಕಟೇಶಪ್ಪ, ತಾಲ್ಲೂಕು ಸಂಘಟನಾ ಸಂಚಾಲಕ ತಿರುಮಲೇಶ್, ಅರಳೇರಿ ಮುನಿರಾಜು, ನಾರಾಯಣಸ್ವಾಮಿ, ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದರು,