ಮಂಗಳೂರು: ದೇಶಾದ್ಯಂತ ನಡೆಯುವ ಸಮಾದಾನ ಸಮಾರೋಹ್ 2026 ಹೆಸರಿನ ವಿಶೇಷ ಲೋಕ ಅದಾಲತ್ ಆ.21ರಿಂದ 23ರ ವರೆಗೆ ಮತ್ತು ಚೆಕ್ ಬೌನ್ಸ್ ಪ್ರಕರಣಗಳಿಗೆ ವಿಶೇಷ ಲೋಕ ಅದಾಲತ್ ಜು.18 ಮತ್ತು ನ.21ರಂದು ದ.ಕ. ಜಿಲ್ಲಾ ನ್ಯಾಯಾಲಯ ಹಾಗೂ ಸುಳ್ಯ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ನ್ಯಾಯಾಲಯಗಳಲ್ಲಿ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದರು.
ಅದೇ ರೀತಿ ದೇಶಾದ್ಯಂತ ಚೆಕ್ಬೌನ್ಸ್ ಪ್ರಕರಣಗಳು ಹೆಚ್ಚಾಗಿರುವುದರಿಂದ ಈ ಸಂಬಂಧ ಜು.18 ಮತ್ತು ನ.27ರಂದು ಎನ್.ಐ. ಆಕ್ಟ್ ಕಲಂ 138 ಅಂದರೆ ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ಲೋಕ ಅದಾಲತ್ ನಡೆಯಲಿದೆ. ಜಿಲ್ಲೆಯಲ್ಲಿ 13,357 ಚೆಕ್ ಬೌನ್ಸ್ ಪ್ರಕರಣಗಳು ಬಾಕಿ ಇದೆ ಎಂದು ಮಾಹಿತಿ ನೀಡಿದರು.ಜು.11ರಂದು ರಾಷ್ಟ್ರೀಯ ಲೋಕ ಅದಾಲತ್: ಜು.11ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ನ್ಯಾಯಾಲಯ ಹಾಗೂ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದೆ. ಈ ಅದಾಲತ್ನಲ್ಲಿ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಕೊಳ್ಳಲು ಅವಕಾಶ ಇದೆ.
ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಇದ್ದರು.