ಚಿಕ್ಕಮಂಡ್ಯ ಪ್ರೌಢಶಾಲಾ ಮಕ್ಕಳಿಗೆ ಆಟೋ ವ್ಯವಸ್ಥೆ

KannadaprabhaNewsNetwork |  
Published : Jul 02, 2026, 01:30 AM IST
೧ಕೆಎಂಎನ್‌ಡಿ-೨ಮಂಡ್ಯ ತಾಲೂಕು ಸಾತನೂರು ಗ್ರಾಮದಲ್ಲಿ ಚಿಕ್ಕಮಂಡ್ಯ ಪ್ರೌಢಶಾಲೆಗೆ ವಿದ್ಯಾರ್ಥಿಗಳನ್ನು ಆಟೋದಲ್ಲಿ ಕರೆತರುವ ಕಾರ್ಯಕ್ರಮಕ್ಕೆ ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್ ಚಾಲನೆ ನೀಡಿದರು. | Kannada Prabha

ಸಾರಾಂಶ

ಸರ್ಕಾರಿ ಶಾಲೆಗಳನ್ನು ಉಳಿಸುವ ಧ್ಯೇಯದೊಂದಿಗೆ ಶಾಲೆಗೆ ಬರುವ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್ ಆಟೋ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಸರ್ಕಾರಿ ಶಾಲೆಗಳನ್ನು ಉಳಿಸುವ ಧ್ಯೇಯದೊಂದಿಗೆ ಶಾಲೆಗೆ ಬರುವ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್ ಆಟೋ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ತಾಲೂಕಿನ ಚಿಕ್ಕಮಂಡ್ಯ ಪ್ರೌಢಶಾಲೆಗೆ ಹತ್ತಿರದ ಗ್ರಾಮಗಳಿಂದ ವಿದ್ಯಾರ್ಥಿಗಳನ್ನು ಆಟೋ ಮೂಲಕ ಕರೆತರುವ ಕಾರ್ಯಕ್ರಮಕ್ಕೆ ಸಾತನೂರಿನಲ್ಲಿ ಚಾಲನೆ ನೀಡಿ ಮಾತನಾಡಿದರು. ಮುಂದಿನ ಹಂತದಲ್ಲಿ ಶಾಲೆಗೆ ಆಟೋ ಹಾಗೂ ಬಸ್ ವ್ಯವಸ್ಥೆಯನ್ನು ಮಾಡುವುದಾಗಿ ಭರವಸೆ ನೀಡಿದರು.

ಚಿಕ್ಕಮಂಡ್ಯದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಸುರಕ್ಷಿತ ಪ್ರಯಾಣ ಮತ್ತು ಶಾಲಾ ಹಾಜರಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಕಲ್ಪಿಸುವುದು ಅಗತ್ಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ, ದೂರದ ಊರುಗಳಿಂದ ಬರುವ ಮಕ್ಕಳಿಗೆ ಸಾರಿಗೆ ಸೌಲಭ್ಯದ ಕೊರತೆಯಿಂದಾಗಿ ತೊಂದರೆಯಾಗುತ್ತಿದೆ. ಮಂಡ್ಯ- ಯಡಿಯೂರು ಮುಖ್ಯ ರಸ್ತೆಗಳಲ್ಲಿ ಬೆಳಗಿನ ಶಾಲಾ ವೇಳೆಯಲ್ಲಿ ವಾಹನ ದಟ್ಟಣೆಯಿಂದ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಆತಂಕಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಮತ್ತು ಮಕ್ಕಳು ಸಮಯಕ್ಕೆ ಸರಿಯಾಗಿ ಶಾಲೆಗೆ ಬಂದು ಕಲಿಯುವಂತೆ ಪ್ರೇರೇಪಿಸಲು ಆಟೋ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಟ್ರಸ್ಟ್ ವತಿಯಿಂದ ಬಸ್ ವ್ಯವಸ್ಥೆ ಮಾಡಿಕೊಡುತ್ತೇನೆ. ಶಿಕ್ಷಣ ಪ್ರತಿಯೊಬ್ಬ ಮಗುವಿನ ಹಕ್ಕು. ಅದಕ್ಕೆ ಸಾರಿಗೆ ಅಡ್ಡಿಯಾಗಬಾರದು ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಎಚ್.ಎನ್.ದೇವರಾಜು ಮಾತನಾಡಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಕಡೆಗೆ ವಿನಯ್‌ಕುಮಾರ್ ಅವರು ತೋರಿರುವ ಈ ಕಾಳಜಿ ಶ್ಲಾಘನೀಯ. ಈಗ ವಿದ್ಯಾರ್ಥಿಗಳು ನಿರ್ಭೀತಿಯಿಂದ ಸಮಯಕ್ಕೆ ಸರಿಯಾಗಿ ಶಾಲೆಗೆ ಬರುತ್ತಿದ್ದಾರೆ. ಇದು ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಳ್ಳಲು ದೊಡ್ಡಮಟ್ಟದ ಉತ್ತೇಜನ ನೀಡಿದಂತಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸಿ.ಎಂ.ಮಹೇಶ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೌಗೋಳಿಕ ಸಂಪತ್ತು ಸದ್ಬಳಕೆ ಆದಾಗ ಮಾತ್ರವೇ ಅಭಿವೃದ್ಧಿ
ಕೆಪಿಟಿಸಿಎಲ್ ಖಾಸಗೀಕರಣ ಯತ್ನ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ರೈತ ಸಂಘ