ಮಾಸ್ಕ್‌ ಧರಿಸಿ ಮನೆಗಳಿಗೆ ಕನ್ನ: ಆಟೋ ಚಾಲಕ ಸೆರೆ

KannadaprabhaNewsNetwork |  
Published : Feb 10, 2026, 01:45 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ರೈಲ್ವೆ ಹಳಿಗಳ ಸಮೀಪ ಬೀಗ ಹಾಕಿದ ಮನೆಗಳಿಗೆ ಮಾಸ್ಕ್ ಧರಿಸಿ ಕನ್ನ ಹಾಕಿ ಲಕ್ಷಾಂತರು ರು. ಮೌಲ್ಯದ ಚಿನ್ನಾಭರಣ ದೋಚಿದ್ದ ಆಟೋ ಚಾಲಕನೊಬ್ಬ ಬೈಯಪ್ಪನಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

- ಆರೋಪಿಯಿಂದ 1.232 ಕೆಜಿ ಚಿನ್ನ ಬೈಕ್ ಸೇರಿ 1.84 ಕೋಟಿ ಮೌಲ್ಯದ ವಸ್ತು ಜಪ್ತಿ

- - -

ಬೆಂಗಳೂರು: ರೈಲ್ವೆ ಹಳಿಗಳ ಸಮೀಪ ಬೀಗ ಹಾಕಿದ ಮನೆಗಳಿಗೆ ಮಾಸ್ಕ್ ಧರಿಸಿ ಕನ್ನ ಹಾಕಿ ಲಕ್ಷಾಂತರು ರು. ಮೌಲ್ಯದ ಚಿನ್ನಾಭರಣ ದೋಚಿದ್ದ ಆಟೋ ಚಾಲಕನೊಬ್ಬ ಬೈಯಪ್ಪನಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.ಚಿಕ್ಕಬಾಣಾವರ ಸಮೀಪದ ಅಬ್ಬಿಗೆರೆ ನಿವಾಸಿ ಡಿ.ರಾಜ ಅಲಿಯಾಸ್ ಗೋವಾ ರಾಜ ಬಂಧಿತನಾಗಿದ್ದು, ಆರೋಪಿಯಿಂದ 1.232 ಕೆಜಿ ಚಿನ್ನಾಭರಣ ಹಾಗೂ ಬೈಕ್ ಸೇರಿದಂತೆ 1.84 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಎನ್‌ಜಿಎಫ್‌ ಲೇಔಟ್‌ನಲ್ಲಿ ಉದ್ಯಮಿ ಉದಯ್ ನಾಯ್ಕ್‌ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಕೊನೆಗೆ ರಾಜನನ್ನು ಬಂಧಿಸುವಲ್ಲಿ ಯಶಸ್ಸು ಕಂಡಿದ್ದಾರೆ.ಆಟೋ ರಾಜ ಈಗ ಗೋವಾ ರಾಜ!ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಬೆಳ್ಳೂಡಿ ಗ್ರಾಮದ ರಾಜ ಎಂಟನೇ ತರಗತಿ ನಂತರ ಶಾಲೆ ಬಿಟ್ಟಿದ್ದ. ಬಳಿಕ ದಾವಣಗೆರೆಯಲ್ಲಿ ಎರಡ್ಮೂರು ಟಿಟಿ ವಾಹನ ಇಟ್ಟುಕೊಂಡು ಟ್ರಾವೆಲ್ಸ್ ಏಜೆನ್ಸಿ ನಡೆಸಿ ಜೀವನ ಸಾಗಿಸುತ್ತಿದ್ದ. ಆದರೆ ಕೊರೋನಾ ಕಾಲದಲ್ಲಿ ಆತನಿಗೆ ಆರ್ಥಿಕ ನಷ್ಟವಾಗಿದೆ. ಇದರಿಂದ ಕಂಗಾಲಾದ ರಾಜ, ದಾವಣಗೆರೆ ತೊರೆದು ಬೆಂಗಳೂರಿಗೆ ಬಂದಿದ್ದ. ಆದರೆ ಆರಂಭದಲ್ಲಿ ಆಟೋ ಓಡಿಸುತ್ತಿದ್ದ ರಾಜ ಬಳಿಕ ಕಳ್ಳತನ ಕೃತ್ಯಕ್ಕೆ ಇಳಿದಿದ್ದಾನೆಹಗಲು ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ಮನೆಗಳಿಗೆ ಕನ್ನ ಹಾಕುತ್ತಿದ್ದ. ಅದರಲ್ಲೂ ರೈಲ್ವೆ ಹಳಿಗಳ ಸಮೀಪದ ಮನೆಗಳನ್ನು ಆತ ಟಾರ್ಗೆಟ್ ಮಾಡುತ್ತಿದ್ದ. ಪೊಲೀಸರಿಗೆ ಸುಳಿವು ಸಿಗದಂತೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೃತ್ಯ ಎಸಗುತ್ತಿದ್ದ. ಹೀಗೆ ಕಳ್ಳತನದಿಂದ ಸಂಪಾದಿಸಿದ ದುಡ್ಡಿನಲ್ಲಿ ಗೋವಾಕ್ಕೆ ತೆರಳಿ ಕ್ಯಾಸಿನೋದಲ್ಲಿ ಜೂಜಾಡಿ ಮೋಜು, ಮಸ್ತಿ ಮಾಡುತ್ತಿದ್ದ. ಹೀಗಾಗಿ ಆತನನ್ನು ಗೋವಾ ರಾಜ ಎಂದು ಸ್ನೇಹಿತರು ಕರೆಯುತ್ತಿದ್ದರು.ಕೆಲ ದಿನಗಳ ಹಿಂದೆ ಎನ್‌ಜಿಎಫ್‌ ಲೇಔಟ್‌ನಲ್ಲಿ ನೆಲೆಸಿರುವ ಉದ್ಯಮಿ ಉದಯ್ ಅವರು ತಮ್ಮ ಕುಟುಂಬ ಸಮೇತ ಹುಟ್ಟೂರು ಕುಂದಾಪುರಕ್ಕೆ ಹೋಗಿದ್ದ ವೇಳೆ ಅವರ ಮನೆಗೆ ಬೀಗ ಮುರಿದು ಲಕ್ಷಾಂತರ ರು ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಈ ಕೃತ್ಯದ ತನಿಖೆಗಿಳಿದ ಇನ್ಸ್‌ಪೆಕ್ಟರ್ ಪಿ.ಶಿವಕುಮಾರ್ ನೇತೃತ್ವದ ತಂಡವು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಮಾಸ್ಕ್ ಮ್ಯಾನ್‌ನನ್ನು ಬೆನ್ನತ್ತಿದ್ದಾಗ ರಾಜ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

- - -

(ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೋಟದ ಕಾರ್ಮಿಕರ ಮೇಲೆ ಚಿರತೆ ದಾಳಿ
ಕನ್ನಡ ಭಾಷಾ ನೀತಿಯ ಅನುಷ್ಠಾನಕ್ಕೆ ವಿಶೇಷ ಕ್ರಮ: ಡಿಸಿ ಪ್ರಭುಲಿಂಗ ಕವಳಿಕಟ್ಟಿ