ಆಟೋ ಚಾಲಕರು ಕನ್ನಡ ನಾಡು ನುಡಿಯ ರಕ್ಷಕರು

KannadaprabhaNewsNetwork |  
Published : Nov 21, 2025, 01:45 AM IST
 ಶ್ರೀ ವಿಘ್ನೇಶ್ವರ ಅಟೋ ಮಾಲಿಕರು ಮತ್ತು ಚಾಲಕರ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು. | Kannada Prabha

ಸಾರಾಂಶ

ರಾಜ್ಯದಲ್ಲಿನ ಪರಭಾಷಿಕರ ನಡುವೆ ಕೂಡ ಕನ್ನಡ ನಾಡು ನುಡಿಗೆ ಆಟೋ ಮಾಲಿಕರು ಮತ್ತು ಚಾಲಕರು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದ್ದು, ಭಾಷಾ ಸಂರಕ್ಷಣೆಯಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ ಎಂದು ಉದ್ಯಮಿ ಮಂಜುನಾಥ ರಾವ್ ಹೇಳಿದರು. ನಗರದ ರೈಲ್ವೆ ನಿಲ್ದಾಣ ರಸ್ತೆಯ ಶ್ರೀ ವಿಘ್ನೇಶ್ವರ ಅಟೋ ಮಾಲೀಕರು ಮತ್ತು ಚಾಲಕರ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ರಾಜ್ಯದಲ್ಲಿನ ಪರಭಾಷಿಕರ ನಡುವೆ ಕೂಡ ಕನ್ನಡ ನಾಡು ನುಡಿಗೆ ಆಟೋ ಮಾಲಿಕರು ಮತ್ತು ಚಾಲಕರು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದ್ದು, ಭಾಷಾ ಸಂರಕ್ಷಣೆಯಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ ಎಂದು ಉದ್ಯಮಿ ಮಂಜುನಾಥ ರಾವ್ ಹೇಳಿದರು. ನಗರದ ರೈಲ್ವೆ ನಿಲ್ದಾಣ ರಸ್ತೆಯ ಶ್ರೀ ವಿಘ್ನೇಶ್ವರ ಅಟೋ ಮಾಲೀಕರು ಮತ್ತು ಚಾಲಕರ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆಟೋ ಚಾಲಕರು ದಿನನಿತ್ಯ ನೂರಾರು ಪ್ರಯಾಣಿಕರೊಂದಿಗೆ ನಿಕಟ ಸಂಪರ್ಕ ಬೆಳೆಸುವ ಮೂಲಕ ಕನ್ನಡ ಬಳಕೆಯನ್ನು ಉತ್ತೇಜಿಸುತ್ತಿದ್ದು, ನಾಡು, ನುಡಿಯ ಹೋರಾಟಗಳಲ್ಲಿ ಕಾವಲು ಪಡೆಯ ಯೋಧರಂತೆ ನಿಂತಿದ್ದಾರೆ ಎಂದು ಶ್ಲಾಘಿಸಿದರು. ಅವಘಡಗಳು ಅಥವಾ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ ಮೊದಲು ಧಾವಿಸುವುದು ಇವರ ಸೇವಾಭಾವದ ಮತ್ತೊಂದು ಉದಾಹರಣೆ ಎಂದರು.ಕರವೇ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್ ಮಾತನಾಡಿ, ದಿವಂಗತ ನಟ ಶಂಕರ್‌ನಾಗ್ ಕರ್ನಾಟಕದ ಅಟೋ ಚಾಲಕರಿಗೆ ಇಂದಿಗೂ ಪ್ರೇರೇಪಕ ವ್ಯಕ್ತಿತ್ವವಾಗಿದ್ದಾರೆಂದು ನೆನಪಿಸಿದರು.ಕಾರ್ಯಕ್ರಮದ ಅಂಗವಾಗಿ ಶ್ರೀ ವಿಘ್ನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಸಲ್ಲಿಸಲಾಯಿತು. ದೇವಾಲಯ ಸಮಿತಿ ಅಧ್ಯಕ್ಷ ನಿಖಿಲ್, ಸುರೇಂದ್ರನಾಥ್, ರಮೇಶ್ ನಾಯ್ಡು, ಎ.ಪಿ. ಚಂದ್ರಪ್ಪ, ರಘು ಸೇರಿದಂತೆ ನೂರಾರು ಆಟೋ ಮಾಲೀಕರು ಮತ್ತು ಚಾಲಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ನಿಂದ ಅರ್ಹರಿಗೆ ಅನ್ಯಾಯ ಆಗಬಾರ್ದು: ಸಿಎಂ
ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ