ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ

KannadaprabhaNewsNetwork | Published : May 24, 2024 12:47 AM

ಸಾರಾಂಶ

ಹೊಸಕೋಟೆ: ನಗರದ ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಶ್ರದ್ಧಾಭಕ್ತಿಯಿಂದ ನೆರವೇರಿತು.

ಹೊಸಕೋಟೆ: ನಗರದ ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಶ್ರದ್ಧಾಭಕ್ತಿಯಿಂದ ನೆರವೇರಿತು.

ತಹಸೀಲ್ದಾರ್ ವಿಜಯ್ ಕುಮಾರ್, ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವದ ಕನ್ವಿನರ್ ಕೇಶವಮೂರ್ತಿ ಅವರ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ರಥಕ್ಕೆ ಪೂಜೆ ಸಲ್ಲಿಸಿ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಅವಿಮುಕ್ತೇಶ್ವರ ಸ್ವಾಮಿ ಹೊಸಕೋಟೆ ಜನರ ಕಷ್ಟಗಳ ನಿವಾರಣೆ ಆರಾಧ್ಯ ದೈವವಾಗಿದ್ದು, ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಿದರೆ ಮನಸ್ಸಿಗೆ ನೆಮ್ಮದಿ ಜೊತೆಗೆ ಕಷ್ಟಗಳು ದೂರಾಗುತ್ತವೆ ಎಂಬುದು ಪ್ರತೀತಿ. ಲೋಕ ಕಲ್ಯಾಣಾರ್ಥ ದೇವರಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿದ್ದೇನೆ.

ಅವಿಮುಕ್ತೇಶ್ವರ ಸಕಲ ಜೀವರಾಶಿಗಳಿಗೂ ಒಳಿತನ್ನು ಮಾಡಲಿ ಎಂದರು. ರಥೋತ್ಸವಕ್ಕೆ ಪ್ರತಿ ವರ್ಷದಂತೆ ಈ ವರ್ಷ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಬಾಳೆಹಣ್ಣು ಎಸೆದು ಹರಕೆ ತೀರಿಸಿದರು.

ಕಲಾತಂಡಗಳ ಮೆರುಗು:

ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವದ ಪ್ರಯುಕ್ತ ಡೊಳ್ಳು ಕುಣಿತ, ವೀರಗಾಸೆ, ಪೂಜಾ ಕುಣಿತ, ಕೇರಳದ ಚಂಡೆವಾದ್ಯ ಸೇರಿದಂತೆ ಇತರೆ ಕಲಾತಂಡಗಳು ಮೆರಗು ನೀಡಿದವು. ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಮಿತಿ ಸಂಚಾಲಕ ಕೇಶವಮೂರ್ತಿ, ಕಾರ್ಯದರ್ಶಿ ಗಾಯತ್ರಿ ವಿಜಯಕುಮಾರ್, ಸದಸ್ಯರಾದ ಎನ್.ಮುನಿರಾಜ್, ರಮೇಶ್ ಬಾಬು, ಸುನಿಲ್ ಕುಮಾರ್, ಗೋಪಾಲ್, ಶಾಂತಕುಮಾರ್, ಶಿವಾಜಿರಾವ್, ಉದಯ್ ಕುಮಾರ್, ಗೌತಮ್, ನವಾಜ್ ಇತರರಿದ್ದರು.ಫೋಟೋ: 23 ಹೆಚ್‌ಎಸ್‌ಕೆ 1,

ಹೊಸಕೋಟೆಯಲ್ಲಿ ಇತಿಹಾಸ ಪ್ರಸಿದ್ದ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.( ಈ ಫೋಟೊವನ್ನು ಪ್ಯಾನಲ್‌ನಲ್ಲಿ ಬಳಸಿ)

ಫೋಟೋ: 23 ಹೆಚ್‌ಎಸ್‌ಕೆ 3

ಹೊಸಕೋಟೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಸಂಸದ ಬಚ್ಚೇಗೌಡ, ಶಾಸಕ ಶರತ್ ಬಚ್ಚೇಗೌಡ ಕುಟುಂಬ ಸಮೇತ ಆಗಮಿಸಿ ಅವಿಮುಕ್ತೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ರಾಜಕೀಯ ಮುಖಂಡರು ಹಾಜರಿದ್ದರು.

Share this article