ಗದಗ: ಪ್ಲಾಸ್ಟಿಕ್ ಚೀಲ ತ್ಯಜಿಸಿ, ಕಾಗದದ ಚೀಲ ಬಳಸಿ ಪರಿಸರ ಉಳಿಸಬೇಕೆಂದು ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ನಾಗರತ್ನ ಮಾರನಬಸರಿ ಹೇಳಿದರು.
ಡಾ.ಹನುಮಂತಗೌಡ ಕಲ್ಮನಿ ಮಾತನಾಡಿ, ಅತಿಯಾದ ಪ್ಲಾಸ್ಟಿಕ್ ಚೀಲದ ಹಾಗೂ ಪ್ಲಾಸ್ಟಿಕ್ ಉತ್ಪನ್ನ ಉಪೆಯೋಗಿಸುವುದರಿಂದ ಪರಿಸರಕ್ಕೆ ತೀವ್ರವಾದ ಹಾನಿಯಾಗುತ್ತಿದೆ. ವಿಶ್ವಾದ್ಯಂತ ಪ್ಲಾಸ್ಟಿಕ್ ದುರಂತವು ಇತ್ತೀಚೆಗೆ ಹೆಚ್ಚಿನ ಗಮನ ಪಡೆದುಕೊಂಡಿದೆ. ಪ್ರಾಣಿಗಳ ಜೀವನ, ಮಾನವ ಆರೋಗ್ಯ ಮತ್ತು ನಮ್ಮ ಪರಿಸರ ವ್ಯವಸ್ಥೆಗಳ ಮೇಲೆ ಪ್ಲಾಸ್ಟಿಕ್ ಮಾಲಿನ್ಯದಿಂದ ಗಂಭೀರವಾದ ದುಷ್ಪರಿಣಾಮ ಬೀರಿದೆ. ಪ್ಲಾಸ್ಟಿಕ್ ಚೀಲಗಳು ಮತ್ತು ಇತರೆ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಈ ತೊಂದರೆಗೆ ಪ್ರಮುಖ ಕಾರಣವಾಗಿದೆ. ಪೇಪರ್ ಬ್ಯಾಗ ಉಪಯೋಗಿಸಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ತ್ಯಜಿಸುವುದು ಪರಸರ ಸ್ನೇಹಿ ಕಾರ್ಯವಾಗಿದೆ ಎಂದರು.
ಈ ವೇಳೆ ಕ್ಲಬ್ ಕಾರ್ಯದರ್ಶಿ ವೀಣಾ ತಿರ್ಲಾಪುರ, ಪುಷ್ಪಾ ಭಂಡಾರಿ, ಪೂಜಾ ಭೂಮಾ, ಸುಮಾ ಪಾಟೀಲ್, ಶೀವಲೀಲಾ ಅಕ್ಕಿ, ಪುಷ್ಪಾ ಕೊರವಣ್ಣನವರ, ಕಮಲಾ ಜಂಬಗಿ ಹಾಗೂ ರೇಣುಕಾ ಅಮಾತ್ಯ ಇದ್ದರು.