ಕನ್ನಡಪ್ರಭ ವಾರ್ತೆ ಗೌರಿಬಿದನೂರು
ರೈತರಿಗೆ ಅನ್ಯಾಯ:
ತೊಗರಿ ಖರೀದಿ ಮಾಡುವ ನಗರದ ಮಿಲ್ಗೆ ತೊಗರಿ ಬೆಳೆ ನೀಡಿದಾಗ ಶೇ 35ರಷ್ಟು ಕಡಿತ ಮಾಡಲಾಗುತ್ತಿದೆ. ಬೇಳೆ ಹಿಂತಿರುಗಿಸುವಾಗ 3ನೇ ದರ್ಜೆಯ ಬೇಳೆ ನೀಡಲಾಗುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಇದರ ನಿಗ್ರಹಕ್ಕಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು. ಮಾರುಕಟ್ಟೆಯ ಮುಂಭಾಗದಲ್ಲಿ ಸುಂಕ ವಸೂಲಿ ಮಾಡುವ ಬಗ್ಗೆ ಯಾವುದೇ ನಾಮಫಲಕ ಅಳವಡಿಸಿಲ್ಲ. ಇದರಿಂದ ರೈತರನ್ನು ದಲ್ಲಾಳಿಗಳು ವಂಚಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.ಮಧ್ಯವರ್ತಿಗಳ ಕಾರುಬಾರು
ಮಾರುಕಟ್ಟೆ ಪ್ರತಿ ಭಾನುವಾರ ಆವರಣದಲ್ಲಿ ಜಾನುವಾರುಗಳ ವ್ಯಾಪಾರ ಇಲ್ಲಿ ನಡೆಯುತ್ತದೆ. ಆದರೆ, ನೀರಿನ ವ್ಯವಸ್ಥೆ ಇಲ್ಲ. ಮಾರುಕಟ್ಟೆಯ ವ್ಯವಹಾರಗಳು ದಲ್ಲಾಳಿಗಳ ಮೂಲಕವೇ ನಡೆಯುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ನಂತರ ಬೇಡಿಕೆಗಳ ಮನವಿ ಪತ್ರವನ್ನು ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿ ಮಂಜುನಾಥ್ ರವರಿಗೆ ಮನವಿ ಪತ್ರಿ ಸಲ್ಲಿಸಿದರು. ಈ ವೇಳೆ ತಾಲೂಕು ಸಂಚಾಲಕ ರವೀಂದ್ರರೆಡ್ಡಿ, ನಾಗಭೂಷಣ್ ರೆಡ್ಡಿ, ಮಂಜುನಾಥ್, ಅಂಜನ್ ರೆಡ್ಡಿ, ಗಂಗರಾಜು, ನಂಜುಂಡಪ್ಪ, ಲಕ್ಷ್ಮೀನಾರಾಯಣರೆಡ್ಡಿ, ಶಾನ್ವಾಜ್ ಭಾಷಾ ಪಾಲ್ಗೊಂಡಿದ್ದರು.ಫೋಟೋ...ಗೌರಿಬಿದನೂರು ಎಪಿಎಂಸಿ